AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 27ರಂದು ಚೀನಾ- ಭಾರತ ರಕ್ಷಣಾ ಸಚಿವರ ಭೇಟಿ; ಗಾಲ್ವಾನ್ ಸಂಘರ್ಷ ನಂತರ ಇದು ಮೊದಲನೇ ಸಭೆ

ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್‌ಗೆ ನಿಕಟವಾಗಿರುವ ಜನರಲ್ ಲೀ ಮತ್ತು ಸಿಂಗ್  ಮಿಲಿಟರಿ ಮತ್ತು ರಾಜತಾಂತ್ರಿಕ ಮಾತುಕತೆಗಳ ಪ್ರಗತಿಯನ್ನು ಚರ್ಚಿಸುವ ಸಾಧ್ಯತೆಯಿದೆ.

ಏಪ್ರಿಲ್ 27ರಂದು ಚೀನಾ- ಭಾರತ ರಕ್ಷಣಾ ಸಚಿವರ ಭೇಟಿ; ಗಾಲ್ವಾನ್ ಸಂಘರ್ಷ ನಂತರ ಇದು ಮೊದಲನೇ ಸಭೆ
ಜನರಲ್ ಲೀ ಶಾಂಗ್‌ಫು- ರಾಜನಾಥ್ ಸಿಂಗ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 25, 2023 | 8:41 PM

Share

ಮುಖ್ಯಾಂಶಗಳು

  • ಜನರಲ್ ಲೀ ಅವರ ಭೇಟಿಯು ಪ್ರಾದೇಶಿಕ ಗುಂಪಿನ ಶಾಂಘೈ ಸಹಕಾರ ಸಂಘಟನೆ (SCO) ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರ ಸಭೆಯ ಭಾಗವಾಗಿದೆ
  • ಇಬ್ಬರು ರಕ್ಷಣಾ ಸಚಿವರ ಸಭೆಯು ಪೂರ್ವ ಲಡಾಖ್ ಪ್ರದೇಶದಲ್ಲಿ ಸೇನಾ ಸಂಘರ್ಷ,  ಭಾರತ ಮತ್ತು ಚೀನಾದ ಮಿಲಿಟರಿ ಕಮಾಂಡರ್‌ಗಳ ನಡುವೆ ಕನಿಷ್ಠ 19 ಸುತ್ತಿನ ಮಾತುಕತೆಗಳ ನಂತರ ನಡೆಯುತ್ತಿದೆ
  • ಭಾನುವಾರ ನಡೆದ ಕಾರ್ಪ್ಸ್ ಕಮಾಂಡರ್ ಮಟ್ಟದ 18 ನೇ ಸುತ್ತಿನ ಸಭೆಯಲ್ಲಿ, ಪೂರ್ವ ಲಡಾಖ್‌ನಲ್ಲಿನ ಬಿಕ್ಕಟ್ಟಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಇತ್ಯರ್ಥವನ್ನು ವೇಗಗೊಳಿಸಲು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ

ದೆಹಲಿ: ಮೇ 2020 ರಲ್ಲಿ ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ(Galwan Clash) ಉಭಯ ರಾಷ್ಟ್ರಗಳ ಯೋಧರ ನಡುವೆ ಸಂಘರ್ಷವೇರ್ಪಟ್ಟನಂತರ ಚೀನಾದ ರಕ್ಷಣಾ ಸಚಿವ ಜನರಲ್ ಲೀ ಶಾಂಗ್‌ಫು (General Li Shangfu) ಅವರು ಗುರುವಾರ (ಏಪ್ರಿಲ್ 27) ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರನ್ನು ಭೇಟಿಯಾಗಲಿದ್ದಾರೆ. ಇಬ್ಬರು ರಕ್ಷಣಾ ಸಚಿವರ ಸಭೆಯು ಪೂರ್ವ ಲಡಾಖ್ ಪ್ರದೇಶದಲ್ಲಿ ಸೇನಾ ಸಂಘರ್ಷ,  ಭಾರತ ಮತ್ತು ಚೀನಾದ ಮಿಲಿಟರಿ ಕಮಾಂಡರ್‌ಗಳ ನಡುವೆ ಕನಿಷ್ಠ 19 ಸುತ್ತಿನ ಮಾತುಕತೆಗಳ ನಂತರ ನಡೆಯುತ್ತಿದೆ. ರಕ್ಷಣಾ ಸಚಿವರು ಪ್ರಾದೇಶಿಕ ಶಾಂತಿ ಮತ್ತು ಭದ್ರತೆ, ಎಸ್‌ಸಿಒ ಒಳಗೆ ಭಯೋತ್ಪಾದನೆ ನಿಗ್ರಹ ಪ್ರಯತ್ನಗಳು ಮತ್ತು ಪರಿಣಾಮಕಾರಿ ಬಹುಪಕ್ಷೀಯತೆಗೆ ಸಂಬಂಧಿಸಿದ ಇತರ ವಿಷಯಗಳ ನಡುವೆ ಚರ್ಚಿಸುತ್ತಾರೆ ಎಂದು ಸರ್ಕಾರ ಇಂದು ಹೇಳಿಕೆಯಲ್ಲಿ ತಿಳಿಸಿದೆ.

ಜನರಲ್ ಲೀ ಅವರ ಭೇಟಿಯು ಪ್ರಾದೇಶಿಕ ಗುಂಪಿನ ಶಾಂಘೈ ಸಹಕಾರ ಸಂಘಟನೆ (SCO) ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರ ಸಭೆಯ ಭಾಗವಾಗಿದೆ.ಎಸ್​​ಸಿಒ, ರಾಷ್ಟ್ರಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ತತ್ವಗಳ ಆಧಾರದ ಮೇಲೆ ನೀತಿಗಳನ್ನು ಅನುಸರಿಸುತ್ತದೆ. ಅದು ಪ್ರತಿ ರಾಷ್ಟ್ರದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಆದೇಶಿಸುತ್ತದೆ.

ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್‌ಗೆ ನಿಕಟವಾಗಿರುವ ಜನರಲ್ ಲೀ ಮತ್ತು ಸಿಂಗ್  ಮಿಲಿಟರಿ ಮತ್ತು ರಾಜತಾಂತ್ರಿಕ ಮಾತುಕತೆಗಳ ಪ್ರಗತಿಯನ್ನು ಚರ್ಚಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: Operation Kaveri: ಆಪರೇಷನ್ ಕಾವೇರಿ; ಸುಡಾನ್​​ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಆರಂಭ

ಜನರಲ್ ಲೀ  ಅವರ ಭೇಟಿಗೆ ಮುಂಚಿತವಾಗಿ, ಚೀನಾದ ರಕ್ಷಣಾ ಸಚಿವಾಲಯ, ಭಾನುವಾರ ನಡೆದ ಕಾರ್ಪ್ಸ್ ಕಮಾಂಡರ್ ಮಟ್ಟದ 18 ನೇ ಸುತ್ತಿನ ಸಭೆಯಲ್ಲಿ, ಪೂರ್ವ ಲಡಾಖ್‌ನಲ್ಲಿನ ಬಿಕ್ಕಟ್ಟಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಇತ್ಯರ್ಥವನ್ನು ವೇಗಗೊಳಿಸಲು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ