AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಫಂಡಿಂಗ್, ಅಕ್ರಮ ಹಣ ವರ್ಗಾವಣೆ ಆರೋಪ, ನ್ಯೂಸ್​ಕ್ಲಿಕ್​ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸರಿಂದ ದಾಳಿ

ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿನ ಮಾಧ್ಯಮ ಸಂಸ್ಥೆಯ ಅಧಿಕಾರಿಗಳು ಮತ್ತು ಅದರ ಉದ್ಯೋಗಿಗಳ ನಿವಾಸಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಸುದ್ದಿವಾಹಿನಿಯು ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್ ಅವರಿಂದ 38 ಕೋಟಿ ರೂಪಾಯಿಗಳನ್ನು ಪಡೆದು ಭಾರತದಲ್ಲಿ ಚೀನಾ ಪರ ಪ್ರಚಾರವನ್ನು ಮಾಡುತ್ತಿದೆ ಎಂಬ ಆರೋಪದ ಮೇಲೆ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್ ಮೇಲೆ ಇಡಿ ತನಿಖೆ ನಡೆಸುತ್ತಿದೆ.

ಚೀನಾ ಫಂಡಿಂಗ್, ಅಕ್ರಮ ಹಣ ವರ್ಗಾವಣೆ ಆರೋಪ, ನ್ಯೂಸ್​ಕ್ಲಿಕ್​ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸರಿಂದ ದಾಳಿ
ಪೊಲೀಸ್
ನಯನಾ ರಾಜೀವ್
|

Updated on: Oct 03, 2023 | 9:25 AM

Share

ಚೀನಾ ಫಂಡಿಂಗ್, ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ನ್ಯೂಸ್​ಕ್ಲಿಕ್ ಸುದ್ದಿ ಸಂಸ್ಥೆಯ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಮತ್ತು ಚೀನಾ ಪರವಾದ ವಿಷಯವನ್ನು ತನ್ನ ವೇದಿಕೆಯಲ್ಲಿ ಪ್ರಕಟಿಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ವಿಶೇಷ ಘಟಕ ಮಂಗಳವಾರ ನ್ಯೂಸ್‌ಕ್ಲಿಕ್ ಮಾಧ್ಯಮಕ್ಕೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದೆ.

ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿನ ಮಾಧ್ಯಮ ಸಂಸ್ಥೆಯ ಅಧಿಕಾರಿಗಳು ಮತ್ತು ಅದರ ಉದ್ಯೋಗಿಗಳ ನಿವಾಸಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಸುದ್ದಿವಾಹಿನಿಯು ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್ ಅವರಿಂದ 38 ಕೋಟಿ ರೂಪಾಯಿಗಳನ್ನು ಪಡೆದು ಭಾರತದಲ್ಲಿ ಚೀನಾ ಪರ ಪ್ರಚಾರವನ್ನು ಮಾಡುತ್ತಿದೆ ಎಂಬ ಆರೋಪದ ಮೇಲೆ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್ ಮೇಲೆ ಇಡಿ ತನಿಖೆ ನಡೆಸುತ್ತಿದೆ.

ಮಾಧ್ಯಮವೊಂದರ ವರದಿ ಪ್ರಕಾರ ಪೊಲೀಸರು ತನಿಖೆ ವೇಳೆ ಹಲವು ಡಿಜಿಟಲ್ ಸಾಕ್ಷ್ಯಗಳನ್ನೂ ವಶಪಡಿಸಿಕೊಂಡಿದ್ದಾರೆ. ಇವುಗಳಲ್ಲಿ ಲ್ಯಾಪ್​ಟಾಪ್​, ಮೊಬೈಲ್ ಫೋನ್​ಗಳು, ಹಾರ್ಡ್​ ಡಿಸ್ಕ್​ಗಳು ಕೂಡ ಸೇರಿವೆ.

ಚೀನಾ ಸಂಪರ್ಕ ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್ ಅವರಿಂದ ಹಣವನ್ನು ಪಡೆಯುವ ಜಾಗತಿಕ ನೆಟ್​ವರ್ಕ್​ನಲ್ಲಿ ನ್ಯೂಸ್​ ಕ್ಲಿಕ್ ಒಂದು ಭಾಗವಾಗಿದೆ ಎಂದು ಅಮೆರಿಕದ ಪತ್ರಿಕೆ ನ್ಯೂಯಾರ್ಕ್​ ಟೈಮ್ಸ್​ ಹೇಳಿತ್ತು.

ನ್ಯೂಸ್​ ಕ್ಲಿಕ್​ನಿಂದ ಪಡೆದ ವಿದೇಶಿ ಹಣವು ಎಫ್​ಸಿಆರ್​ಎ ಅಂದೆ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸುತ್ತದೆ ಎಂದು ಇಡಿ ಆರೋಪಿಸಿದೆ.ಈ ನಿಧಿಯನ್ನು ದೇಶವಿರೋಧಿ ಚಟುವಟಿಕೆಗಳಿಗೂ ಬಳಸಲಾಗುತ್ತದೆ ಎಂದು ಆರೋಪಿಸಲಾಗಿತ್ತು. ಚೀನಾದಲ್ಲಿ ನೆಲೆಸಿರುವ ಸಿಂಘಮ್ ಭಾರತದಲ್ಲಿ ಚೀನಾ ಬೆಂಬಲಿತ ಮಾಹಿತಿಯನ್ನು ಪ್ರಸಾರ ಮಾಡಲು ನ್ಯೂಸ್​ಕ್ಲಿಕ್​ಗೆ 38 ಕೋಟಿ ರೂ. ಅಕ್ರಮವಾಗಿ ನೀಡಿದ್ದಾರೆ ಎಂದು ಇಡಿ ಹೇಳಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು