AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚುತ್ತಲೇ ಇದೆ ಚೀನಾ ಉಪಟಳ; ಅರುಣಾಚಲ ಪ್ರದೇಶ ಸಮೀಪ 3 ಗ್ರಾಮಗಳ ನಿರ್ಮಾಣ

ಗಡಿಯಲ್ಲಿ ಚೀನಾದ ಉಪಟಳ ಹೆಚ್ಚುತ್ತಲೇ ಇದೆ. ಬ್ರಹ್ಮಪುತ್ರಾ ನದಿಗೆ ಟಿಬೆಟ್​ನಲ್ಲಿ ಅಣೆಕಟ್ಟು ಕಟ್ಟಿ, ಜಲವಿದ್ಯುತ್​ ಯೋಜನೆ ಪ್ರಾರಂಭ ಮಾಡುವುದಾಗಿ ಹೇಳಿಕೊಂಡಿರುವ ಚೀನಾ, ಅರುಣಾಚಲ ಪ್ರದೇಶ ಸಮೀಪ 3 ಗ್ರಾಮಗಳನ್ನು ಸದ್ದಿಲ್ಲದೆ ನಿರ್ಮಿಸಿ, ಜನ ವಸತಿಗೆ ಅನುವು ಮಾಡಿಕೊಟ್ಟಿದೆ.

ಹೆಚ್ಚುತ್ತಲೇ ಇದೆ ಚೀನಾ ಉಪಟಳ; ಅರುಣಾಚಲ ಪ್ರದೇಶ ಸಮೀಪ 3 ಗ್ರಾಮಗಳ ನಿರ್ಮಾಣ
ಸಾಂದರ್ಭಿಕ ಚಿತ್ರ
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 06, 2020 | 4:01 PM

Share

ದೆಹಲಿ: ಗಡಿಯಲ್ಲಿ ಚೀನಾದ ಉಪಟಳ ಹೆಚ್ಚುತ್ತಲೇ ಇದೆ. ಬ್ರಹ್ಮಪುತ್ರಾ ನದಿಗೆ ಟಿಬೆಟ್​ನಲ್ಲಿ ಅಣೆಕಟ್ಟು ಕಟ್ಟಿ, ಜಲವಿದ್ಯುತ್​ ಯೋಜನೆ ಪ್ರಾರಂಭ ಮಾಡುವುದಾಗಿ ಹೇಳಿಕೊಂಡಿರುವ ಚೀನಾ, ಅರುಣಾಚಲ ಪ್ರದೇಶ ಸಮೀಪ 3 ಗ್ರಾಮಗಳನ್ನು ಸದ್ದಿಲ್ಲದೆ ನಿರ್ಮಿಸಿ, ಜನ ವಸತಿಗೆ ಅನುವು ಮಾಡಿಕೊಟ್ಟಿದೆ.

ಟಿಬೆಟ್​ನ ಕೋನಾ ಕೌಂಟಿ ಮತ್ತು ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯನ್ನು ಬೇರ್ಪಡಿಸುವ ಗಡಿಯಾದ ಬುಮ್ ಲಾ ಪಾಸ್​​ನಿಂದ 5 ಕಿಮೀ ದೂರದಲ್ಲಿ ಚೀನಾದ ಮೂರು ಗ್ರಾಮಗಳು ತಲೆ ಎತ್ತಿವೆ. ಭಾರತ, ಚೀನಾ ಮತ್ತು ಭೂತಾನ್​ ದೇಶಗಳ ಗಡಿ ಸೇರುವ ಬುಮ್ ಲಾ ಪಾಸ್​ದಲ್ಲಿ ಹಳ್ಳಿಗಳನ್ನು ನಿರ್ಮಿಸುವ ಮೂಲಕ ಚೀನಾ, ಅರುಣಾಚಲ ಪ್ರದೇಶದ ಗಡಿಭಾಗದಲ್ಲಿ ತನ್ನ ಪ್ರಾದೇಶಿಕ ಹಕ್ಕು ಸ್ಥಾಪಿಸಲು ಮುಂದಾಗಿದೆ ಎನ್ನಲಾಗುತ್ತಿದೆ.

ಭಾರತದ ಗಡಿಯುದ್ಧಕ್ಕೂ ಹಾನ್ (ಚೀನಿ) ಜನಾಂಗ ಮತ್ತು ಟಿಬೆಟ್​ನಲ್ಲಿರುವ ಕಮ್ಯೂನಿಸ್ಟ್​ ಪಾರ್ಟಿಯವರಿಗಾಗಿ ಗ್ರಾಮಗಳನ್ನು ನಿರ್ಮಿಸಿ, ಅವರನ್ನು ನೆಲೆಗೊಳಿಸುವ ಮೂಲಕ ತನ್ನ ಪ್ರಾದೇಶಿಕ ಹಕ್ಕು ಬಲಪಡಿಸುತ್ತಿದೆ. ಹಾಗೇ, ಗಡಿಯಲ್ಲಿ ಒಳನುಸುಳುವಿಕೆಯನ್ನೂ ಹೆಚ್ಚಿಸಲು ಪ್ರಯತ್ನಿಸುತ್ತಿದೆ ಎಂದು ಚೀನಾ ವೀಕ್ಷಕ ಡಾ. ಬ್ರಹ್ಮ ಚೆಲ್ಲಾನಿ ತಿಳಿಸಿದ್ದಾರೆ.

2017ರಲ್ಲಿ ಭಾರತೀಯ ಸೈನಿಕರು ಮತ್ತು ಚೀನಾ ಸೈನಿಕರ ನಡುವೆ ಸಂಘರ್ಷ ನಡೆದ ಸ್ಥಳವಾದ ಡೋಕ್ಲಾಮ್​​ನಿಂದ ಏಳು ಕಿಮೀ ದೂರದಲ್ಲಿ, ಭೂತಾನ್​ ಸಾರ್ವಭೌಮತ್ವ ಇರುವ ಪ್ರದೇಶದಲ್ಲಿ ಚೀನಾ ಇತ್ತೀಚೆಗೆ ಹಳ್ಳಿ ನಿರ್ಮಾಣ ಮಾಡಿದ್ದು, ಹೈ ರೆಸಲ್ಯೂಶನ್​ ಇರುವ ಉಪಗ್ರಹ ಚಿತ್ರದಿಂದ ಗೊತ್ತಾಗಿತ್ತು. ಅದರ ಬೆನ್ನಲ್ಲೇ ಇನ್ನೊಂದು ಸೆಟಲೈಟ್​ ಚಿತ್ರ ಹೊರಬಿದ್ದಿದ್ದು, ಮತ್ತೆ ಮೂರು ಹಳ್ಳಿಗಳು ತಲೆ ಎತ್ತಿದ್ದು ಕಂಡುಬಂದಿದೆ.

ವಾಪಸ್​ ಬರುವಾಗ ಚಂದ್ರನ ಅಂಗಳದಲ್ಲಿ ಧ್ವಜ ನೆಟ್ಟು ಬಂದ ಚೀನಾ ಗಗನನೌಕೆ!

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!