AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗೆಲುವಿನ ಹೋಳಿ; ಗೋರಖ್​​ಪುರದಲ್ಲಿ ಭರ್ಜರಿಯಾಗಿ ಹಬ್ಬ ಆಚರಿಸಿದ ಯೋಗಿ ಆದಿತ್ಯನಾಥ್​, ಜನರಿಗೆ ಬಣ್ಣ ಎರಚಿ ಸಂಭ್ರಮ

. ಕೊವಿಡ್​ 19 ಕಾರಣದಿಂದ ಕಳೆದ 2ವರ್ಷಗಳಿಂದಲೂ ದೇಶದಲ್ಲಿ ಹೋಳಿ ಸಂಭ್ರಮಕ್ಕೆ ಕಡಿವಾಣ ಬಿದ್ದಿತ್ತು. ಆದರೆ ಈಗ ಕೊರೊನಾ ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಮತ್ತೆ ಸಂಭ್ರಮ ಮುಗಿಲುಮುಟ್ಟಿದೆ.

Video: ಗೆಲುವಿನ ಹೋಳಿ; ಗೋರಖ್​​ಪುರದಲ್ಲಿ ಭರ್ಜರಿಯಾಗಿ ಹಬ್ಬ ಆಚರಿಸಿದ ಯೋಗಿ ಆದಿತ್ಯನಾಥ್​, ಜನರಿಗೆ ಬಣ್ಣ ಎರಚಿ ಸಂಭ್ರಮ
ಹೋಳಿ ಹಬ್ಬ ಆಚರಿಸಿದ ಯೋಗಿ ಆದಿತ್ಯನಾಥ್​
TV9 Web
| Edited By: |

Updated on: Mar 19, 2022 | 2:12 PM

Share

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಇಂದು ಗೋರಖ್​​ಪುರದಲ್ಲಿ ಭರ್ಜರಿಯಾಗಿ ಹೋಳಿ ಹಬ್ಬ ಆಚರಿಸಿದ್ದಾರೆ. ಅವರು ಈ ಬಾರಿ ಗೋರಖ್​​ಪುರದಿಂದಲೇ ಸ್ಪರ್ಧಿಸಿ, ಗೆದ್ದಿದ್ದಾರೆ. ಮಾರ್ಚ್​ 25ರಂದು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಮಾಡಲಿದ್ದು, ಈ ಸಮಾರಂಭದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತಿತರ ಗಣ್ಯರು ಆಗಮಿಸಲಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಪಾಲಿಗೆ ಹೋಳಿ ವಿಶೇಷ ಸಂಭ್ರಮ ತಂದುಕೊಟ್ಟ ಹಬ್ಬವಾಗಿದೆ. ಕಳೆದ ಅವಧಿಯ ಸರ್ಕಾರದ ಪೂರ್ಣ ಆಡಳಿತ ನಡೆಸಿದ ಬಿಜೆಪಿ, ಈ ಸಲದ ವಿಧಾನಸಭೆ ಚುನಾವಣೆಯಲ್ಲೂ ಭರ್ಜರಿ ಗೆಲುವು ಸಾಧಿಸಿದೆ.

ಇಂದು ಗೋರಖ್​​ಪುರದಲ್ಲಿ ಹೋಳಿ ಹಬ್ಬ ಆಚರಣೆಯಲ್ಲಿ ಪಾಲ್ಗೊಂಡ ಸಿಎಂ ಯೋಗಿ, ಜನಸಮೂಹದೆಡೆಗೆ ಬಣ್ಣವನ್ನು ಎರಚಿದ್ದಾರೆ. ತಲೆಗೆ ಪೇಟ ಧರಿಸಿದ ಅವರೂ ಕೂಡ ಬಣ್ಣದಲ್ಲಿ ಮಿಂದೆದ್ದಿನ್ನು ನೀವು ವಿಡಿಯೋದಲ್ಲಿ ನೋಡಬಹುದು. ಸಂಗೀತ, ಡ್ರಮ್​​ ಬೀಟ್​​ಗಳ ಮಧ್ಯೆ, ಅವರ ಬೆಂಬಲಿಗರು ವೇದಿಕೆ ಮೇಲೆ ಹತ್ತಿ ಬಂದು ಯೋಗಿ ಆದಿತ್ಯನಾಥ್​​ಗೆ ಬಣ್ಣವನ್ನು ಹಾಕಿದ್ದಾರೆ. ಈ ವಿಡಿಯೋವನ್ನು ಸಿಎಂ ಯೋಗಿ ಆದಿತ್ಯನಾಥ್​ ಕೂಡ ಶೇರ್​ ಮಾಡಿಕೊಂಡಿದ್ದಾರೆ. ಕೊವಿಡ್​ 19 ಕಾರಣದಿಂದ ಕಳೆದ 2ವರ್ಷಗಳಿಂದಲೂ ದೇಶದಲ್ಲಿ ಹೋಳಿ ಸಂಭ್ರಮಕ್ಕೆ ಕಡಿವಾಣ ಬಿದ್ದಿತ್ತು. ಆದರೆ ಈಗ ಕೊರೊನಾ ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಮತ್ತೆ ಸಂಭ್ರಮ ಮುಗಿಲುಮುಟ್ಟಿದೆ.

ಇಂದು ಜನರಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಯೋಗಿ ಆದಿತ್ಯನಾಥ್​, ಹೋಳಿ ಹಬ್ಬದ ಶುಭ ಸಂದರ್ಭದಲ್ಲಿ ಸಕಲರಿಗೂ ಶುಭಾಶಯಗಳು. ಹೋಳಿ ಎಂಬುದು ಸಂತೋಷ ಮತ್ತು ಸಾಮಾಜಿಕ ಸಾಮರಸ್ಯದ ಸಂಕೇತವಾಗಿದೆ. ಈ ಹೋಳಿಯು ಎಲ್ಲರ ಬಾಳಿನಲ್ಲೂ ಸಂತೋಷ ಮತ್ತು ಸಮೃದ್ಧಿಯ ಬಣ್ಣವನ್ನು ತರಲಿ ಎಂದು ಹಾರೈಸಿದ್ದಾರೆ.  ಹಾಗೇ, ದೇಶದ ಪ್ರಧಾನಿ ನರೇಂದ್ರ ಮೋದಿಯವರೂ ಕೂಡ ಇಂದು ಹೋಳಿ ಹಬ್ಬದ ಶುಭಾಶಯ ಕೋರಿದ್ದರು. ಎಲ್ಲರಿಗೂ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಪರಸ್ಪರ ಪ್ರೀತಿ, ಭಾತೃತ್ವವನ್ನು ಸಾರುವ ಈ ಹಬ್ಬ ಎಲ್ಲರ ಬದುಕಲ್ಲೂ ಸಂತೋಷ ತರಲಿ ಎಂದು ಹೇಳಿದ್ದರು.

ಇದನ್ನೂ ಓದಿ: Video: ಈ ವ್ಯಾಪಾರಿಯ ಬಳಿ ಬಾಂಬೆ ಮಿಠಾಯಿ ಖರೀದಿ ಮಾಡೋದಿದ್ರೆ ಹಣ ಬೇಡ, ಬದಲಿಗೆ ಇದೊಂದು ವಸ್ತು ಕೊಡಿ ಸಾಕು !

Follow Us
Web contact
Web contact

TV9 Kannada

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!