AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಟ್ನಾದ ಶ್ರೀಹರಿ ಮಂದಿರ ಸಾಹೀಬ್​​ನ ಮುಖ್ಯ ಗ್ರಂಥಿ ಭಾಯಿ ರಾಜೇಂದ್ರ ಸಿಂಗ್ ನಿಗೂಢ ಸಾವು; ಸೂಕ್ತ ತನಿಖೆಗೆ ಆಗ್ರಹ

ಬೇರೆ ಕೆಲವು ಸಮಸ್ಯೆಗಳಿಂದ ಬಳಲುತ್ತಿದ್ದ ಭಾಯಿ ರಾಜೇಂದ್ರ ಸಿಂಗ್​ರನ್ನು ಜನವರಿ 13ರಂದು ಪಾಟ್ನಾದ ಪಿಎಂಸಿಎಚ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಂದಿನಿಂದಲೂ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರು, ಭಾನುವಾರ ರಾತ್ರಿ 2.45ರ ಹೊತ್ತಿಗೆ ಮೃತಪಟ್ಟಿದ್ದಾರೆ.

ಪಾಟ್ನಾದ ಶ್ರೀಹರಿ ಮಂದಿರ ಸಾಹೀಬ್​​ನ ಮುಖ್ಯ ಗ್ರಂಥಿ ಭಾಯಿ ರಾಜೇಂದ್ರ ಸಿಂಗ್ ನಿಗೂಢ ಸಾವು; ಸೂಕ್ತ ತನಿಖೆಗೆ ಆಗ್ರಹ
ಭಾಯಿ ರಾಜೇಂದ್ರ ಸಿಂಗ್​
TV9 Web
| Updated By: Lakshmi Hegde|

Updated on: Jan 17, 2022 | 3:36 PM

Share

ಬಿಹಾರದ ಪಾಟ್ನಾ ಸಾಹೀಬ್​ ಗುರುದ್ವಾರದ ಶ್ರಿಹರಿ ಮಂದಿರ ಸಾಹೀಬ್​​ನ ಮುಖ್ಯ ಗ್ರಂಥಿ ಭಾಯಿ ರಾಜೇಂದ್ರ ಸಿಂಗ್​ ಇಂದು ನಿಧನರಾದರು. ಆದರೆ ಅವರ ಸಾವು ನಿಗೂಢವಾಗಿದೆ. ಅವರ ಕುತ್ತಿಗೆಯ ಮೇಲೆ ಸಣ್ಣ ಚಾಕುವಿನಿಂದ ಮಾಡಲಾದ ಗಾಯದ ಗುರುತಿದ್ದು, ಅದರಿಂದ ರಕ್ತಸ್ರಾವ ಆಗಿದೆ. ಹೀಗಾಗಿ ಅವರು ಸಹಜವಾಗಿ ಸತ್ತಿಲ್ಲ ಎಂಬುದು ಸ್ಪಷ್ಟವಾಗಿದ್ದರೂ, ಅವರನ್ನು ಯಾರಾದರೂ ಕೊಲೆ ಮಾಡಿದರಾ? ಅಥವಾ ರಾಜೇಂದ್ರ ಸಿಂಗ್​ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡರಾ? ಎಂಬುದಿನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ಪ್ರಾರಂಭಿಸಿದ್ದಾರೆ. 

ಬೇರೆ ಕೆಲವು ಸಮಸ್ಯೆಗಳಿಂದ ಬಳಲುತ್ತಿದ್ದ ಭಾಯಿ ರಾಜೇಂದ್ರ ಸಿಂಗ್​ರನ್ನು ಜನವರಿ 13ರಂದು ಪಾಟ್ನಾದ ಪಿಎಂಸಿಎಚ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಂದಿನಿಂದಲೂ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರು, ಭಾನುವಾರ ರಾತ್ರಿ 2.45ರ ಹೊತ್ತಿಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ರಾಜೇಂದ್ರ ಸಿಂಗ್ ಪುತ್ರ ದಯಾ ಸಿಂಗ್​, ನನ್ನ ತಂದೆಯವರ ಆರೋಗ್ಯ ಹದಗೆಟ್ಟಿತ್ತು. ಆದರೆ ಚಿಕಿತ್ಸೆಯ ಬಳಿಕ ತುಂಬ ಸುಧಾರಣೆಯಾಗಿತ್ತು. ಆದರೆ ನಿನ್ನೆ ಅವರ ಒಮ್ಮೆಲೇ ಉಸಿರಾಡಲು ಕಷ್ಟಪಟ್ಟರು. ವೈದ್ಯರನ್ನು ಕರೆಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಅವರ ಕುತ್ತಿಗೆಯ ಮೇಲೆ ಚಿಕ್ಕ ಚಾಕುವಿನಿಂದ ಹೊಡೆದ ಗುರುತು ಇದೆ. ಮೃತದೇಹದ ಪೋಸ್ಟ್​ಮಾರ್ಟಮ್​ ಆದ ಬಳಿಕವಷ್ಟೇ ಸತ್ಯ ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ.

ಗುರುದ್ವಾರದ ಮುಖ್ಯಗ್ರಂಥಿ ಭಾಯಿ ರಾಜೇಂದ್ರ ಸಿಂಗ್​  ಸಾವಿಗೆ ವ್ಯವಸ್ಥಾಪನಾ ಸಮಿತಿ  ಅಧ್ಯಕ್ಷ ಅವತಾರ್ ಸಿಂಗ್, ಪ್ರಧಾನ ಕಾರ್ಯದರ್ಶಿ ಇಂದ್ರಜಿತ್​ ಸಿಂಗ್ ಮತ್ತು ಇತರ ಪದಾಧಿಕಾರಿಗಳು, ಸದಸ್ಯರು ಸಂತಾಪ ಸೂಚಿಸಿದ್ದಾರೆ. ಗುರುದ್ವಾರ ಪ್ರಬಂಧಕ್ ಸಮಿತಿ ಸದಸ್ಯ ಮಹೇಂದ್ರ ಪಾಲ್ ಸಿಂಗ್​ ದಿಲ್ಲೋನ್​, ಸರ್ದಾರ್ ರಾಜಾ ಸಿಂಗ್​, ತ್ರಿಲೋಕ್​ ಸಿಂಗ್ ನಿಶಾದ್​ ಇತರರು ದುಃಖ ವ್ಯಕ್ತಪಡಿಸಿದ್ದು, ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ. ಭಾಯಿ ರಾಜೇಂದ್ರ ಸಿಂಗ್ ಅವರು ಆಸ್ಪತ್ರೆಯ ಬೆಡ್​ ಮೇಲೆ ರಕ್ತದ ಮಡುವಲ್ಲಿ ಸಾವನ್ನಪ್ಪಿದ್ದಾರೆ. ಅದು ಹೇಗಾಯಿತು ಎಂಬುದನ್ನು ಕೂಡಲೇ ತನಿಖೆ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬಿಜೆಪಿ ಕಾರ್ಯಕರ್ತರೊಂದಿಗೆ ಜ.18ರಂದು ನಮೋ ಆ್ಯಪ್ ಮೂಲಕ ಆನ್​​ಲೈನ್ ಸಂವಾದ ನಡೆಸಲಿದ್ದಾರೆ ನರೇಂದ್ರ ಮೋದಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ