AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮದುವೆ ನಾಳೆ; ಇದು ಎರಡನೇ ವಿವಾಹ

ಭಗವಂತ್ ಮಾನ್ ಸಾಹೇಬ್ ಅವರು ಖಾಸಗಿ ಸಮಾರಂಭದಲ್ಲಿ ನಾಳೆ ಮದುವೆಯಾಗಲಿದ್ದಾರೆ. ಡಾ.ಗುರುಪ್ರೀತ್ ಕೌರ್ ಅವರನ್ನು ಮಾನ್ ಮದುವೆಯಾಗಲಿದ್ದಾರೆ ಎಂದು ಎಎಪಿ ಹಿರಿಯ ನಾಯಕ, ವರ್ಕಾರ ಮಲ್ವಿಂದರ್ ಸಿಂಗ್ ಕಾಂಗ್ ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮದುವೆ ನಾಳೆ; ಇದು ಎರಡನೇ ವಿವಾಹ
ಭಗವಂತ್ ಮಾನ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 06, 2022 | 7:39 PM

Share

ಚಂಡೀಗಢ: ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann)  ನಾಳೆ ಚಂಡೀಗಢದಲ್ಲಿ ವಿವಾಹವಾಗಲಿದ್ದಾರೆ. 48ರ ಹರೆಯದ ಮಾನ್ ಗುರುಪ್ರೀತ್ ಕೌರ್ ಎಂಬವರನ್ನು ವರಿಸಲಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಸರಳವಾಗಿ ನಡೆಯುವ ವಿವಾಹದಲ್ಲಿ ಕುಟುಂಬ ಮತ್ತು ಆಪ್ತರು ಮಾತ್ರ ಭಾಗವಹಿಸಲಿದ್ದಾರೆ. ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ (Arvind Kejriwal) ಅವರು ಮದುವೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ . ಮಾನ್ ಸಾಹೇಬ್ ಅವರು ಖಾಸಗಿ ಸಮಾರಂಭದಲ್ಲಿ ನಾಳೆ ಮದುವೆಯಾಗಲಿದ್ದಾರೆ. ಡಾ.ಗುರುಪ್ರೀತ್ ಕೌರ್ ಅವರನ್ನು ಮಾನ್ ಮದುವೆಯಾಗಲಿದ್ದಾರೆ ಎಂದು ಎಎಪಿ ಹಿರಿಯ ನಾಯಕ, ವರ್ಕಾರ ಮಲ್ವಿಂದರ್ ಸಿಂಗ್ ಕಾಂಗ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.  ಈ ಹಿಂದೆ ಸ್ಟ್ಯಾಂಡಪ್ ಕಾಮಿಡಿಯನ್ ಆಗಿದ್ದ ಮಾನ್ ಆರು ವರ್ಷಗಳ ಹಿಂದೆ ವಿವಾಹ ವಿಚ್ಛೇದನ ಪಡೆದಿದ್ದರು. ಹಿಂದಿನ ವೈವಾಹಿಕ ಸಂಬಂಧದಲ್ಲಿ ಅವರಿಗೆ ಇಬ್ಬರು ಮಕ್ಕಳಿವೆ. ಅವರ ಮಕ್ಕಳು ಅಮೆರಿಕದಲ್ಲಿ ಅವರ ಅಮ್ಮನ ಜತೆ ವಾಸವಾಗಿದ್ದಾರೆ. ಮಾರ್ಚ್ 16ರಂದು ಮಾನ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಮಕ್ಕಳು ಭಾಗವಹಿಸಿದ್ದರು .

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಜಯಭೇರಿ ಬಾರಿಸಿ ಕಾಂಗ್ರೆಸ್ ಸರ್ಕಾರವನ್ನು ಕೆಳಗಿಳಿಸಿತ್ತು.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ