AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಟ್ನಾದ ಶ್ರೀಹರಿ ಮಂದಿರ ಸಾಹೀಬ್​​ನ ಮುಖ್ಯ ಗ್ರಂಥಿ ಭಾಯಿ ರಾಜೇಂದ್ರ ಸಿಂಗ್ ನಿಗೂಢ ಸಾವು; ಸೂಕ್ತ ತನಿಖೆಗೆ ಆಗ್ರಹ

ಬೇರೆ ಕೆಲವು ಸಮಸ್ಯೆಗಳಿಂದ ಬಳಲುತ್ತಿದ್ದ ಭಾಯಿ ರಾಜೇಂದ್ರ ಸಿಂಗ್​ರನ್ನು ಜನವರಿ 13ರಂದು ಪಾಟ್ನಾದ ಪಿಎಂಸಿಎಚ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಂದಿನಿಂದಲೂ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರು, ಭಾನುವಾರ ರಾತ್ರಿ 2.45ರ ಹೊತ್ತಿಗೆ ಮೃತಪಟ್ಟಿದ್ದಾರೆ.

ಪಾಟ್ನಾದ ಶ್ರೀಹರಿ ಮಂದಿರ ಸಾಹೀಬ್​​ನ ಮುಖ್ಯ ಗ್ರಂಥಿ ಭಾಯಿ ರಾಜೇಂದ್ರ ಸಿಂಗ್ ನಿಗೂಢ ಸಾವು; ಸೂಕ್ತ ತನಿಖೆಗೆ ಆಗ್ರಹ
ಭಾಯಿ ರಾಜೇಂದ್ರ ಸಿಂಗ್​
TV9 Web
| Updated By: Lakshmi Hegde|

Updated on: Jan 17, 2022 | 3:36 PM

Share

ಬಿಹಾರದ ಪಾಟ್ನಾ ಸಾಹೀಬ್​ ಗುರುದ್ವಾರದ ಶ್ರಿಹರಿ ಮಂದಿರ ಸಾಹೀಬ್​​ನ ಮುಖ್ಯ ಗ್ರಂಥಿ ಭಾಯಿ ರಾಜೇಂದ್ರ ಸಿಂಗ್​ ಇಂದು ನಿಧನರಾದರು. ಆದರೆ ಅವರ ಸಾವು ನಿಗೂಢವಾಗಿದೆ. ಅವರ ಕುತ್ತಿಗೆಯ ಮೇಲೆ ಸಣ್ಣ ಚಾಕುವಿನಿಂದ ಮಾಡಲಾದ ಗಾಯದ ಗುರುತಿದ್ದು, ಅದರಿಂದ ರಕ್ತಸ್ರಾವ ಆಗಿದೆ. ಹೀಗಾಗಿ ಅವರು ಸಹಜವಾಗಿ ಸತ್ತಿಲ್ಲ ಎಂಬುದು ಸ್ಪಷ್ಟವಾಗಿದ್ದರೂ, ಅವರನ್ನು ಯಾರಾದರೂ ಕೊಲೆ ಮಾಡಿದರಾ? ಅಥವಾ ರಾಜೇಂದ್ರ ಸಿಂಗ್​ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡರಾ? ಎಂಬುದಿನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ಪ್ರಾರಂಭಿಸಿದ್ದಾರೆ. 

ಬೇರೆ ಕೆಲವು ಸಮಸ್ಯೆಗಳಿಂದ ಬಳಲುತ್ತಿದ್ದ ಭಾಯಿ ರಾಜೇಂದ್ರ ಸಿಂಗ್​ರನ್ನು ಜನವರಿ 13ರಂದು ಪಾಟ್ನಾದ ಪಿಎಂಸಿಎಚ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಂದಿನಿಂದಲೂ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರು, ಭಾನುವಾರ ರಾತ್ರಿ 2.45ರ ಹೊತ್ತಿಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ರಾಜೇಂದ್ರ ಸಿಂಗ್ ಪುತ್ರ ದಯಾ ಸಿಂಗ್​, ನನ್ನ ತಂದೆಯವರ ಆರೋಗ್ಯ ಹದಗೆಟ್ಟಿತ್ತು. ಆದರೆ ಚಿಕಿತ್ಸೆಯ ಬಳಿಕ ತುಂಬ ಸುಧಾರಣೆಯಾಗಿತ್ತು. ಆದರೆ ನಿನ್ನೆ ಅವರ ಒಮ್ಮೆಲೇ ಉಸಿರಾಡಲು ಕಷ್ಟಪಟ್ಟರು. ವೈದ್ಯರನ್ನು ಕರೆಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಅವರ ಕುತ್ತಿಗೆಯ ಮೇಲೆ ಚಿಕ್ಕ ಚಾಕುವಿನಿಂದ ಹೊಡೆದ ಗುರುತು ಇದೆ. ಮೃತದೇಹದ ಪೋಸ್ಟ್​ಮಾರ್ಟಮ್​ ಆದ ಬಳಿಕವಷ್ಟೇ ಸತ್ಯ ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ.

ಗುರುದ್ವಾರದ ಮುಖ್ಯಗ್ರಂಥಿ ಭಾಯಿ ರಾಜೇಂದ್ರ ಸಿಂಗ್​  ಸಾವಿಗೆ ವ್ಯವಸ್ಥಾಪನಾ ಸಮಿತಿ  ಅಧ್ಯಕ್ಷ ಅವತಾರ್ ಸಿಂಗ್, ಪ್ರಧಾನ ಕಾರ್ಯದರ್ಶಿ ಇಂದ್ರಜಿತ್​ ಸಿಂಗ್ ಮತ್ತು ಇತರ ಪದಾಧಿಕಾರಿಗಳು, ಸದಸ್ಯರು ಸಂತಾಪ ಸೂಚಿಸಿದ್ದಾರೆ. ಗುರುದ್ವಾರ ಪ್ರಬಂಧಕ್ ಸಮಿತಿ ಸದಸ್ಯ ಮಹೇಂದ್ರ ಪಾಲ್ ಸಿಂಗ್​ ದಿಲ್ಲೋನ್​, ಸರ್ದಾರ್ ರಾಜಾ ಸಿಂಗ್​, ತ್ರಿಲೋಕ್​ ಸಿಂಗ್ ನಿಶಾದ್​ ಇತರರು ದುಃಖ ವ್ಯಕ್ತಪಡಿಸಿದ್ದು, ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ. ಭಾಯಿ ರಾಜೇಂದ್ರ ಸಿಂಗ್ ಅವರು ಆಸ್ಪತ್ರೆಯ ಬೆಡ್​ ಮೇಲೆ ರಕ್ತದ ಮಡುವಲ್ಲಿ ಸಾವನ್ನಪ್ಪಿದ್ದಾರೆ. ಅದು ಹೇಗಾಯಿತು ಎಂಬುದನ್ನು ಕೂಡಲೇ ತನಿಖೆ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬಿಜೆಪಿ ಕಾರ್ಯಕರ್ತರೊಂದಿಗೆ ಜ.18ರಂದು ನಮೋ ಆ್ಯಪ್ ಮೂಲಕ ಆನ್​​ಲೈನ್ ಸಂವಾದ ನಡೆಸಲಿದ್ದಾರೆ ನರೇಂದ್ರ ಮೋದಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ