AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಗಡಿ ಒಳಗೆ ನುಗ್ಗಿ ಹಳ್ಳಿಯನ್ನೇ ನಿರ್ಮಾಣ ಮಾಡಿದ ಚೀನಾ! ಇಲ್ಲಿವೆ 101 ಮನೆಗಳು..

ಅರುಣಾಚಲ ಪ್ರದೇಶದ ತ್ಸಾರಿ ಚು ನದಿ ಸಮೀಪ ಇರುವ ವಿವಾದಿತ ಪ್ರದೇಶದಲ್ಲೇ ಈ ಗ್ರಾಮ ನಿರ್ಮಾಣ ಮಾಡಲಾಗಿದೆ. ಚೀನಾದವರು ನಮ್ಮ ಗಡಿ ಒಳಗೆ ಸುಮಾರು 4.5 ಕಿಮೀ ನುಗ್ಗಿದ್ದಾರೆ.

ಭಾರತದ ಗಡಿ ಒಳಗೆ ನುಗ್ಗಿ ಹಳ್ಳಿಯನ್ನೇ ನಿರ್ಮಾಣ ಮಾಡಿದ ಚೀನಾ! ಇಲ್ಲಿವೆ 101 ಮನೆಗಳು..
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Jan 19, 2021 | 2:18 PM

Share

ನವದೆಹಲಿ: ಗಡಿಯಲ್ಲಿ ಸದಾ ಒಂದಿಲ್ಲೊಂದು ತಕರಾರು ತೆಗೆಯುತ್ತಾ ಭಾರತದ ವಿರುದ್ಧ ಕಾಲ್ಕೆರೆದು ಜಗಳ ಮಾಡುತ್ತಿರುವ ಚೀನಾ ಈಗ ಸದ್ದಿಲ್ಲದೆ ನಮ್ಮ ಗಡಿ ಒಳಗೆ ನುಗ್ಗಿ ಒಂದು ಹಳ್ಳಿಯನ್ನೇ ನಿರ್ಮಾಣ ಮಾಡಿದೆ. ಈ ಹಳ್ಳಿಯಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 101 ಮನೆಗಳಿವೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

ಅರುಣಾಚಲ ಪ್ರದೇಶದ ತ್ಸಾರಿ ಚು ನದಿ ಸಮೀಪ ಇರುವ ವಿವಾದಿತ ಪ್ರದೇಶದಲ್ಲೇ ಈ ಗ್ರಾಮ ನಿರ್ಮಾಣ ಮಾಡಲಾಗಿದೆ. ಚೀನಾದವರು ನಮ್ಮ ಗಡಿ ಒಳಗೆ ಸುಮಾರು 4.5 ಕಿಮೀ ಒಳ ಬಂದಿದ್ದಾರೆ. ಸುತ್ತಮುತ್ತಲೂ ಕಾಡು ಬೆಳೆದಿದ್ದು, ಮಧ್ಯದಲ್ಲಿ ಈ ಮನೆ ನಿರ್ಮಾಣಗೊಂಡಿದೆ.

ಸ್ಯಾಟಲೈಟ್​ ಚಿತ್ರದ ಮೂಲಕ ಈ ವಿಚಾರ ಬೆಳಕಿಗೆ ಬಂದಿದೆ. 2019 ಆಗಸ್ಟ್​ ತಿಂಗಳಲ್ಲಿ ಆ ಭಾಗದಲ್ಲಿ ಎಲ್ಲವೂ ಖಾಲಿ ಖಾಲಿ ಇತ್ತು. ಆದರೆ, ನವೆಂಬರ್​ 2020ರಂದು ನೋಡಿದಾಗ ಈ ಭಾಗದಲ್ಲಿ ಶೆಡ್​ಗಳು ನಿರ್ಮಾಣಗೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಇಲ್ಲಿ, ಸುಮಾರು 101 ಮನೆಗಳು ತಲೆ ಎತ್ತಿವೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯ, ಚೀನಾ ಈ ರೀತಿ ಮಾಡುತ್ತಿರುವುದು ಇದೇ ಮೊದಲನೇಲ್ಲ. ಈ ಮೊದಲು ಕೂಡ ಗಡಿ ಭಾಗದಲ್ಲಿ ಚೀನಾ ಮೂಲ ಸೌಕರ್ಯ ಅಭಿವೃದ್ಧಿ ಮಾಡುವ ಕೆಲಸವನ್ನು ಮಾಡಿದೆ. ನಾವು ಕೂಡ ಗಡಿ ಭಾಗದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದೆ.

ಭಾರತಕ್ಕೆ ಕಂಟಕ? ಗಡಿ ಭಾಗದಲ್ಲಿ ಈ ರೀತಿ ಹಳ್ಳಿ ನಿರ್ಮಾಣ ಮಾಡಿರುವುದು ಭಾರತಕ್ಕೆ ಕಂಟಕವಾಗುವ ಸಾಧ್ಯತೆ ಇದೆ. ಒಂದೊಮ್ಮೆ, ಭಾರತ-ಚೀನಾ ನಡುವೆ ಯುದ್ಧ ಉಂಟಾದರೆ ಈ ಮನೆಗಳನ್ನು ಚೀನಾ ಶಸ್ತ್ರಾಗಾರವನ್ನಾಗಿ ಬಳಕೆ ಮಾಡಿಕೊಳ್ಳಬಹುದು.

ಗಡಿ ದಾಟಿ.. ದೇಶದ ಭೂ ಭಾಗ ಪ್ರವೇಶಿಸಿದ ಚೀನಾ ಸೈನಿಕ ಭಾರತೀಯ ಸೇನೆ ವಶಕ್ಕೆ

Published On - 3:52 pm, Mon, 18 January 21

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್