AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಪಾಲಕರು ಮೃತಪಟ್ಟು ಅನಾಥರಾದ ಮಕ್ಕಳ ಹೊಣೆಯನ್ನು ಜಿಲ್ಲಾಡಳಿತಗಳಿಗೆ ವಹಿಸಿದ ಸುಪ್ರೀಂಕೋರ್ಟ್

ಕೊರೊನಾದಿಂದ ತಂದೆ, ತಾಯಿ ಕಳೆದುಕೊಂಡು ಅನಾಥ ಮಕ್ಕಳ ಅಗತ್ಯತೆಗಳನ್ನು ತಕ್ಷಣವೇ ಪೂರೈಸಲು ಜಿಲ್ಲಾಡಳಿತಗಳಿಗೆ ದೇಶದ ಪರಮೋಚ್ಛ ನ್ಯಾಯಪೀಠ ಸೂಚನೆ ನೀಡಿದೆ.

ಕೊರೊನಾದಿಂದ ಪಾಲಕರು ಮೃತಪಟ್ಟು ಅನಾಥರಾದ ಮಕ್ಕಳ ಹೊಣೆಯನ್ನು ಜಿಲ್ಲಾಡಳಿತಗಳಿಗೆ ವಹಿಸಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್​
guruganesh bhat
|

Updated on:May 28, 2021 | 3:43 PM

Share

ದೆಹಲಿ: ಕೊರೊನಾದಿಂದ ಅನಾಥರಾದ ಮಕ್ಕಳ ಪಾಲನೆ ಹೊಣೆಯನ್ನು ಜಿಲ್ಲಾಡಳಿತಗಳು ವಹಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ದೇಶದ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ. ಕೊರೊನಾದಿಂದ ತಂದೆ, ತಾಯಿ ಕಳೆದುಕೊಂಡು ಅನಾಥ ಮಕ್ಕಳ ಅಗತ್ಯತೆಗಳನ್ನು ತಕ್ಷಣವೇ ಪೂರೈಸಲು ಜಿಲ್ಲಾಡಳಿತಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ದೇಶಾದ್ಯಂತ ಕೊರೊನಾದಿಂದ ಅನಾಥರಾದ ಮಕ್ಕಳ ವಿವರ, ಅಂಕಿಅಂಶ ನೀಡಲು ಕೋರ್ಟ್ ಎಲ್ಲ ರಾಜ್ಯ ಸರ್ಕಾರಗಳಿಗೆ ತಿಳಿಸಿದ್ದು, ಎಲ್ಲ ರಾಜ್ಯಗಳು ಮಕ್ಕಳು ಹಸಿವಿನಿಂದ ಇರದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

ಕೊರೊನಾದಿಂದ ಅನಾಥರಾದ ಮಕ್ಕಳನ್ನು ಗುರುತಿಸಿ ಶನಿವಾರ ಸಂಜೆಯೊಳಗೆ ಅವರ ವಿವರವನ್ನು NCPCR ವೆಬ್ ಸೈಟ್ ಗೆ ಅಪ್ಲೋಡ್ ಮಾಡುವಂತೆ ಜಿಲ್ಲಾಡಳಿತಗಳಿಗೆ ಸುಪ್ರೀಂಕೋರ್ಟ್ ಸೂಚಿಸಿದೆ. ಜತೆಗೆ ಅನಾಥ ಮಕ್ಕಳ ಬಗ್ಗೆ ಸುಪ್ರೀಂ ಕೋರ್ಟ್ ಆದೇಶಕ್ಕೆ ಕಾಯದೇ ಮಕ್ಕಳನ್ನ ನೋಡಿಕೊಳ್ಳಬೇಕು ಎಂದು ಸಹ ತಿಳಿಸಿರುವ ಕೋರ್ಟ್, ಮುಂದಿನ ಮಂಗಳವಾರ ಈ ಕುರಿತು ವಿಚಾರಣೆ ಮುಂದುವರೆಸುವುದಾಗಿ ತಿಳಿಸಿದೆ.

ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಮಕ್ಕಳಿಗೆ ವಿಶೇಷ ಪರಿಹಾರ ನೀಡುವ ಬಗ್ಗೆ ನಿನ್ನೆಯ (ಮೇ 27) ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿತ್ತು. ಕೇಂದ್ರದಿಂದ ಈ ಬಗ್ಗೆ ಹೊಸ ಮಾರ್ಗಸೂಚಿ ಬರಲಿದೆ. ಆ ಬಳಿಕ ಬಂದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದರು. ಇದೀಗ ಸುಪ್ರೀಂಕೋರ್ಟ್ ಈ ಕುರಿತು ನಿರ್ದೇಶನ ನೀಡಿರುವುದರಿಂದ ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯ ಸರ್ಕಾರಗಳು ಮಕ್ಕಳನ್ನು ಕಾಪಾಡುವ ನಿಟ್ಟಿನಲ್ಲಿ ತ್ವರಿತ ಗತಿಯಲ್ಲಿ ಪ್ಯಾಕೇಜ್ ಘೋಷಿಸುವ ನಿರೀಕ್ಷೆ ಇದೆ.

ಇದನ್ನೂ ಓದಿ: 

ಕೊವಿಡ್​ ಸೋಂಕಿನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ 3 ಲಕ್ಷ ರೂ.ಪರಿಹಾರ, ಪ್ರತಿ ತಿಂಗಳೂ 2000 ರೂ.: ಕೇರಳ ಸಿಎಂ ಘೋಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಒಂದರಲ್ಲೇ ಈವರೆಗೆ 1350 ಮಕ್ಕಳಲ್ಲಿ ಕೊವಿಡ್ ಸೋಂಕು ದೃಢ

(State govt provides immediate relief fun say supreme court)

Published On - 3:28 pm, Fri, 28 May 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!