AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಹಾರ್​ ಜೈಲು ಸೇರಿ 9 ವರ್ಷಗಳ ಬಳಿಕ ಹೊರಬಿತ್ತು ಭೂಗತ ಪಾತಕಿ ಛೋಟಾ ರಾಜನ್​ ಚಿತ್ರ

ಛೋಟಾ ರಾಜನ್ ಸಾವಿನ ಬಗ್ಗೆ ಊಹಾಪೋಹಗಳು ಹರಿದಾಡುತ್ತಿರುವಾಗಲೇ ಫೋಟೊ ಹೊರಬಿದ್ದಿದೆ. ಛೋಟಾ ರಾಜನ್ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂಬ ಊಹಾಪೋಹಗಳು ಹಬ್ಬಿದ್ದವು. ದಾವೂದ್ ಇಬ್ರಾಹಿಂನ ಶತ್ರು ಛೋಟಾ ರಾಜನ್ 2015 ರಿಂದ ತಿಹಾರ್ ಜೈಲು ನಂಬರ್ 2 ನಲ್ಲಿದ್ದಾನೆ. ಈ ಜೈಲು ಅತ್ಯಂತ ಹೆಚ್ಚಿನ ಭದ್ರತೆಯನ್ನು ಹೊಂದಿದೆ

ತಿಹಾರ್​ ಜೈಲು ಸೇರಿ 9 ವರ್ಷಗಳ ಬಳಿಕ ಹೊರಬಿತ್ತು ಭೂಗತ ಪಾತಕಿ ಛೋಟಾ ರಾಜನ್​ ಚಿತ್ರ
ಛೋಟಾ ರಾಜನ್
ನಯನಾ ರಾಜೀವ್
|

Updated on: Apr 22, 2024 | 2:41 PM

Share

ದೆಹಲಿಯ ತಿಹಾರ್ ಜೈಲಿ ಪಾಲಾಗಿ 9 ವರ್ಷಗಳ ಬಳಿಕ ಮೊದಲ ಬಾರಿಗೆ ಭೂಗತ ಪಾತಕಿ ಛೋಟಾ ರಾಜನ್(Chhota Rajan) ಚಿತ್ರ ಹೊರಬಿದ್ದಿದೆ. ಈ ಚಿತ್ರಗಳಲ್ಲಿ ಛೋಟಾ ರಾಜನ್ ಸಂಪೂರ್ಣವಾಗಿ ಆರೋಗ್ಯವಂತನಾಗಿ ಕಾಣುತ್ತಾನೆ. ಕಳೆದ 9 ವರ್ಷಗಳಲ್ಲಿ ಛೋಟಾ ರಾಜನ್ ಅವರ ಇತ್ತೀಚಿನ ಚಿತ್ರಗಳಾಗಿವೆ. ಛೋಟಾ ರಾಜನ್ ಸಾವಿನ ಬಗ್ಗೆ ಊಹಾಪೋಹಗಳು ಹರಿದಾಡುತ್ತಿರುವಾಗಲೇ ಈ ಫೋಟೋ ಹೊರ ಬಿದ್ದಿದೆ. ಛೋಟಾ ರಾಜನ್ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎನ್ನುವ ಗುಸುಗುಸು ಹಬ್ಬಿತ್ತು.

ದಾವೂದ್ ಇಬ್ರಾಹಿಂನ ಶತ್ರು ಛೋಟಾ ರಾಜನ್ 2015 ರಿಂದ ತಿಹಾರ್ ಜೈಲು ನಂಬರ್ 2 ನಲ್ಲಿದ್ದಾನೆ. ಈ ಜೈಲು ಅತ್ಯಂತ ಹೆಚ್ಚಿನ ಭದ್ರತೆಯನ್ನು ಹೊಂದಿದೆ.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಛೋಟಾ ರಾಜನ್ ಅವರ ಫೋಟೋ 2021 ರದ್ದಾಗಿದೆ. ಏಪ್ರಿಲ್ 2021 ರಲ್ಲಿ, ಛೋಟಾ ರಾಜನ್​ಗೆ ಕರೊನಾ ಪಾಸಿಟಿವ್  ಆಗಿತ್ತು, ಹಾಗೂ ದೆಹಲಿಯಲ್ಲಿರುವ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಗೆ ದಾಖಲಾಗಿದ್ದರು.

ಮೊಹಮ್ಮದ್ ಶಹಾಬುದ್ದೀನ್ ಸಾವಿನ ನಂತರ, ಛೋಟಾ ರಾಜನ್ ಕೊರೊನಾ ವೈರಸ್‌ನಿಂದ ಸಾವನ್ನಪ್ಪಿದ್ದಾರೆ ಎಂಬ ಊಹಾಪೋಹಗಳು ಎದ್ದಿದ್ದವು. ಆದಾಗ್ಯೂ, ಈ ಬಗ್ಗೆ ಅಧಿಕೃತವಾಗಿ ಯಾವ ವರದಿಯೂ ಇರಲಿಲ್ಲ ಇದೀಗ ಛೋಟಾ ರಾಜನ್ ಅವರ ಇತ್ತೀಚಿನ ಚಿತ್ರವು ಅವರ ಸಾವಿನ ಸುದ್ದಿ ನಿಜವಲ್ಲ ಎಂದು ಸ್ಪಷ್ಟಪಡಿಸಿದೆ.

ಮತ್ತಷ್ಟು ಓದಿ: 20 ವರ್ಷಗಳ ಬಳಿಕ ಛೋಟಾ ರಾಜನ್​ ಗ್ಯಾಂಗ್​ನ ಪ್ರಸಾದ್ ಪೂಜಾರಿಯನ್ನು ಗಡಿಪಾರು ಮಾಡಿದ ಚೀನಾ

ಛೋಟಾ ರಾಜನ್ ಮತ್ತು ದಾವೂದ್ ಇಬ್ರಾಹಿಂ ಏಕೆ ಬೇರೆಯಾದರು? ಛೋಟಾ ರಾಜನ್ ಮತ್ತು ದಾವೂದ್ ಇಬ್ರಾಹಿಂ 1993 ರಲ್ಲಿ ಬೇರ್ಪಟ್ಟರು. 1993ರ ಮುಂಬೈ ಸ್ಫೋಟಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳಿದ್ದವು. ಒಂದು ವರ್ಷದ ನಂತರ, ಅಂದರೆ 1994 ರಲ್ಲಿ, ಛೋಟಾ ರಾಜನ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹೊರಡಿಸಲಾಯಿತು. ಇದರ ನಂತರ, ರಾಜನ್ ತನ್ನ ಡಿ ಕಂಪನಿ ವಿರುದ್ಧ ತನಿಖಾ ಸಂಸ್ಥೆಗೆ ಸಹಾಯ ಮಾಡುತ್ತಿದ್ದಾನೆ ಎಂಬ ಊಹಾಪೋಹಗಳು ಪ್ರಾರಂಭವಾದವು.

ಛೋಟಾ ರಾಜನ್ ಬಂಧನ ಹೇಗೆ? ಛೋಟಾ ರಾಜನ್ 2015 ರಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ಬಂಧಿಸಲಾಯಿತು, ಅವರು ಆಸ್ಟ್ರೇಲಿಯಾದ ಸಿಡ್ನಿಯಿಂದ ಬಂದಿದ್ದ. ರಾಜನ್ ಮೋಹನ್ ಕುಮಾರ್ ಹೆಸರಿನಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸಿಕೊಂಡಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ