AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹುಟ್ಟಿದ್ದು ಚೀನಾದಲ್ಲಿ ಅಲ್ಲ ಭಾರತದಲ್ಲಿ.. ಚೀನಾ ಹೊಸ ವರಸೆಗೆ ಬಿದ್ದು ಬಿದ್ದು ನಕ್ಕ ಸಂಶೋಧಕರು

ಕೊರೊನಾ ವೈರಸ್ ಹುಟ್ಟಿದ್ದು ಚೀನಾದಲ್ಲಿಯೇ ಅನ್ನೊದು ಪ್ರಪಂಚದ ಪ್ರತಿಯೊಬ್ಬನಿಗೂ ಗೊತ್ತಿರುವ ವಿಚಾರ. ಇದರಿಂದ ಚೀನಾ ಸಾಕಷ್ಟು ಏಟು ತಿಂದಿದೆ. ಆದ್ರೆ ಈಗ ಚೀನಾ ವರಸೆ ಬದಲಿಸಿದ್ದು, ಭಾರತದ ಮೇಲೆ ಗೂಬೆ ಕೂರಿಸಿ ನಗೆಪಾಟಲಿಗೆ ಈಡಾಗಿದೆ.

ಕೊರೊನಾ ಹುಟ್ಟಿದ್ದು ಚೀನಾದಲ್ಲಿ ಅಲ್ಲ ಭಾರತದಲ್ಲಿ.. ಚೀನಾ ಹೊಸ ವರಸೆಗೆ ಬಿದ್ದು ಬಿದ್ದು ನಕ್ಕ ಸಂಶೋಧಕರು
ಕೊರೊನಾ ವೈರಸ್
ಆಯೇಷಾ ಬಾನು
|

Updated on: Nov 30, 2020 | 6:52 AM

Share

ದೆಹಲಿ: ಮಾರಕ ಕೊರೊನಾ ವೈರಸ್ ಇಡೀ ಜಗತ್ತಿಗೆ ಹರಡಲು ಚೀನಾ ಕಾರಣ ಅನ್ನೋದು ಇಡೀ ಜಗತ್ತಿಗೆ ಗೊತ್ತಿರುವ ವಿಚಾರ. ಇದೇ ಕಾರಣಕ್ಕೆ ಡ್ರ್ಯಾಗನ್ ರಾಷ್ಟ್ರ ವಿಶ್ವ ಭೂಪಟದ ಒಂದೊಂದು ರಾಷ್ಟ್ರಗಳಿಂದ ಉಗಿಸಿಕೊಳ್ಳುತ್ತಿದೆ. ಆದರೆ ತಾನು ಮಾಡಿರುವ ತಪ್ಪನ್ನು ಭಾರತದ ಮೇಲೆ ಹಾಕಲು ಈಗ ಚೀನಾ ಕುತಂತ್ರ ನಡೆಸಿದ್ದು, ಕೊರೊನಾ ವೈರಸ್ ಹರಡಲು ಭಾರತ ಕಾರಣ ಎಂಬ ಅವೈಜ್ಞಾನಿಕ ಮಾಹಿತಿ ನೀಡಿದೆ. ಡ್ರ್ಯಾಗನ್ ದೇಶದ ಹೇಳಿಕೆ ಜಾಗತಿಕವಾಗಿ ಅಪಹಾಸ್ಯಕ್ಕೆ ಗುರಿಯಾಗಿದೆ.

ಕೊರೊನಾ ವೈರಸ್ ಮೂಲ ಭಾರತ ಎಂದು ಆರೋಪಿಸಿರುವ ಚೀನಾ. ಭಾರತದಲ್ಲಿ 2019ರ ಬೇಸಿಗೆಯಲ್ಲಿ ಕೊರೊನಾ ವೈರಸ್‌ ಕಂಡುಬಂದಿದೆ. ಅಲ್ಲಿಂದ ಪ್ರಾಣಿಗಳ ಮೂಲಕ ವುಹಾನ್‌ಗೆ ರವಾನೆಯಾಗಿದೆ ಎಂದು ಚೈನೀಸ್‌ ಅಕಾಡೆಮಿ ಸೈನ್ಸಸ್‌ನ ವಿಜ್ಞಾನಿಗಳು ಹೇಳಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿದ್ದರಿಂದ ವುಹಾನ್‌ ಈ ಸೋಂಕಿನ ಮೂಲವೆಂದು ಎಲ್ಲರೂ ಆರೋಪಿಸುತ್ತಿದ್ದಾರೆ. ಆದರೆ ಅಸಲಿಗೆ ಕೊರೊನಾ ಹುಟ್ಟಿದ್ದು ಭಾರತದಲ್ಲಿ ಎಂದು ಚೈನೀಸ್‌ ಅಕಾಡೆಮಿ ಸೈನ್ಸಸ್‌ನ ವಿಜ್ಞಾನಿಗಳು ಆರೋಪಿಸಿದ್ದಾರೆ.

ಚೀನಾದ ಆಧಾರ ರಹಿತ ಮಾಹಿತಿಗೆ ವಿಶ್ವದ ತಜ್ಞರ ತರಾಟೆ ಇನ್ನು ಚೀನಿ ಸಂಶೋಧಕರ ಅಭಿಪ್ರಾಯವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಗ್ಲಾಸ್ಗೋ ವಿಶ್ವವಿದ್ಯಾಲಯದ ತಜ್ಞ ಡೇವಿಡ್ ರಾಬರ್ಟ್ಸನ್, ಚೀನಾದ ಸಂಶೋಧಕರು ಪ್ರಸ್ತಾಪಿಸಿದ ಸಿದ್ಧಾಂತ ಬಹಳ ದೋಷಪೂರಿತ ಎಂದು ಹರಿಹಾಯ್ದಿದ್ದಾರೆ. ಚೀನಿ ಸಂಶೋಧಕರು ಭಾರತವೂ ಸೇರಿದಂತೆ ಬೇರೆ ರಾಷ್ಟ್ರಗಳ ಮೇಲೆ ಅಪವಾದ ಹೊರಿಸುವುದನ್ನು ಬಿಟ್ಟು, ವೈರಸ್‌ ಹರಡಲು ಕಾರಣವಾದ ನೈಜ ಸಂಗತಿಗಳತ್ತ ಗಮನಹರಿಸಲಿ ಎಂದು ಡೇವಿಡ್ ವ್ಯಂಗ್ಯವಾಡಿದ್ದಾರೆ.

ಒಟ್ನಲ್ಲಿ ಈ ಹಿಂದೆ ಇಟಲಿ, ಅಮೆರಿಕ ಮತ್ತು ಯುರೋಪ್‌ ದೇಶಗಳ ಮೇಲೆ ಚೀನಾ ಇಂತಹ ಆರೋಪ ಮಾಡಿ, ಅದನ್ನು ಸಮರ್ಥಿಸಿಕೊಳ್ಳಲು ಆಧಾರಗಳಿಲ್ಲದೇ ಜಾಗತಿಕವಾಗಿ ಚೀನಾ ತಲೆ ತಗ್ಗಿಸಿತ್ತು. ಈಗ ಭಾರತದ ಮೇಲೆ ಗೂಬೆ ಕೂರಿಸಲು ಹೋಗಿ ಅಪಹಾಸ್ಯಕ್ಕೆ ಈಡಾಗಿದೆ. ಕೊರೊನಾ ಹುಟ್ಟಿದ್ದು ಚೀನಾದಲ್ಲೇ ಅಂತ ಈಗ ಹುಟ್ಟಿದ ಮಕ್ಕಳು ಬೇಕಾದ್ರೂ ಹೇಳ್ತಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ