AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಫಂಡಿಂಗ್, ಅಕ್ರಮ ಹಣ ವರ್ಗಾವಣೆ ಆರೋಪ, ನ್ಯೂಸ್​ಕ್ಲಿಕ್​ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸರಿಂದ ದಾಳಿ

ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿನ ಮಾಧ್ಯಮ ಸಂಸ್ಥೆಯ ಅಧಿಕಾರಿಗಳು ಮತ್ತು ಅದರ ಉದ್ಯೋಗಿಗಳ ನಿವಾಸಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಸುದ್ದಿವಾಹಿನಿಯು ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್ ಅವರಿಂದ 38 ಕೋಟಿ ರೂಪಾಯಿಗಳನ್ನು ಪಡೆದು ಭಾರತದಲ್ಲಿ ಚೀನಾ ಪರ ಪ್ರಚಾರವನ್ನು ಮಾಡುತ್ತಿದೆ ಎಂಬ ಆರೋಪದ ಮೇಲೆ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್ ಮೇಲೆ ಇಡಿ ತನಿಖೆ ನಡೆಸುತ್ತಿದೆ.

ಚೀನಾ ಫಂಡಿಂಗ್, ಅಕ್ರಮ ಹಣ ವರ್ಗಾವಣೆ ಆರೋಪ, ನ್ಯೂಸ್​ಕ್ಲಿಕ್​ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸರಿಂದ ದಾಳಿ
ಪೊಲೀಸ್
ನಯನಾ ರಾಜೀವ್
|

Updated on: Oct 03, 2023 | 9:25 AM

Share

ಚೀನಾ ಫಂಡಿಂಗ್, ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ನ್ಯೂಸ್​ಕ್ಲಿಕ್ ಸುದ್ದಿ ಸಂಸ್ಥೆಯ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಮತ್ತು ಚೀನಾ ಪರವಾದ ವಿಷಯವನ್ನು ತನ್ನ ವೇದಿಕೆಯಲ್ಲಿ ಪ್ರಕಟಿಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ವಿಶೇಷ ಘಟಕ ಮಂಗಳವಾರ ನ್ಯೂಸ್‌ಕ್ಲಿಕ್ ಮಾಧ್ಯಮಕ್ಕೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದೆ.

ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿನ ಮಾಧ್ಯಮ ಸಂಸ್ಥೆಯ ಅಧಿಕಾರಿಗಳು ಮತ್ತು ಅದರ ಉದ್ಯೋಗಿಗಳ ನಿವಾಸಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಸುದ್ದಿವಾಹಿನಿಯು ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್ ಅವರಿಂದ 38 ಕೋಟಿ ರೂಪಾಯಿಗಳನ್ನು ಪಡೆದು ಭಾರತದಲ್ಲಿ ಚೀನಾ ಪರ ಪ್ರಚಾರವನ್ನು ಮಾಡುತ್ತಿದೆ ಎಂಬ ಆರೋಪದ ಮೇಲೆ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್ ಮೇಲೆ ಇಡಿ ತನಿಖೆ ನಡೆಸುತ್ತಿದೆ.

ಮಾಧ್ಯಮವೊಂದರ ವರದಿ ಪ್ರಕಾರ ಪೊಲೀಸರು ತನಿಖೆ ವೇಳೆ ಹಲವು ಡಿಜಿಟಲ್ ಸಾಕ್ಷ್ಯಗಳನ್ನೂ ವಶಪಡಿಸಿಕೊಂಡಿದ್ದಾರೆ. ಇವುಗಳಲ್ಲಿ ಲ್ಯಾಪ್​ಟಾಪ್​, ಮೊಬೈಲ್ ಫೋನ್​ಗಳು, ಹಾರ್ಡ್​ ಡಿಸ್ಕ್​ಗಳು ಕೂಡ ಸೇರಿವೆ.

ಚೀನಾ ಸಂಪರ್ಕ ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್ ಅವರಿಂದ ಹಣವನ್ನು ಪಡೆಯುವ ಜಾಗತಿಕ ನೆಟ್​ವರ್ಕ್​ನಲ್ಲಿ ನ್ಯೂಸ್​ ಕ್ಲಿಕ್ ಒಂದು ಭಾಗವಾಗಿದೆ ಎಂದು ಅಮೆರಿಕದ ಪತ್ರಿಕೆ ನ್ಯೂಯಾರ್ಕ್​ ಟೈಮ್ಸ್​ ಹೇಳಿತ್ತು.

ನ್ಯೂಸ್​ ಕ್ಲಿಕ್​ನಿಂದ ಪಡೆದ ವಿದೇಶಿ ಹಣವು ಎಫ್​ಸಿಆರ್​ಎ ಅಂದೆ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸುತ್ತದೆ ಎಂದು ಇಡಿ ಆರೋಪಿಸಿದೆ.ಈ ನಿಧಿಯನ್ನು ದೇಶವಿರೋಧಿ ಚಟುವಟಿಕೆಗಳಿಗೂ ಬಳಸಲಾಗುತ್ತದೆ ಎಂದು ಆರೋಪಿಸಲಾಗಿತ್ತು. ಚೀನಾದಲ್ಲಿ ನೆಲೆಸಿರುವ ಸಿಂಘಮ್ ಭಾರತದಲ್ಲಿ ಚೀನಾ ಬೆಂಬಲಿತ ಮಾಹಿತಿಯನ್ನು ಪ್ರಸಾರ ಮಾಡಲು ನ್ಯೂಸ್​ಕ್ಲಿಕ್​ಗೆ 38 ಕೋಟಿ ರೂ. ಅಕ್ರಮವಾಗಿ ನೀಡಿದ್ದಾರೆ ಎಂದು ಇಡಿ ಹೇಳಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್