AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ವರ್ಷಗಳ ಬಳಿಕ ಛೋಟಾ ರಾಜನ್​ ಗ್ಯಾಂಗ್​ನ ಪ್ರಸಾದ್ ಪೂಜಾರಿಯನ್ನು ಗಡಿಪಾರು ಮಾಡಿದ ಚೀನಾ

ಒಂದು ಕಾಲದಲ್ಲಿ ಛೋಟಾ ರಾಜನ್ ಗ್ಯಾಂಗ್‌ಗೆ ಸಹಾಯಕನಾಗಿ ಕೆಲಸ ಮಾಡಿದ್ದ ಗ್ಯಾಂಗ್‌ಸ್ಟರ್ ಪ್ರಸಾದ್ ಪೂಜಾರಿಯನ್ನು 20 ವರ್ಷಗಳ ನಂತರ ಚೀನಾದಿಂದ ಮುಂಬೈಗೆ ಗಡೀಪಾರು ಮಾಡಲಾಯಿತು. ಮುಂಬೈ ಪೊಲೀಸರು ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆತನನ್ನು ವಿಚಾರಣೆ ನಡೆಸಲಿದ್ದಾರೆ.

20 ವರ್ಷಗಳ ಬಳಿಕ ಛೋಟಾ ರಾಜನ್​ ಗ್ಯಾಂಗ್​ನ ಪ್ರಸಾದ್ ಪೂಜಾರಿಯನ್ನು ಗಡಿಪಾರು ಮಾಡಿದ ಚೀನಾ
ಪ್ರಸಾದ್ ಪೂಜಾರಿ
ನಯನಾ ರಾಜೀವ್
|

Updated on: Mar 24, 2024 | 8:20 AM

Share

ಭೂಗತ ಪಾತಕಿ ಛೋಟಾ ರಾಜನ್(Chhota Rajan) ಆಪ್ತ ಪ್ರಸಾದ್​ ಪೂಜಾರಿಯನ್ನು 20 ವರ್ಷಗಳ ಬಳಿಕ ಚೀನಾವು ಮುಂಬೈಗೆ ಗಡಿಪಾರು ಮಾಡಿದೆ. ಪ್ರಸಾದ್ ಪೂಜಾರಿ ಅಲಿಯಾಸ್ ಸುಭಾಷ್ ವಿಠ್ಠಲ್ ನನ್ನು ಚೀನಾದಿಂದ ಮುಂಬೈಗೆ ಗಡಿಪಾರು ಮಾಡುವುದನ್ನು ಮುಂಬೈ ಪೊಲೀಸ್ ತಂಡ ಶನಿವಾರ ಖಚಿತಪಡಿಸಿದ್ದು, ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆತನನ್ನು ವಿಚಾರಣೆ ನಡೆಸಲಿದೆ. ಈತ ಛೋಟಾ ರಾಜನ್ ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿದ್ದು, ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಪೂಜಾರಿ (44) ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಪತ್ನಿಯೊಂದಿಗೆ ಚೀನಾದಲ್ಲಿ ನೆಲೆಸಿದ್ದ. ಕ್ರೈಂ ಬ್ರಾಂಚ್ ಮತ್ತು ಆಂಟಿ-ಎಕ್ಸ್‌ಟಾರ್ಶನ್ ಸೆಲ್ (ಎಇಸಿ) ಕೆಲವು ವರ್ಷಗಳಿಂದ ಆತನ ಜಾಡು ಹಿಡಿದಿತ್ತು. ಮೂಲತಃ ಕರ್ನಾಟಕದ ಉಡುಪಿಯವನಾದ ಪೂಜಾರಿ ನವಿ ಮುಂಬೈನ ವಾಶಿ ಮತ್ತು ಮುಂಬೈನ ವಿಕ್ರೋಲಿಯಲ್ಲಿ ಆತನ ಪೋಷಕರು ಮತ್ತು ಇತರ ಕುಟುಂಬ ಸದಸ್ಯರೊಂದಿಗೆ ವಾಸಿಸುತ್ತಿದ್ದರು.

ಪೂಜಾರಿಯು ಆರಂಭದಲ್ಲಿ ಕುಮಾರ್ ಪಿಳ್ಳೈ ಗ್ಯಾಂಗ್‌ನೊಂದಿಗೆ ಕೆಲಸ ಮಾಡಲು ಪ್ರಾರಂಭಿಸಿದ್ದ, ನಂತರ ತನ್ನ ಸ್ವಂತ ಗ್ಯಾಂಗ್ ಅನ್ನು ಪ್ರಾರಂಭಿಸುವ ಮೊದಲು ಛೋಟಾ ರಾಜನ್‌ನ ಗ್ಯಾಂಗ್‌ಗೆ ಸೇರಿಕೊಂಡಿದ್ದ.

ಮತ್ತಷ್ಟು ಓದಿ: Chhota Rajan: ಭೂಗತ ಪಾತಕಿ ಛೋಟಾ ರಾಜನ್​ ಏಮ್ಸ್​​ಗೆ ದಾಖಲು; ಜಾಮೀನು ನೀಡಬೇಡಿ ಎಂದು ಸಿಬಿಐನಿಂದ ಅರ್ಜಿ

ಪೂಜಾರಿ ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದಾನೆ, ನಮ್ಮ ತಂಡವು ಅವನನ್ನು ಬಂಧಿಸಿ ಗಡೀಪಾರು ಮಾಡುವ ಮೂಲಕ ಬೆಳಗ್ಗೆ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತಂದರು ಎಂದು ಪೊಲೀಸರು ತಿಳಿಸಿದ್ದಾರೆ. ಆತ 2005ರಲ್ಲಿ ಭಾರತವನ್ನು ತೊರೆದಿದ್ದ, ಆತನ ವಿರುದ್ಧ ರೆಡ್ ಕಾರ್ನರ್ ನೋಟಿಸ್ ನೀಡಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್