AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಗಡಿ ಒಳಗೆ ನುಗ್ಗಿ ಹಳ್ಳಿಯನ್ನೇ ನಿರ್ಮಾಣ ಮಾಡಿದ ಚೀನಾ! ಇಲ್ಲಿವೆ 101 ಮನೆಗಳು..

ಅರುಣಾಚಲ ಪ್ರದೇಶದ ತ್ಸಾರಿ ಚು ನದಿ ಸಮೀಪ ಇರುವ ವಿವಾದಿತ ಪ್ರದೇಶದಲ್ಲೇ ಈ ಗ್ರಾಮ ನಿರ್ಮಾಣ ಮಾಡಲಾಗಿದೆ. ಚೀನಾದವರು ನಮ್ಮ ಗಡಿ ಒಳಗೆ ಸುಮಾರು 4.5 ಕಿಮೀ ನುಗ್ಗಿದ್ದಾರೆ.

ಭಾರತದ ಗಡಿ ಒಳಗೆ ನುಗ್ಗಿ ಹಳ್ಳಿಯನ್ನೇ ನಿರ್ಮಾಣ ಮಾಡಿದ ಚೀನಾ! ಇಲ್ಲಿವೆ 101 ಮನೆಗಳು..
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Jan 19, 2021 | 2:18 PM

Share

ನವದೆಹಲಿ: ಗಡಿಯಲ್ಲಿ ಸದಾ ಒಂದಿಲ್ಲೊಂದು ತಕರಾರು ತೆಗೆಯುತ್ತಾ ಭಾರತದ ವಿರುದ್ಧ ಕಾಲ್ಕೆರೆದು ಜಗಳ ಮಾಡುತ್ತಿರುವ ಚೀನಾ ಈಗ ಸದ್ದಿಲ್ಲದೆ ನಮ್ಮ ಗಡಿ ಒಳಗೆ ನುಗ್ಗಿ ಒಂದು ಹಳ್ಳಿಯನ್ನೇ ನಿರ್ಮಾಣ ಮಾಡಿದೆ. ಈ ಹಳ್ಳಿಯಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 101 ಮನೆಗಳಿವೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

ಅರುಣಾಚಲ ಪ್ರದೇಶದ ತ್ಸಾರಿ ಚು ನದಿ ಸಮೀಪ ಇರುವ ವಿವಾದಿತ ಪ್ರದೇಶದಲ್ಲೇ ಈ ಗ್ರಾಮ ನಿರ್ಮಾಣ ಮಾಡಲಾಗಿದೆ. ಚೀನಾದವರು ನಮ್ಮ ಗಡಿ ಒಳಗೆ ಸುಮಾರು 4.5 ಕಿಮೀ ಒಳ ಬಂದಿದ್ದಾರೆ. ಸುತ್ತಮುತ್ತಲೂ ಕಾಡು ಬೆಳೆದಿದ್ದು, ಮಧ್ಯದಲ್ಲಿ ಈ ಮನೆ ನಿರ್ಮಾಣಗೊಂಡಿದೆ.

ಸ್ಯಾಟಲೈಟ್​ ಚಿತ್ರದ ಮೂಲಕ ಈ ವಿಚಾರ ಬೆಳಕಿಗೆ ಬಂದಿದೆ. 2019 ಆಗಸ್ಟ್​ ತಿಂಗಳಲ್ಲಿ ಆ ಭಾಗದಲ್ಲಿ ಎಲ್ಲವೂ ಖಾಲಿ ಖಾಲಿ ಇತ್ತು. ಆದರೆ, ನವೆಂಬರ್​ 2020ರಂದು ನೋಡಿದಾಗ ಈ ಭಾಗದಲ್ಲಿ ಶೆಡ್​ಗಳು ನಿರ್ಮಾಣಗೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಇಲ್ಲಿ, ಸುಮಾರು 101 ಮನೆಗಳು ತಲೆ ಎತ್ತಿವೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯ, ಚೀನಾ ಈ ರೀತಿ ಮಾಡುತ್ತಿರುವುದು ಇದೇ ಮೊದಲನೇಲ್ಲ. ಈ ಮೊದಲು ಕೂಡ ಗಡಿ ಭಾಗದಲ್ಲಿ ಚೀನಾ ಮೂಲ ಸೌಕರ್ಯ ಅಭಿವೃದ್ಧಿ ಮಾಡುವ ಕೆಲಸವನ್ನು ಮಾಡಿದೆ. ನಾವು ಕೂಡ ಗಡಿ ಭಾಗದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದೆ.

ಭಾರತಕ್ಕೆ ಕಂಟಕ? ಗಡಿ ಭಾಗದಲ್ಲಿ ಈ ರೀತಿ ಹಳ್ಳಿ ನಿರ್ಮಾಣ ಮಾಡಿರುವುದು ಭಾರತಕ್ಕೆ ಕಂಟಕವಾಗುವ ಸಾಧ್ಯತೆ ಇದೆ. ಒಂದೊಮ್ಮೆ, ಭಾರತ-ಚೀನಾ ನಡುವೆ ಯುದ್ಧ ಉಂಟಾದರೆ ಈ ಮನೆಗಳನ್ನು ಚೀನಾ ಶಸ್ತ್ರಾಗಾರವನ್ನಾಗಿ ಬಳಕೆ ಮಾಡಿಕೊಳ್ಳಬಹುದು.

ಗಡಿ ದಾಟಿ.. ದೇಶದ ಭೂ ಭಾಗ ಪ್ರವೇಶಿಸಿದ ಚೀನಾ ಸೈನಿಕ ಭಾರತೀಯ ಸೇನೆ ವಶಕ್ಕೆ

Published On - 3:52 pm, Mon, 18 January 21

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?