AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ಆಸ್ಪತ್ರೆಯ ಮಕ್ಕಳ ವಾರ್ಡ್​​ನಲ್ಲಿ ಬೆಂಕಿ; ನವಜಾತ ಶಿಶುಗಳು, ವೈದ್ಯರು ಅಪಾಯದಲ್ಲಿ

ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ರೋಗಿಗಳನ್ನು ಇನ್ನೊಂದು ಆಸ್ಪತ್ರೆಗೆ ಸಾಗಿಸುವ ಕಾರ್ಯ ನಡೆಯುತ್ತಿದೆ. ಆಸ್ಪತ್ರೆಯಲ್ಲಿ ಬೆಂಕಿ ಬಿದ್ದ ವಿಷಯ ಕೇಳಿ ಅಲ್ಲಿ ಅಡ್ಮಿಟ್ ಆಗಿರುವ ಮಕ್ಕಳ ಕುಟುಂಬದವರು ಹಲವರು ಅಲ್ಲಿಗೆ ಧಾವಿಸಿದ್ದಾರೆ.

ಮಧ್ಯಪ್ರದೇಶದ ಆಸ್ಪತ್ರೆಯ ಮಕ್ಕಳ ವಾರ್ಡ್​​ನಲ್ಲಿ ಬೆಂಕಿ; ನವಜಾತ ಶಿಶುಗಳು, ವೈದ್ಯರು ಅಪಾಯದಲ್ಲಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 08, 2021 | 11:38 PM

Share

ಮಧ್ಯಪ್ರದೇಶದ ಭೋಪಾಲ್​​ನ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್​​ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಈ ಆಸ್ಪತ್ರೆಯ ಮೂರನೇ ಫ್ಲೋರ್​​ನಲ್ಲಿ ಮಕ್ಕಳ ವಾರ್ಡ್​ ಇದ್ದು, ಇಲ್ಲಿಯೇ ಬೆಂಕಿ ಹೊತ್ತಿಕೊಂಡಿತ್ತು. ಇಲ್ಲಿ ವೈದ್ಯರು, ನವಜಾತ ಶಿಶುಗಳು, ಮಕ್ಕಳು ಅವರ ಪಾಲಕರು ಸಿಕ್ಕಿಬಿದ್ದಿದ್ದು, ಬೆಂಕಿ ನಂದಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.  

ಇನ್ನು ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ರೋಗಿಗಳನ್ನು ಇನ್ನೊಂದು ಆಸ್ಪತ್ರೆಗೆ ಸಾಗಿಸುವ ಕಾರ್ಯ ನಡೆಯುತ್ತಿದೆ. ಆಸ್ಪತ್ರೆಯಲ್ಲಿ ಬೆಂಕಿ ಬಿದ್ದ ವಿಷಯ ಕೇಳಿ ಅಲ್ಲಿ ಅಡ್ಮಿಟ್ ಆಗಿರುವ ಮಕ್ಕಳ ಕುಟುಂಬದವರು ಹಲವರು ಅಲ್ಲಿಗೆ ಧಾವಿಸಿದ್ದಾರೆ. ಆದರೆ ಯಾರಿಗೂ ಆಸ್ಪತ್ರೆಯ ಒಳಗೆ ಬರಲು ಅವಕಾಶ ಮಾಡಿಕೊಟ್ಟಿಲ್ಲ. ಘಟನೆ ಬಗ್ಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್​ ಸಿಂಗ್ ಚೌಹಾಣ್​ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.  ವೈದ್ಯಕೀಯ ಶಿಕ್ಷಣ ಸಚಿವ ಸಾರಂಗ್​ ವಿಶ್ವಾಸ್​ ಅವರು ಆಸ್ಪತ್ರೆಗ ಭೇಟಿ ನೀಡಿದ್ದಾರೆ.

ಆಸ್ಪತ್ರೆಯ ರಕ್ಷಣಾ ಕಾರ್ಯಾಚರಣೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಶಿವರಾಜ್​ ಸಿಂಗ್ ಚೌಹಾಣ್​, ಬೆಂಕಿ ಬಿದ್ದ ವಾರ್ಡ್​ಗಳಿಂದ ಮಕ್ಕಳನ್ನು ಸುರಕ್ಷಿತ ಮಾಡುವ ಕಾರ್ಯ ನಡೆಯುತ್ತಿದೆ. ನಾನು ಅಲ್ಲಿನ ಪರಿಸ್ಥಿತಿಯ ಸಂಪೂರ್ಣ ವರದಿ ತರಿಸಿಕೊಂಡಿದ್ದೇನೆ. ಎಲ್ಲರನ್ನೂ ರಕ್ಷಿಸಲು ಸಕಲ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ. ಪ್ರತಿಯೊಬ್ಬರೂ ಸುರಕ್ಷಿತರಾಗಿರಲಿ  ಎಂದು ದೇವರ ಬಳಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಡೂರು ಯೋಧ ಹುತಾತ್ಮ: ಪಟಾಕಿ ತೆಗೆದುಕೊಂಡು ದೀಪಾವಳಿಗೆ ಬರ್ತೀನಿ ಅಂದಿದ್ದ ಪ್ರೀತಿಯ ಅಪ್ಪ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ