AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಪಾಲಕರು ಮೃತಪಟ್ಟು ಅನಾಥರಾದ ಮಕ್ಕಳ ಹೊಣೆಯನ್ನು ಜಿಲ್ಲಾಡಳಿತಗಳಿಗೆ ವಹಿಸಿದ ಸುಪ್ರೀಂಕೋರ್ಟ್

ಕೊರೊನಾದಿಂದ ತಂದೆ, ತಾಯಿ ಕಳೆದುಕೊಂಡು ಅನಾಥ ಮಕ್ಕಳ ಅಗತ್ಯತೆಗಳನ್ನು ತಕ್ಷಣವೇ ಪೂರೈಸಲು ಜಿಲ್ಲಾಡಳಿತಗಳಿಗೆ ದೇಶದ ಪರಮೋಚ್ಛ ನ್ಯಾಯಪೀಠ ಸೂಚನೆ ನೀಡಿದೆ.

ಕೊರೊನಾದಿಂದ ಪಾಲಕರು ಮೃತಪಟ್ಟು ಅನಾಥರಾದ ಮಕ್ಕಳ ಹೊಣೆಯನ್ನು ಜಿಲ್ಲಾಡಳಿತಗಳಿಗೆ ವಹಿಸಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್​
guruganesh bhat
|

Updated on:May 28, 2021 | 3:43 PM

Share

ದೆಹಲಿ: ಕೊರೊನಾದಿಂದ ಅನಾಥರಾದ ಮಕ್ಕಳ ಪಾಲನೆ ಹೊಣೆಯನ್ನು ಜಿಲ್ಲಾಡಳಿತಗಳು ವಹಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ದೇಶದ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ. ಕೊರೊನಾದಿಂದ ತಂದೆ, ತಾಯಿ ಕಳೆದುಕೊಂಡು ಅನಾಥ ಮಕ್ಕಳ ಅಗತ್ಯತೆಗಳನ್ನು ತಕ್ಷಣವೇ ಪೂರೈಸಲು ಜಿಲ್ಲಾಡಳಿತಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ದೇಶಾದ್ಯಂತ ಕೊರೊನಾದಿಂದ ಅನಾಥರಾದ ಮಕ್ಕಳ ವಿವರ, ಅಂಕಿಅಂಶ ನೀಡಲು ಕೋರ್ಟ್ ಎಲ್ಲ ರಾಜ್ಯ ಸರ್ಕಾರಗಳಿಗೆ ತಿಳಿಸಿದ್ದು, ಎಲ್ಲ ರಾಜ್ಯಗಳು ಮಕ್ಕಳು ಹಸಿವಿನಿಂದ ಇರದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

ಕೊರೊನಾದಿಂದ ಅನಾಥರಾದ ಮಕ್ಕಳನ್ನು ಗುರುತಿಸಿ ಶನಿವಾರ ಸಂಜೆಯೊಳಗೆ ಅವರ ವಿವರವನ್ನು NCPCR ವೆಬ್ ಸೈಟ್ ಗೆ ಅಪ್ಲೋಡ್ ಮಾಡುವಂತೆ ಜಿಲ್ಲಾಡಳಿತಗಳಿಗೆ ಸುಪ್ರೀಂಕೋರ್ಟ್ ಸೂಚಿಸಿದೆ. ಜತೆಗೆ ಅನಾಥ ಮಕ್ಕಳ ಬಗ್ಗೆ ಸುಪ್ರೀಂ ಕೋರ್ಟ್ ಆದೇಶಕ್ಕೆ ಕಾಯದೇ ಮಕ್ಕಳನ್ನ ನೋಡಿಕೊಳ್ಳಬೇಕು ಎಂದು ಸಹ ತಿಳಿಸಿರುವ ಕೋರ್ಟ್, ಮುಂದಿನ ಮಂಗಳವಾರ ಈ ಕುರಿತು ವಿಚಾರಣೆ ಮುಂದುವರೆಸುವುದಾಗಿ ತಿಳಿಸಿದೆ.

ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಮಕ್ಕಳಿಗೆ ವಿಶೇಷ ಪರಿಹಾರ ನೀಡುವ ಬಗ್ಗೆ ನಿನ್ನೆಯ (ಮೇ 27) ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿತ್ತು. ಕೇಂದ್ರದಿಂದ ಈ ಬಗ್ಗೆ ಹೊಸ ಮಾರ್ಗಸೂಚಿ ಬರಲಿದೆ. ಆ ಬಳಿಕ ಬಂದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದರು. ಇದೀಗ ಸುಪ್ರೀಂಕೋರ್ಟ್ ಈ ಕುರಿತು ನಿರ್ದೇಶನ ನೀಡಿರುವುದರಿಂದ ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯ ಸರ್ಕಾರಗಳು ಮಕ್ಕಳನ್ನು ಕಾಪಾಡುವ ನಿಟ್ಟಿನಲ್ಲಿ ತ್ವರಿತ ಗತಿಯಲ್ಲಿ ಪ್ಯಾಕೇಜ್ ಘೋಷಿಸುವ ನಿರೀಕ್ಷೆ ಇದೆ.

ಇದನ್ನೂ ಓದಿ: 

ಕೊವಿಡ್​ ಸೋಂಕಿನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ 3 ಲಕ್ಷ ರೂ.ಪರಿಹಾರ, ಪ್ರತಿ ತಿಂಗಳೂ 2000 ರೂ.: ಕೇರಳ ಸಿಎಂ ಘೋಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಒಂದರಲ್ಲೇ ಈವರೆಗೆ 1350 ಮಕ್ಕಳಲ್ಲಿ ಕೊವಿಡ್ ಸೋಂಕು ದೃಢ

(State govt provides immediate relief fun say supreme court)

Published On - 3:28 pm, Fri, 28 May 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ