AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಗಡಿ ಒಳಗೆ ನುಗ್ಗಿ ಹಳ್ಳಿಯನ್ನೇ ನಿರ್ಮಾಣ ಮಾಡಿದ ಚೀನಾ! ಇಲ್ಲಿವೆ 101 ಮನೆಗಳು..

ಅರುಣಾಚಲ ಪ್ರದೇಶದ ತ್ಸಾರಿ ಚು ನದಿ ಸಮೀಪ ಇರುವ ವಿವಾದಿತ ಪ್ರದೇಶದಲ್ಲೇ ಈ ಗ್ರಾಮ ನಿರ್ಮಾಣ ಮಾಡಲಾಗಿದೆ. ಚೀನಾದವರು ನಮ್ಮ ಗಡಿ ಒಳಗೆ ಸುಮಾರು 4.5 ಕಿಮೀ ನುಗ್ಗಿದ್ದಾರೆ.

ಭಾರತದ ಗಡಿ ಒಳಗೆ ನುಗ್ಗಿ ಹಳ್ಳಿಯನ್ನೇ ನಿರ್ಮಾಣ ಮಾಡಿದ ಚೀನಾ! ಇಲ್ಲಿವೆ 101 ಮನೆಗಳು..
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Updated By: Lakshmi Hegde|

Updated on:Jan 19, 2021 | 2:18 PM

Share

ನವದೆಹಲಿ: ಗಡಿಯಲ್ಲಿ ಸದಾ ಒಂದಿಲ್ಲೊಂದು ತಕರಾರು ತೆಗೆಯುತ್ತಾ ಭಾರತದ ವಿರುದ್ಧ ಕಾಲ್ಕೆರೆದು ಜಗಳ ಮಾಡುತ್ತಿರುವ ಚೀನಾ ಈಗ ಸದ್ದಿಲ್ಲದೆ ನಮ್ಮ ಗಡಿ ಒಳಗೆ ನುಗ್ಗಿ ಒಂದು ಹಳ್ಳಿಯನ್ನೇ ನಿರ್ಮಾಣ ಮಾಡಿದೆ. ಈ ಹಳ್ಳಿಯಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 101 ಮನೆಗಳಿವೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

ಅರುಣಾಚಲ ಪ್ರದೇಶದ ತ್ಸಾರಿ ಚು ನದಿ ಸಮೀಪ ಇರುವ ವಿವಾದಿತ ಪ್ರದೇಶದಲ್ಲೇ ಈ ಗ್ರಾಮ ನಿರ್ಮಾಣ ಮಾಡಲಾಗಿದೆ. ಚೀನಾದವರು ನಮ್ಮ ಗಡಿ ಒಳಗೆ ಸುಮಾರು 4.5 ಕಿಮೀ ಒಳ ಬಂದಿದ್ದಾರೆ. ಸುತ್ತಮುತ್ತಲೂ ಕಾಡು ಬೆಳೆದಿದ್ದು, ಮಧ್ಯದಲ್ಲಿ ಈ ಮನೆ ನಿರ್ಮಾಣಗೊಂಡಿದೆ.

ಸ್ಯಾಟಲೈಟ್​ ಚಿತ್ರದ ಮೂಲಕ ಈ ವಿಚಾರ ಬೆಳಕಿಗೆ ಬಂದಿದೆ. 2019 ಆಗಸ್ಟ್​ ತಿಂಗಳಲ್ಲಿ ಆ ಭಾಗದಲ್ಲಿ ಎಲ್ಲವೂ ಖಾಲಿ ಖಾಲಿ ಇತ್ತು. ಆದರೆ, ನವೆಂಬರ್​ 2020ರಂದು ನೋಡಿದಾಗ ಈ ಭಾಗದಲ್ಲಿ ಶೆಡ್​ಗಳು ನಿರ್ಮಾಣಗೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಇಲ್ಲಿ, ಸುಮಾರು 101 ಮನೆಗಳು ತಲೆ ಎತ್ತಿವೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯ, ಚೀನಾ ಈ ರೀತಿ ಮಾಡುತ್ತಿರುವುದು ಇದೇ ಮೊದಲನೇಲ್ಲ. ಈ ಮೊದಲು ಕೂಡ ಗಡಿ ಭಾಗದಲ್ಲಿ ಚೀನಾ ಮೂಲ ಸೌಕರ್ಯ ಅಭಿವೃದ್ಧಿ ಮಾಡುವ ಕೆಲಸವನ್ನು ಮಾಡಿದೆ. ನಾವು ಕೂಡ ಗಡಿ ಭಾಗದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದೆ.

ಭಾರತಕ್ಕೆ ಕಂಟಕ? ಗಡಿ ಭಾಗದಲ್ಲಿ ಈ ರೀತಿ ಹಳ್ಳಿ ನಿರ್ಮಾಣ ಮಾಡಿರುವುದು ಭಾರತಕ್ಕೆ ಕಂಟಕವಾಗುವ ಸಾಧ್ಯತೆ ಇದೆ. ಒಂದೊಮ್ಮೆ, ಭಾರತ-ಚೀನಾ ನಡುವೆ ಯುದ್ಧ ಉಂಟಾದರೆ ಈ ಮನೆಗಳನ್ನು ಚೀನಾ ಶಸ್ತ್ರಾಗಾರವನ್ನಾಗಿ ಬಳಕೆ ಮಾಡಿಕೊಳ್ಳಬಹುದು.

ಗಡಿ ದಾಟಿ.. ದೇಶದ ಭೂ ಭಾಗ ಪ್ರವೇಶಿಸಿದ ಚೀನಾ ಸೈನಿಕ ಭಾರತೀಯ ಸೇನೆ ವಶಕ್ಕೆ

Published On - 3:52 pm, Mon, 18 January 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!