AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮದುವೆ ನಾಳೆ; ಇದು ಎರಡನೇ ವಿವಾಹ

ಭಗವಂತ್ ಮಾನ್ ಸಾಹೇಬ್ ಅವರು ಖಾಸಗಿ ಸಮಾರಂಭದಲ್ಲಿ ನಾಳೆ ಮದುವೆಯಾಗಲಿದ್ದಾರೆ. ಡಾ.ಗುರುಪ್ರೀತ್ ಕೌರ್ ಅವರನ್ನು ಮಾನ್ ಮದುವೆಯಾಗಲಿದ್ದಾರೆ ಎಂದು ಎಎಪಿ ಹಿರಿಯ ನಾಯಕ, ವರ್ಕಾರ ಮಲ್ವಿಂದರ್ ಸಿಂಗ್ ಕಾಂಗ್ ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮದುವೆ ನಾಳೆ; ಇದು ಎರಡನೇ ವಿವಾಹ
ಭಗವಂತ್ ಮಾನ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jul 06, 2022 | 7:39 PM

Share

ಚಂಡೀಗಢ: ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann)  ನಾಳೆ ಚಂಡೀಗಢದಲ್ಲಿ ವಿವಾಹವಾಗಲಿದ್ದಾರೆ. 48ರ ಹರೆಯದ ಮಾನ್ ಗುರುಪ್ರೀತ್ ಕೌರ್ ಎಂಬವರನ್ನು ವರಿಸಲಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಸರಳವಾಗಿ ನಡೆಯುವ ವಿವಾಹದಲ್ಲಿ ಕುಟುಂಬ ಮತ್ತು ಆಪ್ತರು ಮಾತ್ರ ಭಾಗವಹಿಸಲಿದ್ದಾರೆ. ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ (Arvind Kejriwal) ಅವರು ಮದುವೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ . ಮಾನ್ ಸಾಹೇಬ್ ಅವರು ಖಾಸಗಿ ಸಮಾರಂಭದಲ್ಲಿ ನಾಳೆ ಮದುವೆಯಾಗಲಿದ್ದಾರೆ. ಡಾ.ಗುರುಪ್ರೀತ್ ಕೌರ್ ಅವರನ್ನು ಮಾನ್ ಮದುವೆಯಾಗಲಿದ್ದಾರೆ ಎಂದು ಎಎಪಿ ಹಿರಿಯ ನಾಯಕ, ವರ್ಕಾರ ಮಲ್ವಿಂದರ್ ಸಿಂಗ್ ಕಾಂಗ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.  ಈ ಹಿಂದೆ ಸ್ಟ್ಯಾಂಡಪ್ ಕಾಮಿಡಿಯನ್ ಆಗಿದ್ದ ಮಾನ್ ಆರು ವರ್ಷಗಳ ಹಿಂದೆ ವಿವಾಹ ವಿಚ್ಛೇದನ ಪಡೆದಿದ್ದರು. ಹಿಂದಿನ ವೈವಾಹಿಕ ಸಂಬಂಧದಲ್ಲಿ ಅವರಿಗೆ ಇಬ್ಬರು ಮಕ್ಕಳಿವೆ. ಅವರ ಮಕ್ಕಳು ಅಮೆರಿಕದಲ್ಲಿ ಅವರ ಅಮ್ಮನ ಜತೆ ವಾಸವಾಗಿದ್ದಾರೆ. ಮಾರ್ಚ್ 16ರಂದು ಮಾನ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಮಕ್ಕಳು ಭಾಗವಹಿಸಿದ್ದರು .

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಜಯಭೇರಿ ಬಾರಿಸಿ ಕಾಂಗ್ರೆಸ್ ಸರ್ಕಾರವನ್ನು ಕೆಳಗಿಳಿಸಿತ್ತು.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?