AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತೀಶ್ ಕುಮಾರ್ ಬೆಂಗಾವಲು ಪಡೆಗಾಗಿ ಸಂಚಾರ ನಿರ್ಬಂಧ; ಮಗು ಜೀವನ್ಮರಣ ಹೋರಾಟದಲ್ಲಿದೆ ಎಂದರೂ ಆ್ಯಂಬುಲೆನ್ಸ್​​ನ್ನು ಬಿಡಲಿಲ್ಲ

ಮಗು ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ ಮಹಿಳೆ  ಕಣ್ಣೀರಾಗಿದ್ದಾರೆ. ನಿತೀಶ್ ಕುಮಾರ್ ಅವರ ಬೆಂಗಾವಲು ಪಡೆ ಹಾದುಹೋಗುವವರೆಗೆ ಆಂಬ್ಯುಲೆನ್ಸ್ ಒಂದು ಗಂಟೆ ಆ ಪ್ರದೇಶದಲ್ಲಿಯೇ ಇರಬೇಕಾಯಿತು. ನಳಂದದಲ್ಲಿ ಎಥೆನಾಲ್ ಕಾರ್ಖಾನೆಯನ್ನು ಉದ್ಘಾಟಿಸಿದ ನಂತರ ನಿತೀಶ್ ಕುಮಾರ್ ಇಂದು ಪಾಟ್ನಾಗೆ ಹಿಂತಿರುಗುತ್ತಿದ್ದರು.

ನಿತೀಶ್ ಕುಮಾರ್ ಬೆಂಗಾವಲು ಪಡೆಗಾಗಿ ಸಂಚಾರ ನಿರ್ಬಂಧ; ಮಗು ಜೀವನ್ಮರಣ ಹೋರಾಟದಲ್ಲಿದೆ ಎಂದರೂ ಆ್ಯಂಬುಲೆನ್ಸ್​​ನ್ನು ಬಿಡಲಿಲ್ಲ
ಟ್ರಾಫಿಕ್​​ನಲ್ಲಿ ಸಿಕ್ಕಿಹಾಕಿಕೊಂಡ ಆ್ಯಂಬುಲೆನ್ಸ್​​​ನಲ್ಲಿದ್ದ ಮಹಿಳೆ
ರಶ್ಮಿ ಕಲ್ಲಕಟ್ಟ
|

Updated on: Sep 30, 2023 | 7:17 PM

Share

ಪಾಟ್ನಾ  ಸೆಪ್ಟೆಂಬರ್30: ಬಿಹಾರ (Bihar) ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಅವರ ಬೆಂಗಾವಲು ಪಡೆ ಆ ದಾರಿಯಾಗಿ ಹಾದು ಹೋಗುತ್ತಿದ್ದುದರಿಂದ ಇತರ ವಾಹನಗಳಿಗೆ ಸಂಚಾರ ನಿರ್ಬಂಧ ಹೇರಲಾಗಿತ್ತು. ಭಾರೀ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಆಂಬ್ಯುಲೆನ್ಸ್‌ನೊಳಗೆ ಮಗುವನ್ನು ಹಿಡಿದಿದ್ದ ಮಹಿಳೆ , ತಾಳ್ಮೆ ಕಳೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ ಘಟನೆ ಪಾಟ್ನಾ ಸಮೀಪದ ಫತುಹಾದಲ್ಲಿ ನಡೆದಿದೆ. ಮಗು ಜೀವನ್ಮರಣ ಹೋರಾಟ ನಡೆಸುತ್ತಿರುವುದರಿಂದ ತಮ್ಮನ್ನು ಬಿಡುವಂತೆ ಆಕೆ ಪೊಲೀಸರಲ್ಲಿ ಪರಿಪರಿಯಾಗಿ ಬೇಡಿಕೊಂಡಿದ್ದಾಳೆ. ಆದರೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ಪಡೆ ಈ ಪ್ರದೇಶದಲ್ಲಿ ಹಾದು ಹೋಗುವ ಕಾರಣ ಪೊಲೀಸರು ಆಂಬ್ಯುಲೆನ್ಸ್‌ಗೆ ತೆರಳಲು ಅವಕಾಶ ನೀಡಲಿಲ್ಲ.

ಮಗು ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ ಮಹಿಳೆ  ಕಣ್ಣೀರಾಗಿದ್ದಾರೆ. ನಿತೀಶ್ ಕುಮಾರ್ ಅವರ ಬೆಂಗಾವಲು ಪಡೆ ಹಾದುಹೋಗುವವರೆಗೆ ಆಂಬ್ಯುಲೆನ್ಸ್ ಒಂದು ಗಂಟೆ ಆ ಪ್ರದೇಶದಲ್ಲಿಯೇ ಇರಬೇಕಾಯಿತು. ನಳಂದದಲ್ಲಿ ಎಥೆನಾಲ್ ಕಾರ್ಖಾನೆಯನ್ನು ಉದ್ಘಾಟಿಸಿದ ನಂತರ ನಿತೀಶ್ ಕುಮಾರ್ ಇಂದು ಪಾಟ್ನಾಗೆ ಹಿಂತಿರುಗುತ್ತಿದ್ದರು.

ಮುಖ್ಯಮಂತ್ರಿ ಬೆಂಗಾವಲು ಪಡೆ ಸಾಗಲು ಪಾಟ್ನಾ ಪೊಲೀಸರು ಎಲ್ಲಾ ವಾಹನಗಳನ್ನು ತಡೆದಿದ್ದರು. ದುರದೃಷ್ಟವಶಾತ್, ಜನನಿಬಿಡ ರಸ್ತೆಯಲ್ಲಿ ಪೊಲೀಸರು ಎಲ್ಲಾ ಸಂಚಾರವನ್ನು ನಿಲ್ಲಿಸುತ್ತಿದ್ದಂತೆಯೇ ಆಂಬ್ಯುಲೆನ್ಸ್ ಆ ಪ್ರದೇಶವನ್ನು ತಲುಪಿತು.

ಫತುಹಾದಿಂದ ಪಾಟ್ನಾಗೆ ಹೋಗುತ್ತಿದ್ದೇವೆ ಎಂದು ಪೊಲೀಸರಿಗೆ ತಿಳಿಸಿರುವುದಾಗಿ ಆಂಬ್ಯುಲೆನ್ಸ್ ಚಾಲಕ ಹೇಳಿದ್ದರು. ಆದರೆ ಆಂಬ್ಯುಲೆನ್ಸ್‌ನಲ್ಲಿದ್ದ ಮಗು ಮತ್ತು ಆತಂಕಗೊಂಡ ತಾಯಿಯ ಸ್ಥಿತಿಯನ್ನು ಕಂಡರೂ ಪೊಲೀಸರು ಅವರನ್ನು ಹೋಗಲು ಬಿಡಲಿಲ್ಲ ಎಂದು ಚಾಲಕ ಹೇಳಿದ್ದಾರೆ.

ಇದನ್ನೂ ಓದಿ: ಒಂದು ವಾರದ ಸಂಕಲ್ಪ ಸಪ್ತಾಹಕ್ಕೆ ಪ್ರಧಾನಿ ಮೋದಿ ಚಾಲನೆ

ಒಂದು ತಿಂಗಳ ಹಿಂದೆ ಪಾಟ್ನಾದಲ್ಲಿ ಮುಖ್ಯಮಂತ್ರಿಗಳ ಬೆಂಗಾವಲು ಪಡೆ ಹಾದುಹೋಗಲು ಆಂಬ್ಯುಲೆನ್ಸ್ ಅನ್ನು ನಿಲ್ಲಿಸಿದಾಗ ಇದೇ ರೀತಿಯ ಘಟನೆ ವರದಿಯಾಗಿದೆ. ನಂತರ ಆಂಬ್ಯುಲೆನ್ಸ್ ನಿಲ್ಲಿಸಿದ ಪೊಲೀಸರನ್ನು ಗುರುತಿಸಿದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ