AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದೊಂದಿಗೆ ಕೆಲಸ ಮಾಡಲು ಸಿದ್ಧ: ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ

ಚೀನಾ-ಭಾರತ ಸಂಬಂಧಗಳ ಸ್ಥಿರ ಮತ್ತು ಉತ್ತಮ ಬೆಳವಣಿಗೆಯ ದಿಕ್ಕಿನಲ್ಲಿ ಭಾರತದೊಂದಿಗೆ ಕೆಲಸ ಮಾಡಲು ನಾವು ಸಿದ್ಧರಾಗಿದ್ದೇವೆ ಎಂದು ಭಾರತ-ಚೀನಾ ಸಂಬಂಧ ಬಗ್ಗೆ ಮಾಧ್ಯಮದವರ ಜತೆ ಮಾತನಾಡಿದ ವಾಂಗ್ ಹೇಳಿದ್ದಾರೆ.

ಭಾರತದೊಂದಿಗೆ ಕೆಲಸ ಮಾಡಲು ಸಿದ್ಧ: ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ
ವಾಂಗ್ ಯಿ
TV9 Web
| Edited By: |

Updated on:Dec 25, 2022 | 5:18 PM

Share

ಚೀನಾ ಸ್ಥಿರ ಮತ್ತು ಉತ್ತಮ ಸಂಬಂಧಗಳ ಮೂಲಕ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದು ಚೀನಾದ (China) ವಿದೇಶಾಂಗ ಸಚಿವ ವಾಂಗ್ ಯಿ (Wang Yi) ಹೇಳಿರುವುದಾಗಿ ಚೀನಾದ ವಿದೇಶಾಂಗ ಸಚಿವಾಲಯದ ವೆಬ್‌ಸೈಟ್ ಅನ್ನು ಉಲ್ಲೇಖಿಸಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಚೀನಾ ಮತ್ತು ಭಾರತ ರಾಜತಾಂತ್ರಿಕ ಮತ್ತು  ಮಿಲಿಟರಿ ಮಾರ್ಗಗಳ ಮೂಲಕ ಸಂವಹನವನ್ನು ನಿರ್ವಹಿಸಿವ. ಗಡಿ ಪ್ರದೇಶಗಳಲ್ಲಿ ಸ್ಥಿರತೆಯನ್ನು ಎತ್ತಿಹಿಡಿಯಲು ಎರಡೂ ದೇಶಗಳು ಬದ್ಧವಾಗಿವೆ. ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವಿನ ಘರ್ಷಣೆಯ ನಂತರ ಈ ಹೇಳಿಕೆ ಬಂದಿದೆ. ಘರ್ಷಣೆಯ ನಂತರ, ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಹೇಳಿಕೆಯಲ್ಲಿ ಭಾರತ ಮತ್ತು ಚೀನಾವು ಕಾರ್ಪ್ಸ್ ಕಮಾಂಡರ್ ಮಟ್ಟದ ಸಭೆಯ 17 ನೇ ಅಧಿವೇಶನವನ್ನು ಡಿಸೆಂಬರ್ 20 ರಂದು ಚೀನಾದ ಬದಿಯಲ್ಲಿರುವ ಚುಶುಲ್-ಮೊಲ್ಡೊ ಗಡಿ ಸಭೆಯ ಸ್ಥಳದಲ್ಲಿ ಕರೆದಿದೆ ಎಂದಿದೆ.

ಮಧ್ಯಂತರದಲ್ಲಿ ಪಶ್ಚಿಮ ವಲಯದ ನೆಲದ ಮೇಲೆ ಭದ್ರತೆ ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳಲು ಉಭಯ ಕಡೆಯವರು ಒಪ್ಪಿಕೊಂಡರು ಎಂದು ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: Tunisha Sharma’s Death: ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಲವ್​​ ಜಿಹಾದ್​​ ಕಾರಣವೇ ಎಂಬುದು ತನಿಖೆಯಾಗಬೇಕು: ಬಿಜೆಪಿ ಶಾಸಕ

ಉಭಯ ಕಡೆಯವರು ನಿಕಟ ಸಂಪರ್ಕದಲ್ಲಿರಲು, ಮಿಲಿಟರಿ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಸಂವಾದವನ್ನು ಕಾಪಾಡಿಕೊಳ್ಳಲು ಮತ್ತು ಉಳಿದ ಸಮಸ್ಯೆಗಳ ಪರಸ್ಪರ ಸ್ವೀಕಾರಾರ್ಹ ಪರಿಹಾರವನ್ನು ಶೀಘ್ರವಾಗಿ ರೂಪಿಸಲು ಒಪ್ಪಿಕೊಂಡಿದ್ದಾರೆ ಎಂದು ಎಂಇಎ ಹೇಳಿಕೆ ತಿಳಿಸಿದೆ.

Published On - 5:17 pm, Sun, 25 December 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ