AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಟ್ನಾದ ಶ್ರೀಹರಿ ಮಂದಿರ ಸಾಹೀಬ್​​ನ ಮುಖ್ಯ ಗ್ರಂಥಿ ಭಾಯಿ ರಾಜೇಂದ್ರ ಸಿಂಗ್ ನಿಗೂಢ ಸಾವು; ಸೂಕ್ತ ತನಿಖೆಗೆ ಆಗ್ರಹ

ಬೇರೆ ಕೆಲವು ಸಮಸ್ಯೆಗಳಿಂದ ಬಳಲುತ್ತಿದ್ದ ಭಾಯಿ ರಾಜೇಂದ್ರ ಸಿಂಗ್​ರನ್ನು ಜನವರಿ 13ರಂದು ಪಾಟ್ನಾದ ಪಿಎಂಸಿಎಚ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಂದಿನಿಂದಲೂ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರು, ಭಾನುವಾರ ರಾತ್ರಿ 2.45ರ ಹೊತ್ತಿಗೆ ಮೃತಪಟ್ಟಿದ್ದಾರೆ.

ಪಾಟ್ನಾದ ಶ್ರೀಹರಿ ಮಂದಿರ ಸಾಹೀಬ್​​ನ ಮುಖ್ಯ ಗ್ರಂಥಿ ಭಾಯಿ ರಾಜೇಂದ್ರ ಸಿಂಗ್ ನಿಗೂಢ ಸಾವು; ಸೂಕ್ತ ತನಿಖೆಗೆ ಆಗ್ರಹ
ಭಾಯಿ ರಾಜೇಂದ್ರ ಸಿಂಗ್​
TV9 Web
| Edited By: |

Updated on: Jan 17, 2022 | 3:36 PM

Share

ಬಿಹಾರದ ಪಾಟ್ನಾ ಸಾಹೀಬ್​ ಗುರುದ್ವಾರದ ಶ್ರಿಹರಿ ಮಂದಿರ ಸಾಹೀಬ್​​ನ ಮುಖ್ಯ ಗ್ರಂಥಿ ಭಾಯಿ ರಾಜೇಂದ್ರ ಸಿಂಗ್​ ಇಂದು ನಿಧನರಾದರು. ಆದರೆ ಅವರ ಸಾವು ನಿಗೂಢವಾಗಿದೆ. ಅವರ ಕುತ್ತಿಗೆಯ ಮೇಲೆ ಸಣ್ಣ ಚಾಕುವಿನಿಂದ ಮಾಡಲಾದ ಗಾಯದ ಗುರುತಿದ್ದು, ಅದರಿಂದ ರಕ್ತಸ್ರಾವ ಆಗಿದೆ. ಹೀಗಾಗಿ ಅವರು ಸಹಜವಾಗಿ ಸತ್ತಿಲ್ಲ ಎಂಬುದು ಸ್ಪಷ್ಟವಾಗಿದ್ದರೂ, ಅವರನ್ನು ಯಾರಾದರೂ ಕೊಲೆ ಮಾಡಿದರಾ? ಅಥವಾ ರಾಜೇಂದ್ರ ಸಿಂಗ್​ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡರಾ? ಎಂಬುದಿನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ಪ್ರಾರಂಭಿಸಿದ್ದಾರೆ. 

ಬೇರೆ ಕೆಲವು ಸಮಸ್ಯೆಗಳಿಂದ ಬಳಲುತ್ತಿದ್ದ ಭಾಯಿ ರಾಜೇಂದ್ರ ಸಿಂಗ್​ರನ್ನು ಜನವರಿ 13ರಂದು ಪಾಟ್ನಾದ ಪಿಎಂಸಿಎಚ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಂದಿನಿಂದಲೂ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರು, ಭಾನುವಾರ ರಾತ್ರಿ 2.45ರ ಹೊತ್ತಿಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ರಾಜೇಂದ್ರ ಸಿಂಗ್ ಪುತ್ರ ದಯಾ ಸಿಂಗ್​, ನನ್ನ ತಂದೆಯವರ ಆರೋಗ್ಯ ಹದಗೆಟ್ಟಿತ್ತು. ಆದರೆ ಚಿಕಿತ್ಸೆಯ ಬಳಿಕ ತುಂಬ ಸುಧಾರಣೆಯಾಗಿತ್ತು. ಆದರೆ ನಿನ್ನೆ ಅವರ ಒಮ್ಮೆಲೇ ಉಸಿರಾಡಲು ಕಷ್ಟಪಟ್ಟರು. ವೈದ್ಯರನ್ನು ಕರೆಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಅವರ ಕುತ್ತಿಗೆಯ ಮೇಲೆ ಚಿಕ್ಕ ಚಾಕುವಿನಿಂದ ಹೊಡೆದ ಗುರುತು ಇದೆ. ಮೃತದೇಹದ ಪೋಸ್ಟ್​ಮಾರ್ಟಮ್​ ಆದ ಬಳಿಕವಷ್ಟೇ ಸತ್ಯ ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ.

ಗುರುದ್ವಾರದ ಮುಖ್ಯಗ್ರಂಥಿ ಭಾಯಿ ರಾಜೇಂದ್ರ ಸಿಂಗ್​  ಸಾವಿಗೆ ವ್ಯವಸ್ಥಾಪನಾ ಸಮಿತಿ  ಅಧ್ಯಕ್ಷ ಅವತಾರ್ ಸಿಂಗ್, ಪ್ರಧಾನ ಕಾರ್ಯದರ್ಶಿ ಇಂದ್ರಜಿತ್​ ಸಿಂಗ್ ಮತ್ತು ಇತರ ಪದಾಧಿಕಾರಿಗಳು, ಸದಸ್ಯರು ಸಂತಾಪ ಸೂಚಿಸಿದ್ದಾರೆ. ಗುರುದ್ವಾರ ಪ್ರಬಂಧಕ್ ಸಮಿತಿ ಸದಸ್ಯ ಮಹೇಂದ್ರ ಪಾಲ್ ಸಿಂಗ್​ ದಿಲ್ಲೋನ್​, ಸರ್ದಾರ್ ರಾಜಾ ಸಿಂಗ್​, ತ್ರಿಲೋಕ್​ ಸಿಂಗ್ ನಿಶಾದ್​ ಇತರರು ದುಃಖ ವ್ಯಕ್ತಪಡಿಸಿದ್ದು, ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ. ಭಾಯಿ ರಾಜೇಂದ್ರ ಸಿಂಗ್ ಅವರು ಆಸ್ಪತ್ರೆಯ ಬೆಡ್​ ಮೇಲೆ ರಕ್ತದ ಮಡುವಲ್ಲಿ ಸಾವನ್ನಪ್ಪಿದ್ದಾರೆ. ಅದು ಹೇಗಾಯಿತು ಎಂಬುದನ್ನು ಕೂಡಲೇ ತನಿಖೆ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬಿಜೆಪಿ ಕಾರ್ಯಕರ್ತರೊಂದಿಗೆ ಜ.18ರಂದು ನಮೋ ಆ್ಯಪ್ ಮೂಲಕ ಆನ್​​ಲೈನ್ ಸಂವಾದ ನಡೆಸಲಿದ್ದಾರೆ ನರೇಂದ್ರ ಮೋದಿ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು