AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಟ್ನಾದ ಶ್ರೀಹರಿ ಮಂದಿರ ಸಾಹೀಬ್​​ನ ಮುಖ್ಯ ಗ್ರಂಥಿ ಭಾಯಿ ರಾಜೇಂದ್ರ ಸಿಂಗ್ ನಿಗೂಢ ಸಾವು; ಸೂಕ್ತ ತನಿಖೆಗೆ ಆಗ್ರಹ

ಬೇರೆ ಕೆಲವು ಸಮಸ್ಯೆಗಳಿಂದ ಬಳಲುತ್ತಿದ್ದ ಭಾಯಿ ರಾಜೇಂದ್ರ ಸಿಂಗ್​ರನ್ನು ಜನವರಿ 13ರಂದು ಪಾಟ್ನಾದ ಪಿಎಂಸಿಎಚ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಂದಿನಿಂದಲೂ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರು, ಭಾನುವಾರ ರಾತ್ರಿ 2.45ರ ಹೊತ್ತಿಗೆ ಮೃತಪಟ್ಟಿದ್ದಾರೆ.

ಪಾಟ್ನಾದ ಶ್ರೀಹರಿ ಮಂದಿರ ಸಾಹೀಬ್​​ನ ಮುಖ್ಯ ಗ್ರಂಥಿ ಭಾಯಿ ರಾಜೇಂದ್ರ ಸಿಂಗ್ ನಿಗೂಢ ಸಾವು; ಸೂಕ್ತ ತನಿಖೆಗೆ ಆಗ್ರಹ
ಭಾಯಿ ರಾಜೇಂದ್ರ ಸಿಂಗ್​
TV9 Web
| Edited By: |

Updated on: Jan 17, 2022 | 3:36 PM

Share

ಬಿಹಾರದ ಪಾಟ್ನಾ ಸಾಹೀಬ್​ ಗುರುದ್ವಾರದ ಶ್ರಿಹರಿ ಮಂದಿರ ಸಾಹೀಬ್​​ನ ಮುಖ್ಯ ಗ್ರಂಥಿ ಭಾಯಿ ರಾಜೇಂದ್ರ ಸಿಂಗ್​ ಇಂದು ನಿಧನರಾದರು. ಆದರೆ ಅವರ ಸಾವು ನಿಗೂಢವಾಗಿದೆ. ಅವರ ಕುತ್ತಿಗೆಯ ಮೇಲೆ ಸಣ್ಣ ಚಾಕುವಿನಿಂದ ಮಾಡಲಾದ ಗಾಯದ ಗುರುತಿದ್ದು, ಅದರಿಂದ ರಕ್ತಸ್ರಾವ ಆಗಿದೆ. ಹೀಗಾಗಿ ಅವರು ಸಹಜವಾಗಿ ಸತ್ತಿಲ್ಲ ಎಂಬುದು ಸ್ಪಷ್ಟವಾಗಿದ್ದರೂ, ಅವರನ್ನು ಯಾರಾದರೂ ಕೊಲೆ ಮಾಡಿದರಾ? ಅಥವಾ ರಾಜೇಂದ್ರ ಸಿಂಗ್​ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡರಾ? ಎಂಬುದಿನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ಪ್ರಾರಂಭಿಸಿದ್ದಾರೆ. 

ಬೇರೆ ಕೆಲವು ಸಮಸ್ಯೆಗಳಿಂದ ಬಳಲುತ್ತಿದ್ದ ಭಾಯಿ ರಾಜೇಂದ್ರ ಸಿಂಗ್​ರನ್ನು ಜನವರಿ 13ರಂದು ಪಾಟ್ನಾದ ಪಿಎಂಸಿಎಚ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಂದಿನಿಂದಲೂ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರು, ಭಾನುವಾರ ರಾತ್ರಿ 2.45ರ ಹೊತ್ತಿಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ರಾಜೇಂದ್ರ ಸಿಂಗ್ ಪುತ್ರ ದಯಾ ಸಿಂಗ್​, ನನ್ನ ತಂದೆಯವರ ಆರೋಗ್ಯ ಹದಗೆಟ್ಟಿತ್ತು. ಆದರೆ ಚಿಕಿತ್ಸೆಯ ಬಳಿಕ ತುಂಬ ಸುಧಾರಣೆಯಾಗಿತ್ತು. ಆದರೆ ನಿನ್ನೆ ಅವರ ಒಮ್ಮೆಲೇ ಉಸಿರಾಡಲು ಕಷ್ಟಪಟ್ಟರು. ವೈದ್ಯರನ್ನು ಕರೆಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಅವರ ಕುತ್ತಿಗೆಯ ಮೇಲೆ ಚಿಕ್ಕ ಚಾಕುವಿನಿಂದ ಹೊಡೆದ ಗುರುತು ಇದೆ. ಮೃತದೇಹದ ಪೋಸ್ಟ್​ಮಾರ್ಟಮ್​ ಆದ ಬಳಿಕವಷ್ಟೇ ಸತ್ಯ ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ.

ಗುರುದ್ವಾರದ ಮುಖ್ಯಗ್ರಂಥಿ ಭಾಯಿ ರಾಜೇಂದ್ರ ಸಿಂಗ್​  ಸಾವಿಗೆ ವ್ಯವಸ್ಥಾಪನಾ ಸಮಿತಿ  ಅಧ್ಯಕ್ಷ ಅವತಾರ್ ಸಿಂಗ್, ಪ್ರಧಾನ ಕಾರ್ಯದರ್ಶಿ ಇಂದ್ರಜಿತ್​ ಸಿಂಗ್ ಮತ್ತು ಇತರ ಪದಾಧಿಕಾರಿಗಳು, ಸದಸ್ಯರು ಸಂತಾಪ ಸೂಚಿಸಿದ್ದಾರೆ. ಗುರುದ್ವಾರ ಪ್ರಬಂಧಕ್ ಸಮಿತಿ ಸದಸ್ಯ ಮಹೇಂದ್ರ ಪಾಲ್ ಸಿಂಗ್​ ದಿಲ್ಲೋನ್​, ಸರ್ದಾರ್ ರಾಜಾ ಸಿಂಗ್​, ತ್ರಿಲೋಕ್​ ಸಿಂಗ್ ನಿಶಾದ್​ ಇತರರು ದುಃಖ ವ್ಯಕ್ತಪಡಿಸಿದ್ದು, ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ. ಭಾಯಿ ರಾಜೇಂದ್ರ ಸಿಂಗ್ ಅವರು ಆಸ್ಪತ್ರೆಯ ಬೆಡ್​ ಮೇಲೆ ರಕ್ತದ ಮಡುವಲ್ಲಿ ಸಾವನ್ನಪ್ಪಿದ್ದಾರೆ. ಅದು ಹೇಗಾಯಿತು ಎಂಬುದನ್ನು ಕೂಡಲೇ ತನಿಖೆ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬಿಜೆಪಿ ಕಾರ್ಯಕರ್ತರೊಂದಿಗೆ ಜ.18ರಂದು ನಮೋ ಆ್ಯಪ್ ಮೂಲಕ ಆನ್​​ಲೈನ್ ಸಂವಾದ ನಡೆಸಲಿದ್ದಾರೆ ನರೇಂದ್ರ ಮೋದಿ

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ