ಚುನಾವಣೆ ಸಂದರ್ಭ ವೈದ್ಯರ ನಿವೃತ್ತಿ ವಯಸ್ಸನ್ನು ಏಕ್ದಂ 5 ವರ್ಷ ಏರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ಅಸೆಂಬ್ಲಿ ಚುನಾವಣೆ ನಡೆಯಲಿದ್ದು, ಓಲೈಕೆ ರಾಜಕಾರಣ ಅಬಾಧಿತವಾಗಿ ನಡೆದಿದೆ. ತಾಜಾ ಬೆಳವಣಿಗೆಯಲ್ಲಿ ರಾಜ್ಯದ ಸರ್ಕಾರಿ ವೈದ್ಯರ ನಿವೃತ್ತಿ ವಯಸ್ಸನ್ನು ಹಾಲಿ 65 ವರ್ಷದಿಂದ ಏಕ್ದಂ 5 ವರ್ಷ ಏರಿಸಿ, 70 ವರ್ಷಕ್ಕೆ ನಿವೃತ್ತಿ ವಯಸ್ಸನ್ನು ನಿಗದಿಪಡಿಸಲು ಮುಂದಾಗಿದೆ.

ಚುನಾವಣೆ ಸಂದರ್ಭ ವೈದ್ಯರ ನಿವೃತ್ತಿ ವಯಸ್ಸನ್ನು ಏಕ್ದಂ 5 ವರ್ಷ ಏರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Follow us
| Updated By: ಸಾಧು ಶ್ರೀನಾಥ್​

Updated on:Sep 20, 2021 | 8:34 AM

ಲಖ್ನೋ: ಉತ್ತರ ಪ್ರದೇಶದಲ್ಲಿ ವೈದ್ಯರುಗಳ ಕೊರತೆ ಇದೆ ಎಂಬುದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿಗೆ ಮನವರಿಕೆಯಾಗಿದ್ದು, ಅದನ್ನು ಸರಿದೂಗಿಸುವ ನಿಟ್ಟಿನಲ್ಲಿ ಹಾಕಿ ಇರುವ ವೈದ್ಯರ ನಿವೃತ್ತಿ ವಯಸ್ಸನ್ನು ಏರಿಸಲು ನಿರ್ಧರಿಸಿದ್ದಾರೆ. ಗಮನಾರ್ಹವೆಂದರೆ ಇನ್ನಾರು ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ಸಾರ್ವತ್ರಿಕ ಅಸೆಂಬ್ಲಿ ಚುನಾವಣೆ ನಡೆಯಲಿದೆ.

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ಅಸೆಂಬ್ಲಿ ಚುನಾವಣೆ ನಡೆಯಲಿದ್ದು, ಓಲೈಕೆ ರಾಜಕಾರಣ ಅಬಾಧಿತವಾಗಿ ನಡೆದಿದೆ. ತಾಜಾ ಬೆಳವಣಿಗೆಯಲ್ಲಿ ರಾಜ್ಯದ ಸರ್ಕಾರಿ ವೈದ್ಯರ ನಿವೃತ್ತಿ ವಯಸ್ಸನ್ನು ಹಾಲಿ 65 ವರ್ಷದಿಂದ ಏಕ್ದಂ 5 ವರ್ಷ ಏರಿಸಿ, 70 ವರ್ಷಕ್ಕೆ ನಿವೃತ್ತಿ ವಯಸ್ಸನ್ನು ನಿಗದಿಪಡಿಸಲು ಮುಂದಾಗಿದೆ.

ಕೊರೊನಾ ಕಾಟದಿಂದ (COVID-19 pandemic) ಪರಿಣತ ವೈದ್ಯರ ಕೊರತೆ ಎದುರಾಗಿದೆ. ಹಾಗಾಗಿ ಈ ಕ್ರಮ ಅನಿವಾರ್ಯವಾಗಿದೆ. ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಧಿಕೃತ ಮುದ್ರೆ ಬೀಳಲಿದೆ ಎಂದು ಉತ್ತರ ಪ್ರದೇಶ ವೈದ್ಯಕೀಯ ಶಿಕ್ಷಣ ಸಚಿವ ಸುರೇಶ್​ ಖನ್ನಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇತ್ತೀಚೆಗೆ 65 ವರ್ಷಕ್ಕೆ ನಿವೃತ್ತಿ ಹೊಂದುತ್ತಿದ್ದಂತೆ ಬಹುತೇಕ ವೈದ್ಯರು ಖಾಸಿ ಆಸ್ಪತ್ರೆಗಳಲ್ಲಿ ತಮ್ಮ ವೈದ್ಯ ಸೇವೆ ಮುಂದುವರಿಸುವ ವಿದ್ಯಮಾನ ಬೆಳಕಿಗೆ ಬಂದಿತ್ತು. ಅದನ್ನು ಮನಗಂಡು ನಿವೃತ್ತಿ ವಯಸ್ಸನ್ನು ಏರಿಸುವ ಮೂಲಕ ಅಂತಹ ವೈದ್ಯರು ಇನ್ನೂ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ತಮ್ಮ ಸೇವೆ ಮುಂದುವರಿಸುವಂತಾಗಲಿ ಎಂದು ಆರೋಗ್ಯ ಸಚಿವ ಸುರೇಶ್​ ಖನ್ನಾ ಆಶಿಸಿದ್ದಾರೆ.

2018ರ ಅಂಕಿ ಅಂಶ ಪ್ರಕಾರ ಉತ್ತರ ಪ್ರದೇಶದಲ್ಲಿ ಪ್ರತಿ ವೈದ್ಯರು 19,962 ಮಂದಿ ರೋಗಿಗಳನ್ನು ನೋಡಿಕೊಳ್ಳುವಂತಾಗಿದೆ. ಅದೇ ರಾಜಧಾನಿ ದೆಹಲಿಯಲ್ಲಿ 2203 ರೋಗಿಗಳಿಗೆ ಒಬ್ಬ ಡಾಕ್ಟರ್ ಇದ್ದಾರೆ.

Also Read: ಉತ್ತರ ಪ್ರದೇಶದಲ್ಲಿ ನಾಲ್ಕೂವರೆ ವರ್ಷದ ಬಿಜೆಪಿ ಸರ್ಕಾರ ಉತ್ತಮ ಆಡಳಿತದ ಮೈಲಿಗಲ್ಲು: ಯೋಗಿ ಆದಿತ್ಯನಾಥ

(Chief Minister Yogi Adityanath gives consent to proposal of increasing retirement age of doctors in Uttar Pradesh to 70 years)

Published On - 8:19 am, Mon, 20 September 21

ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ