AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪೂರೈಕೆ, ಸಂಪರ್ಕ ಮತ್ತು ಮೂಲಸೌಕರ್ಯ ವಿಚಾರಗಳ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚೆ: ಹೈಕೋರ್ಟ್​ಗಳಿಗೆ ಸಿಜೆ ರಮಣ ಭರವಸೆ

ಜೂನ್ 1 ಮತ್ತು 2ರಂದು ಒಟ್ಟು ನಾಲ್ಕು ಬಾರಿ ವಿಡಿಯೊ ಕಾನ್ಫರೆನ್ಸ್​ ಮೂಲಕ ಸಿಜೆ ರಮಣ ಅವರು ಎಲ್ಲ ಹೈಕೋರ್ಟ್​ಗಳ ಮುಖ್ಯ ನ್ಯಾಯಮೂರ್ತಿಗಳ ಜೊತೆಗೆ ಸಂವಾದ ನಡೆಸಿದರು. ಕೊವಿಡ್-19 ಪಿಡುಗಿನ ವೇಳೆ ಹೈಕೋರ್ಟ್​ ಮತ್ತು ಅಧೀನ ನ್ಯಾಯಾಲಯಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ? ಏನೆಲ್ಲಾ ಸಮಸ್ಯೆ ಎದುರಿಸುತ್ತಿವೆ ಎಂಬ ಬಗ್ಗೆ ಮಾಹಿತಿ ಪಡೆದುಕೊಂಡರು.

ಲಸಿಕೆ ಪೂರೈಕೆ, ಸಂಪರ್ಕ ಮತ್ತು ಮೂಲಸೌಕರ್ಯ ವಿಚಾರಗಳ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚೆ: ಹೈಕೋರ್ಟ್​ಗಳಿಗೆ ಸಿಜೆ ರಮಣ ಭರವಸೆ
ನ್ಯಾಯಮೂರ್ತಿ ರಮಣ
Follow us
Ghanashyam D M | ಡಿ.ಎಂ.ಘನಶ್ಯಾಮ
| Updated By: Skanda

Updated on: Jun 05, 2021 | 7:06 AM

ದೆಹಲಿ: ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ದೇಶದ ಎಲ್ಲ ಹೈಕೋರ್ಟ್​ಗಳ ಮುಖ್ಯ ನ್ಯಾಯಮೂರ್ತಿಗಳ ಜೊತೆಗೆ ಶುಕ್ರವಾರ ಮಾತನಾಡಿದರು. ಲಸಿಕೆಗಳ ಪೂರೈಕೆ, ನ್ಯಾಯಾಲಯಗಳಲ್ಲಿ ತ್ವರಿತವಾಗಿ ಪರಿಹಾರವಾಗಬೇಕಾದ ಮೂಲಸೌಕರ್ಯ ಸಮಸ್ಯೆಯಂಥ ವಿಚಾರಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು. ಲಸಿಕೆ ನೀಡುವಲ್ಲಿ ಆದ್ಯತೆ ಸಿಗಬೇಕು ಎನ್ನುವ ಕಾರಣಕ್ಕೆ ನ್ಯಾಯಾಲಯ ಸಿಬ್ಬಂದಿಯನ್ನು ಮುಂಚೂಣಿ ಕೆಲಸಗಾರರು ಎಂದು ಪರಿಗಣಿಸಲು ಸೂಚಿಸಲಾಗುವುದು ಎಂದು ಹೇಳಿದರು.

ಜೂನ್ 1 ಮತ್ತು 2ರಂದು ಒಟ್ಟು ನಾಲ್ಕು ಬಾರಿ ವಿಡಿಯೊ ಕಾನ್ಫರೆನ್ಸ್​ ಮೂಲಕ ಸಿಜೆ ರಮಣ ಅವರು ಎಲ್ಲ ಹೈಕೋರ್ಟ್​ಗಳ ಮುಖ್ಯ ನ್ಯಾಯಮೂರ್ತಿಗಳ ಜೊತೆಗೆ ಸಂವಾದ ನಡೆಸಿದರು. ಕೊವಿಡ್-19 ಪಿಡುಗಿನ ವೇಳೆ ಹೈಕೋರ್ಟ್​ ಮತ್ತು ಅಧೀನ ನ್ಯಾಯಾಲಯಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ? ಏನೆಲ್ಲಾ ಸಮಸ್ಯೆ ಎದುರಿಸುತ್ತಿವೆ ಎಂಬ ಬಗ್ಗೆ ಮಾಹಿತಿ ಪಡೆದುಕೊಂಡರು.

ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಸಿಜೆ ರಮಣ ರಾಷ್ಟ್ರೀಯ ನ್ಯಾಯಾಂಗ ಮೂಲಸೌಕರ್ಯ ನಿಗಮ ರಚಿಸುವ ತಮ್ಮ ಆಲೋಚನೆಯನ್ನು ಹಂಚಿಕೊಂಡರು. ಈ ನಿಗಮವು ದೇಶದಾದ್ಯಂತ ನ್ಯಾಯಾಲಯಗಳಲ್ಲಿ ಮೂಲಸೌಕರ್ಯ ಒದಗಿಸುವ ಕೆಲಸ ಮಾಡಲಿದೆ. ಹೈಕೋರ್ಟ್​ ಮತ್ತು ಇತರ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೂ ಗಮನ ನೀಡಬೇಕು ಎಂದು ಸಿಜೆ ಸೂಚಿಸಿದರು. ಪಿಡುಗನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಿ. ನ್ಯಾಯಾಂಗದ ಅಧಿಕಾರಿಗಳಿಗೆ ವರ್ಚುವಲ್ ತರಬೇತಿಗಳನ್ನು ಕೊಡಿ ಎಂದು ಸಲಹೆ ಮಾಡಿದರು.

ಜಿಲ್ಲೆಗಳು, ಗ್ರಾಮಾಂತರ ಪ್ರದೇಶಗಳು ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಕನೆಕ್ಟಿವಿಟಿ ಸಮಸ್ಯೆ ಇರುವುದು ಅರಿವಿಗೆ ಬಂದಿದೆ. ಅಧೀನ ನ್ಯಾಯಾಲಯಗಳಲ್ಲಿ ಮೂಲಸೌಕರ್ಯ ಸುಧಾರಣೆಗೆ ಗಮನ ನೀಡುತ್ತೇನೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: Sputnik Vaccine: ಸ್ಫುಟ್ನಿಕ್ ಲಸಿಕೆ ಉತ್ಪಾದನೆಗೆ ಸೆರಂ ಇನ್​ಸ್ಟಿಟ್ಯೂಟ್​ಗೆ ಕೇಂದ್ರ ಸರ್ಕಾರ ಅನುಮತಿ 

ಅಮೆರಿಕದಿಂದ ಲಸಿಕೆ ರಫ್ತು ನಿರ್ಬಂಧ ತೆರವು: ಜೋ ಬೈಡನ್, ಜೈಶಂಕರ್​ಗೆ ಧನ್ಯವಾದ ಹೇಳಿದ ಅದಾರ್ ಪೂನಾವಾಲಾ

ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!