AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಹಾರ್​ ಜೈಲು ಸೇರಿ 9 ವರ್ಷಗಳ ಬಳಿಕ ಹೊರಬಿತ್ತು ಭೂಗತ ಪಾತಕಿ ಛೋಟಾ ರಾಜನ್​ ಚಿತ್ರ

ಛೋಟಾ ರಾಜನ್ ಸಾವಿನ ಬಗ್ಗೆ ಊಹಾಪೋಹಗಳು ಹರಿದಾಡುತ್ತಿರುವಾಗಲೇ ಫೋಟೊ ಹೊರಬಿದ್ದಿದೆ. ಛೋಟಾ ರಾಜನ್ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂಬ ಊಹಾಪೋಹಗಳು ಹಬ್ಬಿದ್ದವು. ದಾವೂದ್ ಇಬ್ರಾಹಿಂನ ಶತ್ರು ಛೋಟಾ ರಾಜನ್ 2015 ರಿಂದ ತಿಹಾರ್ ಜೈಲು ನಂಬರ್ 2 ನಲ್ಲಿದ್ದಾನೆ. ಈ ಜೈಲು ಅತ್ಯಂತ ಹೆಚ್ಚಿನ ಭದ್ರತೆಯನ್ನು ಹೊಂದಿದೆ

ತಿಹಾರ್​ ಜೈಲು ಸೇರಿ 9 ವರ್ಷಗಳ ಬಳಿಕ ಹೊರಬಿತ್ತು ಭೂಗತ ಪಾತಕಿ ಛೋಟಾ ರಾಜನ್​ ಚಿತ್ರ
ಛೋಟಾ ರಾಜನ್
ನಯನಾ ರಾಜೀವ್
|

Updated on: Apr 22, 2024 | 2:41 PM

Share

ದೆಹಲಿಯ ತಿಹಾರ್ ಜೈಲಿ ಪಾಲಾಗಿ 9 ವರ್ಷಗಳ ಬಳಿಕ ಮೊದಲ ಬಾರಿಗೆ ಭೂಗತ ಪಾತಕಿ ಛೋಟಾ ರಾಜನ್(Chhota Rajan) ಚಿತ್ರ ಹೊರಬಿದ್ದಿದೆ. ಈ ಚಿತ್ರಗಳಲ್ಲಿ ಛೋಟಾ ರಾಜನ್ ಸಂಪೂರ್ಣವಾಗಿ ಆರೋಗ್ಯವಂತನಾಗಿ ಕಾಣುತ್ತಾನೆ. ಕಳೆದ 9 ವರ್ಷಗಳಲ್ಲಿ ಛೋಟಾ ರಾಜನ್ ಅವರ ಇತ್ತೀಚಿನ ಚಿತ್ರಗಳಾಗಿವೆ. ಛೋಟಾ ರಾಜನ್ ಸಾವಿನ ಬಗ್ಗೆ ಊಹಾಪೋಹಗಳು ಹರಿದಾಡುತ್ತಿರುವಾಗಲೇ ಈ ಫೋಟೋ ಹೊರ ಬಿದ್ದಿದೆ. ಛೋಟಾ ರಾಜನ್ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎನ್ನುವ ಗುಸುಗುಸು ಹಬ್ಬಿತ್ತು.

ದಾವೂದ್ ಇಬ್ರಾಹಿಂನ ಶತ್ರು ಛೋಟಾ ರಾಜನ್ 2015 ರಿಂದ ತಿಹಾರ್ ಜೈಲು ನಂಬರ್ 2 ನಲ್ಲಿದ್ದಾನೆ. ಈ ಜೈಲು ಅತ್ಯಂತ ಹೆಚ್ಚಿನ ಭದ್ರತೆಯನ್ನು ಹೊಂದಿದೆ.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಛೋಟಾ ರಾಜನ್ ಅವರ ಫೋಟೋ 2021 ರದ್ದಾಗಿದೆ. ಏಪ್ರಿಲ್ 2021 ರಲ್ಲಿ, ಛೋಟಾ ರಾಜನ್​ಗೆ ಕರೊನಾ ಪಾಸಿಟಿವ್  ಆಗಿತ್ತು, ಹಾಗೂ ದೆಹಲಿಯಲ್ಲಿರುವ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಗೆ ದಾಖಲಾಗಿದ್ದರು.

ಮೊಹಮ್ಮದ್ ಶಹಾಬುದ್ದೀನ್ ಸಾವಿನ ನಂತರ, ಛೋಟಾ ರಾಜನ್ ಕೊರೊನಾ ವೈರಸ್‌ನಿಂದ ಸಾವನ್ನಪ್ಪಿದ್ದಾರೆ ಎಂಬ ಊಹಾಪೋಹಗಳು ಎದ್ದಿದ್ದವು. ಆದಾಗ್ಯೂ, ಈ ಬಗ್ಗೆ ಅಧಿಕೃತವಾಗಿ ಯಾವ ವರದಿಯೂ ಇರಲಿಲ್ಲ ಇದೀಗ ಛೋಟಾ ರಾಜನ್ ಅವರ ಇತ್ತೀಚಿನ ಚಿತ್ರವು ಅವರ ಸಾವಿನ ಸುದ್ದಿ ನಿಜವಲ್ಲ ಎಂದು ಸ್ಪಷ್ಟಪಡಿಸಿದೆ.

ಮತ್ತಷ್ಟು ಓದಿ: 20 ವರ್ಷಗಳ ಬಳಿಕ ಛೋಟಾ ರಾಜನ್​ ಗ್ಯಾಂಗ್​ನ ಪ್ರಸಾದ್ ಪೂಜಾರಿಯನ್ನು ಗಡಿಪಾರು ಮಾಡಿದ ಚೀನಾ

ಛೋಟಾ ರಾಜನ್ ಮತ್ತು ದಾವೂದ್ ಇಬ್ರಾಹಿಂ ಏಕೆ ಬೇರೆಯಾದರು? ಛೋಟಾ ರಾಜನ್ ಮತ್ತು ದಾವೂದ್ ಇಬ್ರಾಹಿಂ 1993 ರಲ್ಲಿ ಬೇರ್ಪಟ್ಟರು. 1993ರ ಮುಂಬೈ ಸ್ಫೋಟಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳಿದ್ದವು. ಒಂದು ವರ್ಷದ ನಂತರ, ಅಂದರೆ 1994 ರಲ್ಲಿ, ಛೋಟಾ ರಾಜನ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹೊರಡಿಸಲಾಯಿತು. ಇದರ ನಂತರ, ರಾಜನ್ ತನ್ನ ಡಿ ಕಂಪನಿ ವಿರುದ್ಧ ತನಿಖಾ ಸಂಸ್ಥೆಗೆ ಸಹಾಯ ಮಾಡುತ್ತಿದ್ದಾನೆ ಎಂಬ ಊಹಾಪೋಹಗಳು ಪ್ರಾರಂಭವಾದವು.

ಛೋಟಾ ರಾಜನ್ ಬಂಧನ ಹೇಗೆ? ಛೋಟಾ ರಾಜನ್ 2015 ರಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ಬಂಧಿಸಲಾಯಿತು, ಅವರು ಆಸ್ಟ್ರೇಲಿಯಾದ ಸಿಡ್ನಿಯಿಂದ ಬಂದಿದ್ದ. ರಾಜನ್ ಮೋಹನ್ ಕುಮಾರ್ ಹೆಸರಿನಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸಿಕೊಂಡಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!