AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲಿನ ಪೈಶಾಚಿಕ ಕೃತ್ಯಕ್ಕೆ ಕಡಿವಾಣ ಹಾಕಲು ನವ ಯೋಜನೆ ಜಾರಿಗೆ ತಂದ ಸಿಎಂ ಯೋಗಿ

ಬಲರಾಮಪುರ: ಅಪರಾಧಗಳ ರಾಜಧಾನಿ ಅದರಲ್ಲೂ ಮಹಿಳೆಯರ ಮೇಲಿನ ಪೈಶಾಚಿಕ ಪಾತಕಗಳು ಹೆಚ್ಚಾಗುತ್ತಿರುವ ಉತ್ತರ ಪ್ರದೇಶದಲ್ಲಿ ಕುಕೃತ್ಯಗಳಿಗೆ ಕಡಿವಾಣ ಹಾಕಲು ಮಿಷನ್ ಶಕ್ತಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ತನ್ಮೂಲಕ ಹೆಣ್ಣುಮಕ್ಕಳನ್ನು ಸಬಲರನ್ನಾಗಿಸುವುದು ಯೋಜನೆಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ 1535 ಪೊಲೀಸ್​ ಠಾಣೆಗಳಲ್ಲಿ ಪ್ರತ್ಯೇಕ ಕೊಠಡಿ ಮೀಸಲಿಡಲಾಗಿದ್ದು, ಮಹಿಳೆಯರು ನೇರವಾಗಿ ಇಲ್ಲಿ ದೂರು ದಾಖಲಿಸಬಹುದಾಗಿದೆ. ನವರಾತ್ರಿ ಆರಂಭಗೊಂಡ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ Mission Shakti ಯೋಜನೆಯನ್ನು ಚಾಲೂಗೊಳಿಸಿದರು. ಮಿಷನ್ ಶಕ್ತಿ ಪೊಲೀಸ್​ ಕೊಠಡಿಯಲ್ಲಿ ಒಬ್ಬ […]

ಮಹಿಳೆ ಮೇಲಿನ ಪೈಶಾಚಿಕ ಕೃತ್ಯಕ್ಕೆ ಕಡಿವಾಣ ಹಾಕಲು ನವ ಯೋಜನೆ ಜಾರಿಗೆ ತಂದ ಸಿಎಂ ಯೋಗಿ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 17, 2020 | 4:41 PM

Share

ಬಲರಾಮಪುರ: ಅಪರಾಧಗಳ ರಾಜಧಾನಿ ಅದರಲ್ಲೂ ಮಹಿಳೆಯರ ಮೇಲಿನ ಪೈಶಾಚಿಕ ಪಾತಕಗಳು ಹೆಚ್ಚಾಗುತ್ತಿರುವ ಉತ್ತರ ಪ್ರದೇಶದಲ್ಲಿ ಕುಕೃತ್ಯಗಳಿಗೆ ಕಡಿವಾಣ ಹಾಕಲು ಮಿಷನ್ ಶಕ್ತಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ತನ್ಮೂಲಕ ಹೆಣ್ಣುಮಕ್ಕಳನ್ನು ಸಬಲರನ್ನಾಗಿಸುವುದು ಯೋಜನೆಯ ಉದ್ದೇಶವಾಗಿದೆ.

ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ 1535 ಪೊಲೀಸ್​ ಠಾಣೆಗಳಲ್ಲಿ ಪ್ರತ್ಯೇಕ ಕೊಠಡಿ ಮೀಸಲಿಡಲಾಗಿದ್ದು, ಮಹಿಳೆಯರು ನೇರವಾಗಿ ಇಲ್ಲಿ ದೂರು ದಾಖಲಿಸಬಹುದಾಗಿದೆ.

ನವರಾತ್ರಿ ಆರಂಭಗೊಂಡ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ Mission Shakti ಯೋಜನೆಯನ್ನು ಚಾಲೂಗೊಳಿಸಿದರು. ಮಿಷನ್ ಶಕ್ತಿ ಪೊಲೀಸ್​ ಕೊಠಡಿಯಲ್ಲಿ ಒಬ್ಬ ಮಹಿಳಾ ಪೇದೆ ಕಾರ್ಯನಿರ್ವಹಿಸುತ್ತಾರೆ. ಮಹಿಳೆಯರ ಮೇಲೆ ಅಪರಾಧ ಎಸಗುವವರ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ ಕೈಗೊಳ್ಳಲು ಇದು ಸಹಾಯಕವಾಗಲಿದೆ. ರಾಜ್ಯದ ಪ್ರತಿಯೊಬ್ಬ ಮಹಿಳೆಯನ್ನು ಸಂರಕ್ಷಿಸುವುದು ಇದರ ಧ್ಯೇಯವಾಗಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದರು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!