AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಗಡಿ ಒಳಗೆ ನುಗ್ಗಿ ಹಳ್ಳಿಯನ್ನೇ ನಿರ್ಮಾಣ ಮಾಡಿದ ಚೀನಾ! ಇಲ್ಲಿವೆ 101 ಮನೆಗಳು..

ಅರುಣಾಚಲ ಪ್ರದೇಶದ ತ್ಸಾರಿ ಚು ನದಿ ಸಮೀಪ ಇರುವ ವಿವಾದಿತ ಪ್ರದೇಶದಲ್ಲೇ ಈ ಗ್ರಾಮ ನಿರ್ಮಾಣ ಮಾಡಲಾಗಿದೆ. ಚೀನಾದವರು ನಮ್ಮ ಗಡಿ ಒಳಗೆ ಸುಮಾರು 4.5 ಕಿಮೀ ನುಗ್ಗಿದ್ದಾರೆ.

ಭಾರತದ ಗಡಿ ಒಳಗೆ ನುಗ್ಗಿ ಹಳ್ಳಿಯನ್ನೇ ನಿರ್ಮಾಣ ಮಾಡಿದ ಚೀನಾ! ಇಲ್ಲಿವೆ 101 ಮನೆಗಳು..
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Jan 19, 2021 | 2:18 PM

Share

ನವದೆಹಲಿ: ಗಡಿಯಲ್ಲಿ ಸದಾ ಒಂದಿಲ್ಲೊಂದು ತಕರಾರು ತೆಗೆಯುತ್ತಾ ಭಾರತದ ವಿರುದ್ಧ ಕಾಲ್ಕೆರೆದು ಜಗಳ ಮಾಡುತ್ತಿರುವ ಚೀನಾ ಈಗ ಸದ್ದಿಲ್ಲದೆ ನಮ್ಮ ಗಡಿ ಒಳಗೆ ನುಗ್ಗಿ ಒಂದು ಹಳ್ಳಿಯನ್ನೇ ನಿರ್ಮಾಣ ಮಾಡಿದೆ. ಈ ಹಳ್ಳಿಯಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 101 ಮನೆಗಳಿವೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

ಅರುಣಾಚಲ ಪ್ರದೇಶದ ತ್ಸಾರಿ ಚು ನದಿ ಸಮೀಪ ಇರುವ ವಿವಾದಿತ ಪ್ರದೇಶದಲ್ಲೇ ಈ ಗ್ರಾಮ ನಿರ್ಮಾಣ ಮಾಡಲಾಗಿದೆ. ಚೀನಾದವರು ನಮ್ಮ ಗಡಿ ಒಳಗೆ ಸುಮಾರು 4.5 ಕಿಮೀ ಒಳ ಬಂದಿದ್ದಾರೆ. ಸುತ್ತಮುತ್ತಲೂ ಕಾಡು ಬೆಳೆದಿದ್ದು, ಮಧ್ಯದಲ್ಲಿ ಈ ಮನೆ ನಿರ್ಮಾಣಗೊಂಡಿದೆ.

ಸ್ಯಾಟಲೈಟ್​ ಚಿತ್ರದ ಮೂಲಕ ಈ ವಿಚಾರ ಬೆಳಕಿಗೆ ಬಂದಿದೆ. 2019 ಆಗಸ್ಟ್​ ತಿಂಗಳಲ್ಲಿ ಆ ಭಾಗದಲ್ಲಿ ಎಲ್ಲವೂ ಖಾಲಿ ಖಾಲಿ ಇತ್ತು. ಆದರೆ, ನವೆಂಬರ್​ 2020ರಂದು ನೋಡಿದಾಗ ಈ ಭಾಗದಲ್ಲಿ ಶೆಡ್​ಗಳು ನಿರ್ಮಾಣಗೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಇಲ್ಲಿ, ಸುಮಾರು 101 ಮನೆಗಳು ತಲೆ ಎತ್ತಿವೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯ, ಚೀನಾ ಈ ರೀತಿ ಮಾಡುತ್ತಿರುವುದು ಇದೇ ಮೊದಲನೇಲ್ಲ. ಈ ಮೊದಲು ಕೂಡ ಗಡಿ ಭಾಗದಲ್ಲಿ ಚೀನಾ ಮೂಲ ಸೌಕರ್ಯ ಅಭಿವೃದ್ಧಿ ಮಾಡುವ ಕೆಲಸವನ್ನು ಮಾಡಿದೆ. ನಾವು ಕೂಡ ಗಡಿ ಭಾಗದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದೆ.

ಭಾರತಕ್ಕೆ ಕಂಟಕ? ಗಡಿ ಭಾಗದಲ್ಲಿ ಈ ರೀತಿ ಹಳ್ಳಿ ನಿರ್ಮಾಣ ಮಾಡಿರುವುದು ಭಾರತಕ್ಕೆ ಕಂಟಕವಾಗುವ ಸಾಧ್ಯತೆ ಇದೆ. ಒಂದೊಮ್ಮೆ, ಭಾರತ-ಚೀನಾ ನಡುವೆ ಯುದ್ಧ ಉಂಟಾದರೆ ಈ ಮನೆಗಳನ್ನು ಚೀನಾ ಶಸ್ತ್ರಾಗಾರವನ್ನಾಗಿ ಬಳಕೆ ಮಾಡಿಕೊಳ್ಳಬಹುದು.

ಗಡಿ ದಾಟಿ.. ದೇಶದ ಭೂ ಭಾಗ ಪ್ರವೇಶಿಸಿದ ಚೀನಾ ಸೈನಿಕ ಭಾರತೀಯ ಸೇನೆ ವಶಕ್ಕೆ

Published On - 3:52 pm, Mon, 18 January 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ