AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಗಡಿ ಒಳಗೆ ನುಗ್ಗಿ ಹಳ್ಳಿಯನ್ನೇ ನಿರ್ಮಾಣ ಮಾಡಿದ ಚೀನಾ! ಇಲ್ಲಿವೆ 101 ಮನೆಗಳು..

ಅರುಣಾಚಲ ಪ್ರದೇಶದ ತ್ಸಾರಿ ಚು ನದಿ ಸಮೀಪ ಇರುವ ವಿವಾದಿತ ಪ್ರದೇಶದಲ್ಲೇ ಈ ಗ್ರಾಮ ನಿರ್ಮಾಣ ಮಾಡಲಾಗಿದೆ. ಚೀನಾದವರು ನಮ್ಮ ಗಡಿ ಒಳಗೆ ಸುಮಾರು 4.5 ಕಿಮೀ ನುಗ್ಗಿದ್ದಾರೆ.

ಭಾರತದ ಗಡಿ ಒಳಗೆ ನುಗ್ಗಿ ಹಳ್ಳಿಯನ್ನೇ ನಿರ್ಮಾಣ ಮಾಡಿದ ಚೀನಾ! ಇಲ್ಲಿವೆ 101 ಮನೆಗಳು..
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Jan 19, 2021 | 2:18 PM

Share

ನವದೆಹಲಿ: ಗಡಿಯಲ್ಲಿ ಸದಾ ಒಂದಿಲ್ಲೊಂದು ತಕರಾರು ತೆಗೆಯುತ್ತಾ ಭಾರತದ ವಿರುದ್ಧ ಕಾಲ್ಕೆರೆದು ಜಗಳ ಮಾಡುತ್ತಿರುವ ಚೀನಾ ಈಗ ಸದ್ದಿಲ್ಲದೆ ನಮ್ಮ ಗಡಿ ಒಳಗೆ ನುಗ್ಗಿ ಒಂದು ಹಳ್ಳಿಯನ್ನೇ ನಿರ್ಮಾಣ ಮಾಡಿದೆ. ಈ ಹಳ್ಳಿಯಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 101 ಮನೆಗಳಿವೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

ಅರುಣಾಚಲ ಪ್ರದೇಶದ ತ್ಸಾರಿ ಚು ನದಿ ಸಮೀಪ ಇರುವ ವಿವಾದಿತ ಪ್ರದೇಶದಲ್ಲೇ ಈ ಗ್ರಾಮ ನಿರ್ಮಾಣ ಮಾಡಲಾಗಿದೆ. ಚೀನಾದವರು ನಮ್ಮ ಗಡಿ ಒಳಗೆ ಸುಮಾರು 4.5 ಕಿಮೀ ಒಳ ಬಂದಿದ್ದಾರೆ. ಸುತ್ತಮುತ್ತಲೂ ಕಾಡು ಬೆಳೆದಿದ್ದು, ಮಧ್ಯದಲ್ಲಿ ಈ ಮನೆ ನಿರ್ಮಾಣಗೊಂಡಿದೆ.

ಸ್ಯಾಟಲೈಟ್​ ಚಿತ್ರದ ಮೂಲಕ ಈ ವಿಚಾರ ಬೆಳಕಿಗೆ ಬಂದಿದೆ. 2019 ಆಗಸ್ಟ್​ ತಿಂಗಳಲ್ಲಿ ಆ ಭಾಗದಲ್ಲಿ ಎಲ್ಲವೂ ಖಾಲಿ ಖಾಲಿ ಇತ್ತು. ಆದರೆ, ನವೆಂಬರ್​ 2020ರಂದು ನೋಡಿದಾಗ ಈ ಭಾಗದಲ್ಲಿ ಶೆಡ್​ಗಳು ನಿರ್ಮಾಣಗೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಇಲ್ಲಿ, ಸುಮಾರು 101 ಮನೆಗಳು ತಲೆ ಎತ್ತಿವೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯ, ಚೀನಾ ಈ ರೀತಿ ಮಾಡುತ್ತಿರುವುದು ಇದೇ ಮೊದಲನೇಲ್ಲ. ಈ ಮೊದಲು ಕೂಡ ಗಡಿ ಭಾಗದಲ್ಲಿ ಚೀನಾ ಮೂಲ ಸೌಕರ್ಯ ಅಭಿವೃದ್ಧಿ ಮಾಡುವ ಕೆಲಸವನ್ನು ಮಾಡಿದೆ. ನಾವು ಕೂಡ ಗಡಿ ಭಾಗದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದೆ.

ಭಾರತಕ್ಕೆ ಕಂಟಕ? ಗಡಿ ಭಾಗದಲ್ಲಿ ಈ ರೀತಿ ಹಳ್ಳಿ ನಿರ್ಮಾಣ ಮಾಡಿರುವುದು ಭಾರತಕ್ಕೆ ಕಂಟಕವಾಗುವ ಸಾಧ್ಯತೆ ಇದೆ. ಒಂದೊಮ್ಮೆ, ಭಾರತ-ಚೀನಾ ನಡುವೆ ಯುದ್ಧ ಉಂಟಾದರೆ ಈ ಮನೆಗಳನ್ನು ಚೀನಾ ಶಸ್ತ್ರಾಗಾರವನ್ನಾಗಿ ಬಳಕೆ ಮಾಡಿಕೊಳ್ಳಬಹುದು.

ಗಡಿ ದಾಟಿ.. ದೇಶದ ಭೂ ಭಾಗ ಪ್ರವೇಶಿಸಿದ ಚೀನಾ ಸೈನಿಕ ಭಾರತೀಯ ಸೇನೆ ವಶಕ್ಕೆ

Published On - 3:52 pm, Mon, 18 January 21

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ