AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚುತ್ತಲೇ ಇದೆ ಚೀನಾ ಉಪಟಳ; ಅರುಣಾಚಲ ಪ್ರದೇಶ ಸಮೀಪ 3 ಗ್ರಾಮಗಳ ನಿರ್ಮಾಣ

ಗಡಿಯಲ್ಲಿ ಚೀನಾದ ಉಪಟಳ ಹೆಚ್ಚುತ್ತಲೇ ಇದೆ. ಬ್ರಹ್ಮಪುತ್ರಾ ನದಿಗೆ ಟಿಬೆಟ್​ನಲ್ಲಿ ಅಣೆಕಟ್ಟು ಕಟ್ಟಿ, ಜಲವಿದ್ಯುತ್​ ಯೋಜನೆ ಪ್ರಾರಂಭ ಮಾಡುವುದಾಗಿ ಹೇಳಿಕೊಂಡಿರುವ ಚೀನಾ, ಅರುಣಾಚಲ ಪ್ರದೇಶ ಸಮೀಪ 3 ಗ್ರಾಮಗಳನ್ನು ಸದ್ದಿಲ್ಲದೆ ನಿರ್ಮಿಸಿ, ಜನ ವಸತಿಗೆ ಅನುವು ಮಾಡಿಕೊಟ್ಟಿದೆ.

ಹೆಚ್ಚುತ್ತಲೇ ಇದೆ ಚೀನಾ ಉಪಟಳ; ಅರುಣಾಚಲ ಪ್ರದೇಶ ಸಮೀಪ 3 ಗ್ರಾಮಗಳ ನಿರ್ಮಾಣ
ಸಾಂದರ್ಭಿಕ ಚಿತ್ರ
Lakshmi Hegde
| Edited By: |

Updated on: Dec 06, 2020 | 4:01 PM

Share

ದೆಹಲಿ: ಗಡಿಯಲ್ಲಿ ಚೀನಾದ ಉಪಟಳ ಹೆಚ್ಚುತ್ತಲೇ ಇದೆ. ಬ್ರಹ್ಮಪುತ್ರಾ ನದಿಗೆ ಟಿಬೆಟ್​ನಲ್ಲಿ ಅಣೆಕಟ್ಟು ಕಟ್ಟಿ, ಜಲವಿದ್ಯುತ್​ ಯೋಜನೆ ಪ್ರಾರಂಭ ಮಾಡುವುದಾಗಿ ಹೇಳಿಕೊಂಡಿರುವ ಚೀನಾ, ಅರುಣಾಚಲ ಪ್ರದೇಶ ಸಮೀಪ 3 ಗ್ರಾಮಗಳನ್ನು ಸದ್ದಿಲ್ಲದೆ ನಿರ್ಮಿಸಿ, ಜನ ವಸತಿಗೆ ಅನುವು ಮಾಡಿಕೊಟ್ಟಿದೆ.

ಟಿಬೆಟ್​ನ ಕೋನಾ ಕೌಂಟಿ ಮತ್ತು ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯನ್ನು ಬೇರ್ಪಡಿಸುವ ಗಡಿಯಾದ ಬುಮ್ ಲಾ ಪಾಸ್​​ನಿಂದ 5 ಕಿಮೀ ದೂರದಲ್ಲಿ ಚೀನಾದ ಮೂರು ಗ್ರಾಮಗಳು ತಲೆ ಎತ್ತಿವೆ. ಭಾರತ, ಚೀನಾ ಮತ್ತು ಭೂತಾನ್​ ದೇಶಗಳ ಗಡಿ ಸೇರುವ ಬುಮ್ ಲಾ ಪಾಸ್​ದಲ್ಲಿ ಹಳ್ಳಿಗಳನ್ನು ನಿರ್ಮಿಸುವ ಮೂಲಕ ಚೀನಾ, ಅರುಣಾಚಲ ಪ್ರದೇಶದ ಗಡಿಭಾಗದಲ್ಲಿ ತನ್ನ ಪ್ರಾದೇಶಿಕ ಹಕ್ಕು ಸ್ಥಾಪಿಸಲು ಮುಂದಾಗಿದೆ ಎನ್ನಲಾಗುತ್ತಿದೆ.

ಭಾರತದ ಗಡಿಯುದ್ಧಕ್ಕೂ ಹಾನ್ (ಚೀನಿ) ಜನಾಂಗ ಮತ್ತು ಟಿಬೆಟ್​ನಲ್ಲಿರುವ ಕಮ್ಯೂನಿಸ್ಟ್​ ಪಾರ್ಟಿಯವರಿಗಾಗಿ ಗ್ರಾಮಗಳನ್ನು ನಿರ್ಮಿಸಿ, ಅವರನ್ನು ನೆಲೆಗೊಳಿಸುವ ಮೂಲಕ ತನ್ನ ಪ್ರಾದೇಶಿಕ ಹಕ್ಕು ಬಲಪಡಿಸುತ್ತಿದೆ. ಹಾಗೇ, ಗಡಿಯಲ್ಲಿ ಒಳನುಸುಳುವಿಕೆಯನ್ನೂ ಹೆಚ್ಚಿಸಲು ಪ್ರಯತ್ನಿಸುತ್ತಿದೆ ಎಂದು ಚೀನಾ ವೀಕ್ಷಕ ಡಾ. ಬ್ರಹ್ಮ ಚೆಲ್ಲಾನಿ ತಿಳಿಸಿದ್ದಾರೆ.

2017ರಲ್ಲಿ ಭಾರತೀಯ ಸೈನಿಕರು ಮತ್ತು ಚೀನಾ ಸೈನಿಕರ ನಡುವೆ ಸಂಘರ್ಷ ನಡೆದ ಸ್ಥಳವಾದ ಡೋಕ್ಲಾಮ್​​ನಿಂದ ಏಳು ಕಿಮೀ ದೂರದಲ್ಲಿ, ಭೂತಾನ್​ ಸಾರ್ವಭೌಮತ್ವ ಇರುವ ಪ್ರದೇಶದಲ್ಲಿ ಚೀನಾ ಇತ್ತೀಚೆಗೆ ಹಳ್ಳಿ ನಿರ್ಮಾಣ ಮಾಡಿದ್ದು, ಹೈ ರೆಸಲ್ಯೂಶನ್​ ಇರುವ ಉಪಗ್ರಹ ಚಿತ್ರದಿಂದ ಗೊತ್ತಾಗಿತ್ತು. ಅದರ ಬೆನ್ನಲ್ಲೇ ಇನ್ನೊಂದು ಸೆಟಲೈಟ್​ ಚಿತ್ರ ಹೊರಬಿದ್ದಿದ್ದು, ಮತ್ತೆ ಮೂರು ಹಳ್ಳಿಗಳು ತಲೆ ಎತ್ತಿದ್ದು ಕಂಡುಬಂದಿದೆ.

ವಾಪಸ್​ ಬರುವಾಗ ಚಂದ್ರನ ಅಂಗಳದಲ್ಲಿ ಧ್ವಜ ನೆಟ್ಟು ಬಂದ ಚೀನಾ ಗಗನನೌಕೆ!

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ