AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಪಾಲಕರು ಮೃತಪಟ್ಟು ಅನಾಥರಾದ ಮಕ್ಕಳ ಹೊಣೆಯನ್ನು ಜಿಲ್ಲಾಡಳಿತಗಳಿಗೆ ವಹಿಸಿದ ಸುಪ್ರೀಂಕೋರ್ಟ್

ಕೊರೊನಾದಿಂದ ತಂದೆ, ತಾಯಿ ಕಳೆದುಕೊಂಡು ಅನಾಥ ಮಕ್ಕಳ ಅಗತ್ಯತೆಗಳನ್ನು ತಕ್ಷಣವೇ ಪೂರೈಸಲು ಜಿಲ್ಲಾಡಳಿತಗಳಿಗೆ ದೇಶದ ಪರಮೋಚ್ಛ ನ್ಯಾಯಪೀಠ ಸೂಚನೆ ನೀಡಿದೆ.

ಕೊರೊನಾದಿಂದ ಪಾಲಕರು ಮೃತಪಟ್ಟು ಅನಾಥರಾದ ಮಕ್ಕಳ ಹೊಣೆಯನ್ನು ಜಿಲ್ಲಾಡಳಿತಗಳಿಗೆ ವಹಿಸಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್​
guruganesh bhat
|

Updated on:May 28, 2021 | 3:43 PM

Share

ದೆಹಲಿ: ಕೊರೊನಾದಿಂದ ಅನಾಥರಾದ ಮಕ್ಕಳ ಪಾಲನೆ ಹೊಣೆಯನ್ನು ಜಿಲ್ಲಾಡಳಿತಗಳು ವಹಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ದೇಶದ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ. ಕೊರೊನಾದಿಂದ ತಂದೆ, ತಾಯಿ ಕಳೆದುಕೊಂಡು ಅನಾಥ ಮಕ್ಕಳ ಅಗತ್ಯತೆಗಳನ್ನು ತಕ್ಷಣವೇ ಪೂರೈಸಲು ಜಿಲ್ಲಾಡಳಿತಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ದೇಶಾದ್ಯಂತ ಕೊರೊನಾದಿಂದ ಅನಾಥರಾದ ಮಕ್ಕಳ ವಿವರ, ಅಂಕಿಅಂಶ ನೀಡಲು ಕೋರ್ಟ್ ಎಲ್ಲ ರಾಜ್ಯ ಸರ್ಕಾರಗಳಿಗೆ ತಿಳಿಸಿದ್ದು, ಎಲ್ಲ ರಾಜ್ಯಗಳು ಮಕ್ಕಳು ಹಸಿವಿನಿಂದ ಇರದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

ಕೊರೊನಾದಿಂದ ಅನಾಥರಾದ ಮಕ್ಕಳನ್ನು ಗುರುತಿಸಿ ಶನಿವಾರ ಸಂಜೆಯೊಳಗೆ ಅವರ ವಿವರವನ್ನು NCPCR ವೆಬ್ ಸೈಟ್ ಗೆ ಅಪ್ಲೋಡ್ ಮಾಡುವಂತೆ ಜಿಲ್ಲಾಡಳಿತಗಳಿಗೆ ಸುಪ್ರೀಂಕೋರ್ಟ್ ಸೂಚಿಸಿದೆ. ಜತೆಗೆ ಅನಾಥ ಮಕ್ಕಳ ಬಗ್ಗೆ ಸುಪ್ರೀಂ ಕೋರ್ಟ್ ಆದೇಶಕ್ಕೆ ಕಾಯದೇ ಮಕ್ಕಳನ್ನ ನೋಡಿಕೊಳ್ಳಬೇಕು ಎಂದು ಸಹ ತಿಳಿಸಿರುವ ಕೋರ್ಟ್, ಮುಂದಿನ ಮಂಗಳವಾರ ಈ ಕುರಿತು ವಿಚಾರಣೆ ಮುಂದುವರೆಸುವುದಾಗಿ ತಿಳಿಸಿದೆ.

ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಮಕ್ಕಳಿಗೆ ವಿಶೇಷ ಪರಿಹಾರ ನೀಡುವ ಬಗ್ಗೆ ನಿನ್ನೆಯ (ಮೇ 27) ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿತ್ತು. ಕೇಂದ್ರದಿಂದ ಈ ಬಗ್ಗೆ ಹೊಸ ಮಾರ್ಗಸೂಚಿ ಬರಲಿದೆ. ಆ ಬಳಿಕ ಬಂದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದರು. ಇದೀಗ ಸುಪ್ರೀಂಕೋರ್ಟ್ ಈ ಕುರಿತು ನಿರ್ದೇಶನ ನೀಡಿರುವುದರಿಂದ ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯ ಸರ್ಕಾರಗಳು ಮಕ್ಕಳನ್ನು ಕಾಪಾಡುವ ನಿಟ್ಟಿನಲ್ಲಿ ತ್ವರಿತ ಗತಿಯಲ್ಲಿ ಪ್ಯಾಕೇಜ್ ಘೋಷಿಸುವ ನಿರೀಕ್ಷೆ ಇದೆ.

ಇದನ್ನೂ ಓದಿ: 

ಕೊವಿಡ್​ ಸೋಂಕಿನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ 3 ಲಕ್ಷ ರೂ.ಪರಿಹಾರ, ಪ್ರತಿ ತಿಂಗಳೂ 2000 ರೂ.: ಕೇರಳ ಸಿಎಂ ಘೋಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಒಂದರಲ್ಲೇ ಈವರೆಗೆ 1350 ಮಕ್ಕಳಲ್ಲಿ ಕೊವಿಡ್ ಸೋಂಕು ದೃಢ

(State govt provides immediate relief fun say supreme court)

Published On - 3:28 pm, Fri, 28 May 21

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?