AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಮನೆ ಹೆಸರು ಬಳಸಲು ಮಗುವಿಗೆ ಹಕ್ಕಿದೆ, ತಂದೆ ಅದನ್ನು ಆಕ್ಷೇಪಿಸುವಂತಿಲ್ಲ: ದೆಹಲಿ ಹೈಕೋರ್ಟ್​ ಮಹತ್ವದ ತೀರ್ಪು

ಮಗಳ ಹೆಸರು ಬದಲಿಸುವ ತಾಯಿಯ ನಿರ್ಧಾರ ಪ್ರಶ್ನಿಸಿ ತಂದೆಯೊಬ್ಬರು ಸಲ್ಲಿಸಿದ್ದ ಆಕ್ಷೇಪಣೆಯನ್ನು ದೆಹಲಿ ನ್ಯಾಯಾಲಯ ತಳ್ಳಿಹಾಕಿದೆ.

ತಾಯಿಯ ಮನೆ ಹೆಸರು ಬಳಸಲು ಮಗುವಿಗೆ ಹಕ್ಕಿದೆ, ತಂದೆ ಅದನ್ನು ಆಕ್ಷೇಪಿಸುವಂತಿಲ್ಲ: ದೆಹಲಿ ಹೈಕೋರ್ಟ್​ ಮಹತ್ವದ ತೀರ್ಪು
ದೆಹಲಿ ಹೈಕೋರ್ಟ್​
TV9 Web
| Edited By: |

Updated on:Aug 06, 2021 | 10:46 PM

Share

ದೆಹಲಿ: ಮಗುವಿಗೆ ಆಕ್ಷೇಪ ಇಲ್ಲದಿದ್ದರೆ ತಾಯಿಯ ಮನೆತನದ ಹೆಸರನ್ನು ಅದು ಬಳಸಬಹುದು. ತಂದೆಗೆ ಅದನ್ನು ತಡೆಯುವ ಅಧಿಕಾರ ಇಲ್ಲ ಎಂದು ದೆಹಲಿ ಹೈಕೋರ್ಟ್​ ಶುಕ್ರವಾರ ಮಹತ್ವದ ತೀರ್ಪು ನೀಡಿದೆ. ಮಗಳ ಹೆಸರು ಬದಲಿಸುವ ತಾಯಿಯ ನಿರ್ಧಾರ ಪ್ರಶ್ನಿಸಿ ತಂದೆಯೊಬ್ಬರು ಸಲ್ಲಿಸಿದ್ದ ಆಕ್ಷೇಪಣೆಯನ್ನು ದೆಹಲಿ ನ್ಯಾಯಾಲಯ ತಳ್ಳಿಹಾಕಿದೆ.

ಈ ಅಪ್ರಾಪ್ತ ಬಾಲಕಿಗೆ ತನ್ನ ಹೆಸರಿನ ಬಗ್ಗೆ ಖುಷಿಯಿದೆ. ಆ ಹೆಸರು ಮಗುವಿಗೆ ಬೇಡ ಎಂದು ಹೇಳಲು ನೀವ್ಯಾರು? ನೀವು ಮಗುವನ್ನು ನೋಡಿಕೊಳ್ಳುತ್ತಿಲ್ಲ, ಮಗುವಿನ ಜೊತೆಗೆ ವಾಸವಿಲ್ಲ ಎಂದು ನ್ಯಾಯಮೂರ್ತಿ ರೇಖಾ ಪಾಟೀಲ್ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದ ತಂದೆಗೆ ಹೇಳಿದರು. ಇಂಥ ವಿಷಯದ ಬಗ್ಗೆ ನೀವಿಬ್ಬರೂ ಕಿತ್ತಾಡುತ್ತಿದ್ದೀರಿ ಎನ್ನುವುದು ದುರಾದೃಷ್ಟಕರ ಸಂಗತಿ. ಆಕೆಯ ಭವಿಷ್ಯವನ್ನು ನೀವು ಹೀಗೆ ಜಗಳ ಮಾಡಿಕೊಂಡೇ ನಿರ್ಧರಿಸುವಿರಾ ಎಂದು ಕಿವಿಹಿಂಡಿದರು.

ಪೂರ್ವ ದೆಹಲಿ ಮುನಿಸಿಪಲ್ ಕಾರ್ಪೊರೇಷನ್​ನಿಂದ ಮಗುವಿನ ಜನನ ಪ್ರಮಾಣ ಪತ್ರ ತರಿಸಿ ಪರಿಶೀಲಿಸಿದ ನ್ಯಾಯಾಲಯವು, ಹೆಸರು ಬದಲಾವಣೆಯಾದರೆ ಮಗುವಿನ ಹೆಸರಿನಲ್ಲಿ ಇರುವ ಜೀವವಿಮೆ ಬಾಂಡ್ ಅಮಾನ್ಯವಾಗುತ್ತದೆ ಎಂಬ ತಂದೆಯ ಆಕ್ಷೇಪವನ್ನು ಒಪ್ಪಲು ಆಗುವುದಿಲ್ಲ. ಈ ಬಗ್ಗೆ ಅವರು ಸರಿಯಾಗಿ ತಿಳಿದುಕೊಳ್ಳಬೇಕು. ಮಾಜಿ ಪತ್ನಿಯ ವಿರುದ್ಧ ತಮ್ಮ ಸಿಟ್ಟು ತೋರಿಸಿಕೊಳ್ಳಲು ಹೀಗೆ ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿತು.

ಮಗುವಿನ ತಂದೆಯ ಹೆಸರನ್ನು ಶಾಲೆಯ ದಾಖಲೆಗಳಲ್ಲಿ ತೋರಿಸುತ್ತಿಲ್ಲ ಎಂಬ ತಂದೆಯ ಅಳಲನ್ನು ಕೋರ್ಟ್ ಮಾನ್ಯ ಮಾಡಿತು. ತಮ್ಮ ಹೆಸರನ್ನು ಶಾಲಾ ದಾಖಲೆಗಳಲ್ಲಿ ನಮೂದಿಸುವಂತೆ ಅವರು ಶಾಲೆಗೆ ಸೂಕ್ತ ಅರ್ಜಿ ನೀಡಬೇಕು ಎಂದು ನಿರ್ದೇಶನ ನೀಡಿತು. ಈ ಬಗ್ಗೆ ಯಾವುದೇ ಆಕ್ಷೇಪವಿದ್ದರೆ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಹಾಕಿಕೊಳ್ಳಬಹುದು ಎಂದು ನ್ಯಾಯಪೀಠ ಸಲಹೆ ಮಾಡಿತು.

(Child can use mothers surname father cannot dictate choice says Delhi high court)

ಇದನ್ನೂ ಓದಿ: Swami Ramdev: ಅಲೋಪಥಿ ಬಗ್ಗೆ ವಿವಾದಿತ ಹೇಳಿಕೆ; ದೆಹಲಿ ಹೈಕೋರ್ಟ್​ನಿಂದ ಬಾಬಾ ರಾಮ್​ದೇವ್​ಗೆ ನೋಟಿಸ್ ಜಾರಿ

ಇದನ್ನೂ ಓದಿ: ಇವಿಎಂ ಬಳಕೆ ವಿರುದ್ಧದ ಮನವಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

Published On - 10:42 pm, Fri, 6 August 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ