AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನವದಂಪತಿಯನ್ನು ರಸ್ತೆಯಲ್ಲಿ ತಡೆದ ಪಂಜಾಬ್​ ಸಿಎಂ ಚರಣಜಿತ್​ ಸಿಂಗ್​ ಛನ್ನಿ; ನಿಯಮ ಉಲ್ಲಂಘನೆ

ಪಂಜಾಬ್​​ನಲ್ಲಿ ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬದಲಾವಣೆಯಾಗಿದೆ. ಕ್ಯಾಪ್ಟನ್​ ಅಮರಿಂದರ್​ ಸಿಂಗ್​ರನ್ನು ಕೆಳಗಿಳಿಸಿ ಛನ್ನಿ ಅವರನ್ನು ಸಿಎಂ ಮಾಡಲಾಗಿದೆ. ನಿನ್ನೆ ಸಂಪುಟ ವಿಸ್ತರಣೆಯೂ ಕೂಡ ಆಗಿದೆ.

Video: ನವದಂಪತಿಯನ್ನು ರಸ್ತೆಯಲ್ಲಿ ತಡೆದ ಪಂಜಾಬ್​ ಸಿಎಂ ಚರಣಜಿತ್​ ಸಿಂಗ್​ ಛನ್ನಿ; ನಿಯಮ ಉಲ್ಲಂಘನೆ
ನವದಂಪತಿಗೆ ಶುಭ ಕೋರಿದ ಪಂಜಾಬ್​ ಸಿಎಂ
TV9 Web
| Edited By: |

Updated on: Sep 27, 2021 | 9:41 AM

Share

ಪಂಜಾಬ್​​ನ ನೂತನ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ(Charanjit Singh Channi)  ನಿನ್ನೆ ಬಟಿಂಡಾಕ್ಕೆ ಭೇಟಿ ನೀಡಿದ ವೇಳೆ, ಹೊಸದಾಗಿ ಮದುವೆಯಾಗಿದ್ದ ಜೋಡಿ (newly wed couple) ಯೊಂದಕ್ಕೆ ಸರ್ಪ್ರೈಸ್​ ನೀಡಿದ್ದಾರೆ. ನೂತನ ಮುಖ್ಯಮಂತ್ರಿ, ನವವಿವಾಹಿತರಿಗೆ ಸರ್ಪ್ರೈಸ್​ ನೀಡಿದ ವಿಡಿಯೋವನ್ನು ಪಂಜಾಬ್​ ಸರ್ಕಾರ ಟ್ವಿಟರ್​​ನಲ್ಲಿ ಶೇರ್​ ಮಾಡಿಕೊಂಡಿದೆ. ಆದರೆ ಒಂದೆಂದರೆ, ಇಂಥ ಕೊವಿಡ್​ 19 ಕಾಲದಲ್ಲೂ ಮುಖ್ಯಮಂತ್ರಿಯಿಂದ ಹಿಡಿದು ಪೊಲೀಸರು, ನವವಿವಾಹಿತರು, ಅವರ ಸಂಬಂಧಿಕರೆಲ್ಲ ಮಾಸ್ಕ್​ ಇಲ್ಲದೆ ಗುಂಪಾಗಿ ನಿಂತಿದ್ದಾರೆ. ಹಾಗಾಗಿ ವಿಡಿಯೋ ನೋಡಿದ ಜನರು ಆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಕೊವಿಡ್​ 19 ನಿಯಮ ಉಲ್ಲಂಘನೆ ಎಂದಿದ್ದಾರೆ. 

ಚರಣಜಿತ್​ ಸಿಂಗ್​ ಛನ್ನಿ ನಿನ್ನೆ ಬಟಿಂಡಾಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಂಡಿ ಕಲನ್​ ಗ್ರಾಮದ ಬಳಿ ನವವಿವಾಹಿತರು ಮತ್ತು ಅವರ ಸಂಬಂಧಿಕರು ಬರುತ್ತಿರುವುದನ್ನು ನೋಡಿದ ಛನ್ನಿ, ತಮ್ಮ ಗಾಡಿಯನ್ನು ನಿಲ್ಲಿಸಿ, ದಂಪತಿಗೆ ಶುಭಕೋರಿದ್ದಾರೆ. ಸಿಹಿಯನ್ನೂ ತಿಂದಿದ್ದಾರೆ. ಮುಖ್ಯಮಂತ್ರಿ ತಮಗೆ ಹಾರೈಸಿದ್ದಕ್ಕೆ ಆ ಹೊಸ ಜೋಡಿ ಫುಲ್​ ಖುಷಿಯಾಗಿದ್ದು ವಿಡಿಯೋದಲ್ಲಿ ಕಾಣುತ್ತದೆ.

ಪಂಜಾಬ್​​ನಲ್ಲಿ ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬದಲಾವಣೆಯಾಗಿದೆ. ಕ್ಯಾಪ್ಟನ್​ ಅಮರಿಂದರ್​ ಸಿಂಗ್​ರನ್ನು ಕೆಳಗಿಳಿಸಿ ಛನ್ನಿ ಅವರನ್ನು ಸಿಎಂ ಮಾಡಲಾಗಿದೆ. ನಿನ್ನೆ ಸಂಪುಟ ವಿಸ್ತರಣೆಯೂ ಕೂಡ ಆಗಿದ್ದು, ಈ ಹಿಂದೆ ಇದ್ದ ಕೆಲವು ಸಚಿವರನ್ನು ಕೈಬಿಡಲಾಗಿದೆ. ಆರು ಮಂದಿ ಹೊಸ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.  ಛನ್ನಿ ತಮ್ಮನ್ನು ತಾವು ಸಾಮಾನ್ಯ ಜನರ ಪ್ರತಿನಿಧಿ ಎಂದು ಕರೆದುಕೊಂಡಿದ್ದಾರೆ. ಸದ್ಯ ಅವರ ಕ್ಯಾಬಿನೆಟ್​​ನಲ್ಲಿ 15 ಮಂದಿ ಸಚಿವರು ಇದ್ದಾರೆ.

ಇದನ್ನೂ ಓದಿ: ದಿಗಂತ್ ಬಾಯಿಂದ ಕೊಟ್ಟ ಹೂವನ್ನು ತುಟಿಯಿಂದಲೇ ಸ್ವೀಕರಿಸಿದ ಐಂದ್ರಿತಾ ರೇ; ಇಲ್ಲಿದೆ ವಿಡಿಯೋ

Bharat Bandh: ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ಶುರು; ಹೆದ್ದಾರಿಗಳೆಲ್ಲ ಬಂದ್​

(Chief Minister Charanjit Singh Channi stopped his vehicle to greet newly wed couple in Punjab)

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!