AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ 1,300 ಸಿಮ್ ಕಾರ್ಡ್​ ಚೀನಾಕ್ಕೆ ರವಾನೆ: ಬಿಎಸ್​ಎಫ್​ನಿಂದ ಚೀನಿ ಪ್ರಜೆಯ ಬಂಧನ

ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಶುಕ್ರವಾರ ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಧಾವಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣವನ್ನು ಬಿಎಸ್​ಎಫ್​ನಿಂದ ಉತ್ತರ ಪ್ರದೇಶ ಪೊಲೀಸರಿಗೆ ವರ್ಗಾಯಿಸಲಾಗಿದೆ.

ಭಾರತದ 1,300 ಸಿಮ್ ಕಾರ್ಡ್​ ಚೀನಾಕ್ಕೆ ರವಾನೆ: ಬಿಎಸ್​ಎಫ್​ನಿಂದ ಚೀನಿ ಪ್ರಜೆಯ ಬಂಧನ
ಬಿಎಸ್​ಎಫ್ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jun 11, 2021 | 5:04 PM

Share

ದೆಹಲಿ: ಕಳೆದ 2 ವರ್ಷಗಳಲ್ಲಿ 1300 ಸಿಮ್​ಕಾರ್ಡ್​ಗಳನ್ನು ಚೀನಾಕ್ಕೆ ಸಾಗಿಸಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್​ಎಫ್) ಬಂಧಿಸಿರುವ ಚೀನಿ ಪ್ರಜೆ ಮಾಹಿತಿ ನೀಡಿದ್ದಾನೆ. ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಶುಕ್ರವಾರ ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಧಾವಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣವನ್ನು ಬಿಎಸ್​ಎಫ್​ನಿಂದ ಉತ್ತರ ಪ್ರದೇಶ ಪೊಲೀಸರಿಗೆ ವರ್ಗಾಯಿಸಲಾಗಿದೆ.

ಆರೋಪಿಯನ್ನು ಹುಬೆ ಪ್ರಾಂತ್ಯದ ನಿವಾಸಿ ಹ್ಯಾನ್​ ಜುನ್ವೆ ಎಂದು ಗುರುತಿಸಲಾಗಿದೆ. ತನ್ನ ಸಹಚರ ಸುನ್ ಜಿಯಾಂಗ್ ಎಂಬಾತನನ್ನು ಉತ್ತರ ಪ್ರದೇಶದ ಭಯೋತ್ಪಾದಕ ನಿಗ್ರಹ ದಳದ ಅಧಿಕಾರಿಗಳು ಈ ಹಿಂದೆ ಬಂಧಿಸಿದ್ದರು ಎಂದು ಆರೋಪಿಯು ಬಿಎಸ್​ಎಫ್ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ವಿಚಾರಣೆ ಇನ್ನೂ ನಡೆಯುತ್ತಿದೆ. ಈತ ಯಾವುದಾದರೂ ಗುಪ್ತಚರ ಇಲಾಖೆ ಅಥವಾ ಇತರ ಸಂಘಟನೆಗಳೊಂದಿಗೆ ಕೆಲಸ ಮಾಡುತ್ತಿದ್ದನೇ ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದೇವೆ ಎಂದು ಬಿಎಸ್​ಎಫ್ ಡಿಐಜಿ ಎಸ್​.ಎಸ್​.ಗುಲೇರಿಯಾ ಹೇಳಿದ್ದಾರೆ.

ಬಾಂಗ್ಲಾದೇಶಿ ಸಿಮ್​ಕಾರ್ಡ್, ಎರಡು ಪೆನ್​ಡ್ರೈವ್​ಗಳು, ಲ್ಯಾಪ್​ಟಾಪ್, ಎರಡು ಐಫೋನ್​, ಎಟಿಎಂ ಕಾರ್ಡ್​ಗಳು, ಅಮೆರಿಕ ಡಾಲರ್​ಗಳ ಜೊತೆಗೆ ಬಾಂಗ್ಲಾದೇಶಿ ಹಾಗೂ ಭಾರತೀಯ ಕರೆನ್ಸಿಯನ್ನು ಬಂಧಿತನಿಂದ ವಶಪಡಿಸಿಕೊಳ್ಳಲಾಗಿದೆ. ಗುರುಗ್ರಾಮದಲ್ಲಿ ಸ್ಟಾರ್ ಸ್ಪ್ರಿಂಗ್ ಹೆಸರಿನ ಹೊಟೆಲ್ ಹೊಂದಿರುವುದಾಗಿ ಬಂಧಿತ ಹೇಳಿದ್ದಾನೆ. 2010ರ ನಂತರ ಕನಿಷ್ಠ 4 ಬಾರಿ ಭಾರತಕ್ಕೆ ಬಂದಿದ್ದೇನೆ ಎಂದು ಅವನು ಹೇಳಿದ್ದಾನೆ ಎಂದು ಗುಲೇರಿಯಾ ಹೇಳಿದ್ದಾರೆ.

‘ತನ್ನ ಹೆಂಡತಿ ಜುನ್ವೆ ಕೆಲ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದಾಗಿ ಬಂಧಿತ ಜಿಯಾಂಗ್ ಒಪ್ಪಿಕೊಂಡಿದ್ದಾನೆ. ಅವನ ಹೇಳಿಕೆಗಳನ್ನು ನಾವು ಪರಿಶೀಲಿಸುತ್ತಿದ್ದೇವೆ’ ಎಂದು ಬಿಎಸ್​ಎಫ್ ಹೇಳಿತ್ತು. ಈ ಬೆಳವಣಿಗೆಯ ನಂತರ ಉತ್ತರ ಪ್ರದೇಶ ಭಯೋತ್ಪಾದಕ ನಿಗ್ರಹ ದಳದ ಅಧಿಕಾರಿಗಳು ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದರು. ಹೀಗಾಗಿ ಅವರಿಗೆ ಭಾರತದ ವೀಸಾ ಸಿಗಲಿಲ್ಲ. ನೇಪಾಳ ಮತ್ತು ಬಾಂಗ್ಲಾದೇಶಗಳ ವೀಸಾ ಪಡೆದು ಅವರು ಭಾರತ ಪ್ರವೇಶಿಸಿದ್ದರು.

ಈ ಬಗ್ಗೆ ತನಿಖೆ ನಡೆಯುತ್ತಿದೆ. ಇತರ ಗುಪ್ತಚರ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ. ಬಂಧಿತನ ಲ್ಯಾಪ್​ಟಾಪ್​ ಪರಿಶೀಲನೆಗೆ ಪ್ರಯತ್ನಿಸುತ್ತಿದ್ದೇವೆ ಎಂದು ಗುಲೇರಿಯಾ ಮಾಹಿತಿ ನೀಡಿದರು. ಮಾಲ್ಡಾ ಜಿಲ್ಲೆಯ ಮೂಲಕ ಗುರುವಾರ ಭಾರತ ಪ್ರವೇಶಿಸಿದ್ದ ಜಿಯಾಂಗ್​ ಭದ್ರತಾ ಸಿಬ್ಬಂದಿಯ ಕಣ್ಣಿಗೆ ಬಿದ್ದಿದ್ದ. ಭದ್ರತಾ ಪಡೆಗಳು ಪ್ರಶ್ನಿಸಿದಾಗ ಓಡಿ ಹೋಗಲು ಯತ್ನಿಸಿದ. ಈ ವೇಳೆ ಅವನನ್ನು ಹಿಡಿದು ವಿಚಾರಣೆಗೆ ಒಳಪಡಿಸಲಾಯಿತು.

(Chinese Resident sends 1300 Indian SIM cards to China in last 2 years BSF Arrests the culprit)

ಇದನ್ನೂ ಓದಿ: Tokyo Olympics: ಭಾರತೀಯರ ಭಾವನೆಗೆ ಧಕ್ಕೆ ತರುವುದಿಲ್ಲ; ಚೀನಾ ಕಂಪನಿಯ ಪ್ರಾಯೋಜಕತ್ವ ಬೇಡವೆಂದ ಭಾರತ

ಇದನ್ನೂ ಓದಿ: ಹಣಕಾಸು ವಂಚನೆ: ಕೊರೊನಾ ನಡುವೆಯೇ ಭಾರತದಲ್ಲಿ ಕೇವಲ 2 ತಿಂಗಳಲ್ಲಿ 150 ಕೋಟಿ ದೋಚಿದ್ದ ಚೀನಾ ವಂಚಕರು ಅರೆಸ್ಟ್​

Published On - 5:02 pm, Fri, 11 June 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ