AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ದಾಟಿ.. ದೇಶದ ಭೂ ಭಾಗ ಪ್ರವೇಶಿಸಿದ ಚೀನಾ ಸೈನಿಕ ಭಾರತೀಯ ಸೇನೆ ವಶಕ್ಕೆ

ಲಡಾಖ್​ ಗಡಿ ಭಾಗದಲ್ಲಿ ಮತ್ತೊಮ್ಮೆ ಚೀನಾ ಸೇನೆಯ ಉಪಟಳ ಪ್ರಾರಂಭವಾಗಿದೆ. ಇಂದು ವಾಸ್ತವ ಗಡಿ ನಿಯಂತ್ರಣ ರೇಖೆ (LAC) ಭಾಗದಲ್ಲಿ ಭಾರತ ಪ್ರವೇಶಿಸಿದ ಚೀನಾ ಸೈನಿಕನೋರ್ವನನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದೆ.

ಗಡಿ ದಾಟಿ.. ದೇಶದ ಭೂ ಭಾಗ ಪ್ರವೇಶಿಸಿದ ಚೀನಾ ಸೈನಿಕ ಭಾರತೀಯ ಸೇನೆ ವಶಕ್ಕೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 09, 2021 | 4:13 PM

Share

ದೆಹಲಿ​: ಲಡಾಖ್ ಗಡಿ ಭಾಗದಲ್ಲಿ ಮತ್ತೊಮ್ಮೆ ಚೀನಾ ಸೇನೆಯ ಉಪಟಳ ಪ್ರಾರಂಭವಾಗಿದೆ. ಇಂದು ವಾಸ್ತವ ಗಡಿ ನಿಯಂತ್ರಣ ರೇಖೆ (LAC) ಭಾಗದಲ್ಲಿ ಭಾರತ ಪ್ರವೇಶಿಸಿದ ಚೀನಾ ಸೈನಿಕನೋರ್ವನನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದೆ.

ಭಾರತಕ್ಕೆ ಸೇರಿರುವ ಭೂ​​ ಭಾಗದಲ್ಲಿ ನಿನ್ನೆ ಬೆಳಗ್ಗೆ ಚೀನಾ ಸೈನಿಕನೊಬ್ಬ ಕಾಣಿಸಿಕೊಂಡಿದ್ದಾನೆ. ಹಾಗಾಗಿ, ಈತನನ್ನು ಭಾರತೀಯ ಸೈನಿಕರು ವಶಕ್ಕೆ ಪಡೆದಿದ್ದಾರೆ ಎಂದು ಭಾರತೀಯ ಸೇನೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಸದ್ಯ, ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ನಡುವೆ, ಚೀನಾ ಸೇನೆ ಗಡಿ ಭಾಗದಲ್ಲಿ ಟ್ಯಾಂಕ್​ಗಳನ್ನು​ ನಿಯೋಜಿಸಿದೆ. ರೆಜಾಂಗ್ ಲಾ, ರೆಚಿನ್ ಲಾ ಮತ್ತು ಮುಖೋಸ್ರಿ ಪ್ರದೇಶಗಳಲ್ಲಿ ಚೀನಾ ಸೇನೆ ಕಾರ್ಯಪ್ರವೃತ್ತವಾಗಿದೆ. ಈ ಭಾಗದಲ್ಲಿ 30ರಿಂದ 35 ಟ್ಯಾಂಕ್​ಗಳನ್ನು​ ನಿಯೋಜನೆ ಮಾಡಿದೆ. ಈ ಟ್ಯಾಂಕ್‌ಗಳು ಅತ್ಯಂತ ಲಘುವಾಗಿದ್ದು ಆಧುನಿಕ ತಂತ್ರಜ್ಞಾನವನ್ನು ಬಳಸಿ ತಯಾರಿಸಲಾಗಿದೆ ಎಂದು ತಿಳಿದುಬಂದಿದೆ. ಇತ್ತ, ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡ ರೆಜಾಂಗ್ ಲಾ, ರೆಚಿನ್ ಲಾ ಮತ್ತು ಮುಖೋಸ್ರಿ ಪ್ರದೇಶಗಳಲ್ಲಿ ಟ್ಯಾಂಕ್‌ಗಳನ್ನು ನಿಯೋಜಿಸಿದೆ. ಈ ಸಂದರ್ಭದಲ್ಲಿ, ಚೀನಾದ ಸೈನಿಕ ಭಾರತದ ಗಡಿ ಪ್ರವೇಶಿಸಿರುವುದು ಆತಂಕ ಮೂಡಿಸಿದೆ.

ನ್ಯೂ ಇಯರ್ ಹಿಂದಿನ ದಿನ.. PoKಯಿಂದ ಗಡಿ ದಾಟಿ ಬಂದ ಪೋರನಿಗೆ ಸಿಕ್ತು ಭಾರತದ ರಾಜಾತಿಥ್ಯ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ