AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಶ್ರೀಲಂಕಾದ ಬಂದರಿನತ್ತ ಸಾಗಿದ ಚೀನಾದ ಹಡಗು; ಆತಂಕ ಬೇಡ ಎಂದ ಶ್ರೀಲಂಕಾ

ಚೀನಾದ ಸಂಶೋಧನೆ ಮತ್ತು ಸಮೀಕ್ಷೆಯ ಹಡಗು ಆಗಸ್ಟ್ 11 ರಂದು ದಕ್ಷಿಣ ಶ್ರೀಲಂಕಾದಲ್ಲಿರುವ  ಚೀನಾ  ಪಾಲುದಾರಿಕೆ ಹೊಂದಿರುವ  ಹಂಬಂಟೋಟಾ ಬಂದರಿಗೆ ಹೋಗಿ ನಿಲ್ಲಲಿದೆ. 

ದಕ್ಷಿಣ ಶ್ರೀಲಂಕಾದ ಬಂದರಿನತ್ತ ಸಾಗಿದ ಚೀನಾದ ಹಡಗು; ಆತಂಕ ಬೇಡ ಎಂದ ಶ್ರೀಲಂಕಾ
ಚೀನಾದ ಹಡಗುImage Credit source: NDTV
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 04, 2022 | 7:24 PM

Share

ಶ್ರೀಲಂಕಾದ (Sri lanka) ಬಂದರಿನತ್ತ ಚೀನಾ (China) ಹಡಗುಗಳು ಸಾಗುತ್ತಿದ್ದು ಈ ಪರಿಸ್ಥಿತಿ ಬಗ್ಗೆ  ಭಾರತ ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಹೇಳಿದೆ. ಚೀನಾದ ಸಂಶೋಧನೆ ಮತ್ತು ಸಮೀಕ್ಷೆಯ ಹಡಗು ಆಗಸ್ಟ್ 11 ರಂದು ದಕ್ಷಿಣ ಶ್ರೀಲಂಕಾದಲ್ಲಿರುವ  ಚೀನಾ  ಪಾಲುದಾರಿಕೆ ಹೊಂದಿರುವ  ಹಂಬಂಟೋಟಾ ಬಂದರಿಗೆ ಹೋಗಿ ನಿಲ್ಲಲಿದೆ. ಈ ಬಗ್ಗೆ ಎನ್​​ಡಿಟಿವಿಗೆ ಪ್ರತಿಕ್ರಿಯಿಸಿದ ಶ್ರೀಲಂಕಾದ ರಕ್ಷಣಾ ಸಚಿವಾಲಯದ ಮಾಧ್ಯಮ ವಕ್ತಾರ  ಕರ್ನಲ್ ನಳಿನ್ ಹೆರಾತ್ , ಹಡಗು ಮಿಲಿಟರಿ ಸ್ಥಾಪನೆಗಳನ್ನು ಮೇಲ್ವಿಚಾರಣೆ ಮಾಡುವ ಸಾಮರ್ಥ್ಯವನ್ನು ಹೊಂದಿದ್ದು,  ಭಾರತದ ಕಳವಳ ಶ್ರೀಲಂಕಾಕ್ಕೆ  ಅರ್ಥವಾಗುತ್ತದೆ. ಆದರೆ ಇದು ವಾಡಿಕೆಯ ಪ್ರಕ್ರಿಯೆ ಎಂದಿದ್ದಾರೆ. ಭಾರತ, ಚೀನಾ, ರಷ್ಯಾ, ಜಪಾನ್ ಮತ್ತು ಮಲೇಷ್ಯಾದ ಹಡಗುಗಳು ಕಾಲಾಕಾಲಕ್ಕೆ ವಿನಂತಿಸಿವೆ. ಹಾಗಾಗಿ ನಾವು ಚೀನಾಕ್ಕೂ ಅನುಮತಿ ನೀಡಿದ್ದೇವೆ. ಪರಮಾಣು ಸಾಮರ್ಥ್ಯದ ಹಡಗು ನಮ್ಮತ್ತ ಬರುತ್ತಿದ್ದರೆ ಮಾತ್ರ ನಾವು ಅನುಮತಿ ನಿರಾಕರಿಸಬಹುದು. ಇದು ಅಂಥಾ ಹಡಗುಅಲ್ಲ ಎಂದು ಕರ್ನಲ್ ಹೆರಾತ್ ಹೇಳಿದ್ದಾರೆ.

ಹಿಂದೂಮಹಾಸಾಗರದಲ್ಲಿ ಕಣ್ಗಾವಲು ಮತ್ತು ನ್ಯಾವಿಗೇಷನ್​​​ಗಾಗಿ ಹಡಗು ಕಳಿಸುತ್ತಿದೆ ಎಂದು ಚೀನಾ ಶ್ರೀಲಂಕಾಕ್ಕೆ ತಿಳಿಸಿತ್ತು ಎಂದು ಅವರು ಹೇಳಿದ್ದಾರೆ.

ಯಾನ್ ವಾಂಗ್ 5 ಎಂಬ ಚೀನಾದ ಹಡಗು ಮರುಪೂರಣಕ್ಕಾಗಿ ಶ್ರೀಲಂಕಾದ ಅನುಮತಿ ಕೇಳಿತ್ತು. ಬಂದರಿನಲ್ಲಿ ತಂಗಲು ಇರುವ ಸಮಯ ಆಗಸ್ಟ್ 11ರಿಂದ 17 ಆಗಿದೆ. ಚೀನಾದ ಹಡಗು ತುಂಬಾನೇ ಸಾಮರ್ಥ್ಯವುಳ್ಳದ್ದಾಗಿದ್ದು, ಅತ್ಯಾಧುನಿಕ ವ್ಯವಸ್ಥೆ ಹೊಂದಿರುವ ಹಡಗು ಆಗಿದೆ ಎಂದು ಶ್ರೀಲಂಕಾದ ರಕ್ಷಣಾ ಸಚಿವಾಲಯ ಹೇಳಿದೆ. ಹಡಗು ಪರಮಾಣು ಸ್ಥಾವರ ಮತ್ತು ಮಿಲಿಟರಿ ಸ್ಟೇಷನ್ ಗಳ ಮೇಲೆ ಮೇಲ್ವಿಚಾರಣೆ ಮಾಡುವ ಸಾಮರ್ಥ್ಯ ಹೊಂದಿದೆ. ಹಾಗಾಗಿ ಭಾರತ ಆತಂಕ ವ್ಯಕ್ತಪಡಿಸಿತ್ತು ಎಂದು ಮೂಲಗಳು ಹೇಳಿವೆ.

ಭಾರತ ಮತ್ತು ಚೀನಾ ಹಿಂದೂ ಮಹಾಸಾಗರದಲ್ಲಿ ಪ್ರಭಾವ ಬೀರಲು ಸ್ಪರ್ಧಿಸುತ್ತಿವೆ ಎಂದು ನಮಗೆ ತಿಳಿದಿದೆ.ಆದರೆ ಕೆಲವು ಸಂದರ್ಭಗಳಲ್ಲಿ ನಾವು ಅನುಮತಿಸಬೇಕಾಗುತ್ತದೆ. ಈ ಬಗ್ಗೆ ಭಾರತಕ್ಕೂ ಮಾಹಿತಿ ನೀಡುವುದು ಕರ್ತವ್ಯ. ಅಂದಹಾಗೆ ಚೀನಾದ ಹಡಗು ನಮ್ಮ ಸಮುದ್ರಕ್ಕೆ ಬರುತ್ತಿರುವುದು ಇದೇ ಮೊದಲಲ್ಲ ಎಂದು ಈ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬರು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

Published On - 6:34 pm, Thu, 4 August 22

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು