AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Children’s Day 2023: ಇಂದು ಮಕ್ಕಳ ದಿನಾಚರಣೆ; ಚಾಚಾ ನೆಹರು ಜನ್ಮದಿನದಂದೇ ಯಾಕೆ ಆಚರಿಸಲಾಗುತ್ತದೆ? ಇಲ್ಲಿದೆ ಕಾರಣ

ಪ್ರತಿ ವರ್ಷ ನವೆಂಬರ್ 14 ರಂದು ಭಾರತದಾದ್ಯಂತ ಮಕ್ಕಳ ದಿನಚಾರಣೆ ಆಚರಿಸಲಾಗುತ್ತದೆ. ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮ ವಾರ್ಷಿಕೋತ್ಸವದ ನೆನಪಿಗಾಗಿ ಇದನ್ನು ಆಚರಿಸಲಾಗುತ್ತದೆ.

Children’s Day 2023: ಇಂದು ಮಕ್ಕಳ ದಿನಾಚರಣೆ; ಚಾಚಾ ನೆಹರು ಜನ್ಮದಿನದಂದೇ ಯಾಕೆ ಆಚರಿಸಲಾಗುತ್ತದೆ? ಇಲ್ಲಿದೆ ಕಾರಣ
ದೇಶದ ಮೊದಲ ಜವಾಹರಲಾಲ್​ ನೆಹರು
ವಿವೇಕ ಬಿರಾದಾರ
|

Updated on: Nov 14, 2023 | 10:04 AM

Share

ನವೆಂಬರ್ 14 ಬರೀ ಕ್ಯಾಲೆಂಡರ್‌ನಲ್ಲಿ ಇರುವ ದಿನಾಂಕವಲ್ಲ. ಬದಲಾಗಿ ಪ್ರತಿ ಮಗುವಿನಲ್ಲೂ ಇರುವ ಮುಗ್ಧತೆ, ಸಂತೋಷ ಹಾಗೂ ಮಿತಿಯಿಲ್ಲದ ಸಾಮರ್ಥ್ಯದ ಆಚರಣೆಯಾಗಿದೆ. ಹೌದು ಪ್ರತಿ ವರ್ಷ ನವೆಂಬರ್ 14 ರಂದು ಭಾರತದಾದ್ಯಂತ ಮಕ್ಕಳ ದಿನಚಾರಣೆ (Childrens Day) ಆಚರಿಸಲಾಗುತ್ತದೆ. ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು (Jawaharlal Nehru) ಅವರ ಜನ್ಮ ವಾರ್ಷಿಕೋತ್ಸವದ ನೆನಪಿಗಾಗಿ ಇದನ್ನು ಆಚರಿಸಲಾಗುತ್ತದೆ. ‘ಚಾಚಾ ನೆಹರು’ ಎಂದು ಜನಪ್ರಿಯರಾಗಿದ್ದ ಪಂಡಿತ್ ನೆಹರು ಚಾಚಾ ನೆಹರೂ ಅವರಿಗೆ ಮಕ್ಕಳೆಂದರೆ ಪ್ರೀತಿ. ಮಕ್ಕಳೇ ದೇಶದ ಭವಿಷ್ಯ ಎನ್ನುತ್ತಿದ್ದರು. ಹೀಗಾಗಿ ಅವರ ಜನ್ಮದಿನವನ್ನೇ ಮಕ್ಕಳ ದಿನವನ್ನಾಗಿ ಆಚರಿಸುವ ಪರಿಪಾಠ ಬೆಳೆದು ಬಂದಿದೆ. ಚಿಣ್ಣರ ಹಕ್ಕುಗಳು, ಕಾಳಜಿ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನವನ್ನು ಆರಂಭಿಸಲಾಗಿದೆ.

ಭಾರತದಲ್ಲಿ ಆರಂಭದಲ್ಲಿ ನವೆಂಬರ್ 20 ರಂದು ಮಕ್ಕಳ ದಿನವನ್ನು ಆಚರಣೆ ಮಾಡಲಾಗುತ್ತಿತ್ತು. ಆದರೆ, ಭಾರತದ ಪ್ರಥಮ ಪ್ರಧಾನಿ ಜವಾಹರ್‌ಲಾಲ್ ನೆಹರೂ ಅವರ ಮರಣದ ನಂತರ, ಅವರ ಜನ್ಮದಿನವನ್ನು ಮಕ್ಕಳ ದಿನವಾಗಿ ಆಚರಿಸಲಾಗುತ್ತಿದೆ.

ಮಕ್ಕಳ ದಿನವನ್ನು ಏಕೆ ಆಚರಿಸಲಾಗುತ್ತದೆ?

ದೇಶದ ಮಕ್ಕಳಿಗೆ ಅಗತ್ಯ ಶಿಕ್ಷಣವನ್ನು ಪೂರೈಸಬೇಕೆಂಬುದು ಅವರ ಮುಖ್ಯ ಧ್ಯೇಯ ಆಗಿತ್ತು. ಆದ್ದರಿಂದ ಅವರ ಸವಿನೆನಪಿಗಾಗಿ ಅವರ ಜನ್ಮ ದಿನಾಂಕದಂದೇ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮಕ್ಕಳ ನೆಚ್ಚಿನ ಚಾಚ ಜವಾಹರಲಾಲ್‌ ನೆಹರೂ ರವರು ‘Tomorrow is Yours’ (ನಾಳೆ ನಿಮ್ಮದು) ಎಂದು ಮಕ್ಕಳಿಗೆ ಯಾವಾಗಲೂ ಹೇಳುತ್ತಿದ್ದರು. ಮಕ್ಕಳೇ ಈ ದೇಶದ ಭವಿಷ್ಯ ಎಂದು ಜವಾಹರಲಾಲ್ ನೆಹರು ನಂಬಿದ್ದರು. ಮಕ್ಕಳು ಉತ್ತಮ ಶಿಕ್ಷಣ ಪಡೆದರೆ ಅದ್ಭುತಗಳನ್ನು ಸೃಷ್ಟಿಸಬಹುದು. ಭಾರತದ ಎಲ್ಲಾ ವಯಸ್ಸಿನ, ಲಿಂಗ ಮತ್ತು ರಾಜ್ಯಗಳ ಮಕ್ಕಳಿಗೆ ಹೆಚ್ಚಿನ ಶೈಕ್ಷಣಿಕ ಮತ್ತು ಜೀವನ ಸೌಲಭ್ಯಗಳಿಗೆ ದಾರಿ ಮಾಡಿಕೊಟ್ಟದ್ದು ಅವರ ಬಲವಾದ ದೃಷ್ಟಿಯಾಗಿದೆ.

ಜವಾಹರ್ ಲಾಲ್ ನೆಹರು ಅವರ ಬಗೆಗಿನ ಕುತೂಹಲಕಾರಿ ಸಂಗತಿಗಳು

  • 1950-1955ರ ಅವಧಿಯಲ್ಲಿ ಶಾಂತಿಗಾಗಿ ನೋಬಲ್ ಪ್ರಶಸ್ತಿಗೆ 11 ಬಾರಿ ನಾಮನಿರ್ದೇಶನಗೊಂಡರು.
  • 1929 ರಲ್ಲಿ, ನೆಹರು ಅವರು ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಏರಿದರು. ಅಂದಿನಿಂದ ಕಾಂಗ್ರೆಸ್ ನೇತೃತ್ವದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದರು.
  • 1935 ರಲ್ಲಿ ಜೈಲಿನಲ್ಲಿದ್ದುಕೊಂಡೇ ತಮ್ಮ ಆತ್ಮಚರಿತ್ರೆಯನ್ನು ಬರೆದರು. ನೆಹರೂ ಬರೆದ “ಸ್ವಾತಂತ್ರ್ಯದ ಕಡೆಗೆ” ಎಂಬ ಪುಸ್ತಕವನ್ನು 1936 ರಲ್ಲಿ ಯುಎಸ್​ಎನಲ್ಲಿ ಪ್ರಕಟಿಸಲಾಯಿತು.
  • ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ, ಪಂಡಿತ್ ಜವಾಹರಲಾಲ್ ನೆಹರು 9 ಬಾರಿ ಜೈಲುವಾಸ ಅನುಭವಿಸಿದರು. ನೆಹರೂ ಅವರನ್ನು ಬ್ರಿಟಿಷರು ಒಟ್ಟು 3259 ದಿನಗಳ ಕಾಲ ಜೈಲಿನಲ್ಲಿರಿಸಿದ್ದರು. ಅಂದರೆ ಅವರ ಜೀವನದ 9 ವರ್ಷಗಳ ಜೈಲಿನಲ್ಲಿ ಕಳೆದರು.
  • ಪಂಡಿತ್ ಜವಾಹರಲಾಲ್ ನೆಹರು ಅವರನ್ನು ಆಧುನಿಕ ಭಾರತದ ವಾಸ್ತುಶಿಲ್ಪಿ ಎಂದೂ ಕರೆಯುತ್ತಾರೆ.
  • ಜವಾಹರಲಾಲ್ ನೆಹರು ಅವರು ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇದೇ ಕಾರಣಕ್ಕೆ ಅವರನ್ನು ಪಂಡಿತ್ ನೆಹರು ಎಂದು ಕರೆಯಲಾಯಿತು.
  • ದೆಹಲಿಯ ಜವಾಹರಲಾಲ್ ನೆಹರು ಅವರ ನಿವಾಸ ತೀನ್ ಮೂರ್ತಿ ಭವನವನ್ನು ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯವಾಗಿ ಪರಿವರ್ತಿಸಲಾಯಿತು. ಮುಂಬೈ, ದೆಹಲಿ, ಬೆಂಗಳೂರು, ಅಲಹಾಬಾದ್ ಮತ್ತು ಪುಣೆಯಲ್ಲಿ ಐದು ನೆಹರು ತಾರಾಲಯಗಳನ್ನು ಸ್ಥಾಪಿಸಲಾಯಿತು.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?