AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲೈ ಲಾಮಾ ಹುಟ್ಟುಹಬ್ಬ ಆಚರಣೆಗೆ ಅಡ್ಡಿಪಡಿಸಿದ ಚೀನಾ ಸೈನಿಕರು; ಹಳ್ಳಿಗಳಿಗೆ ನುಗ್ಗಿ ಬ್ಯಾನರ್​, ಧ್ವಜ ಪ್ರದರ್ಶನ

Dalai Lama: ಜುಲೈ 6ರಂದು ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಹುಟ್ಟುಹಬ್ಬ ಇತ್ತು. ಹೀಗಾಗಿ ಲಡಾಖ್​​ನ ಹಲವು ಹಳ್ಳಿಗಳ ಜನರು ಅದನ್ನು ಪ್ರತಿವರ್ಷದಂತೆ ಸಂಭ್ರಮದಿಂದ ಆಚರಿಸಿದ್ದಾರೆ.

ದಲೈ ಲಾಮಾ ಹುಟ್ಟುಹಬ್ಬ ಆಚರಣೆಗೆ ಅಡ್ಡಿಪಡಿಸಿದ ಚೀನಾ ಸೈನಿಕರು; ಹಳ್ಳಿಗಳಿಗೆ ನುಗ್ಗಿ ಬ್ಯಾನರ್​, ಧ್ವಜ ಪ್ರದರ್ಶನ
ಎಲ್​ಎಸಿ ಬಳಿ ಬ್ಯಾನರ್​, ಧ್ವಜ ಪ್ರದರ್ಶಿಸಿದ ಚೀನಾ ಸೈನಿಕರು
TV9 Web
| Edited By: |

Updated on: Jul 12, 2021 | 5:16 PM

Share

ಜುಲೈ 6ರಂದು ನಡೆದ ಟಿಬೆಟಿಯನ್ ಧರ್ಮಗುರು ದಲೈ ಲಾಮಾ (Dalai Lama)ರ ಹುಟ್ಟುಹಬ್ಬದ ದಿನದಂದು ಚೀನಾದ ಸೈನಿಕರು ಮತ್ತು ಕೆಲವು ನಾಗರಿಕರು ಲಡಾಖ್​ನ ಡೆಮ್ಚುಕ್​ ಪ್ರದೇಶದಲ್ಲಿರುವ ಸಿಂಧು ನದಿಯ ಇನ್ನೊಂದು ಭಾಗದಲ್ಲಿ ದಾಂಧಲೆ ನಡೆಸಿದ್ದಾರೆ. ಅಲ್ಲಿ ಭಾರತೀಯ ಹಳ್ಳಿಗರು ದಲೈ ಲಾಮಾ ಅವರ ಜನ್ಮದಿನದ ಸಂಭ್ರಮದಲ್ಲಿ ಇದ್ದರು. ಅದೇ ವೇಳೆ ಆಗಮಿಸಿದ ಚೀನಾ ಸೈನಿಕರು (Chinese soldiers)  ಮತ್ತು ಒಂದಷ್ಟು ಮಂದಿ ನಾಗರಿಕರು ಪ್ರತಿಭಟನಾತ್ಮಕ ಬ್ಯಾನರ್​ಗಳನ್ನು ಮತ್ತು ಚೀನಾದ ಧ್ವಜವನ್ನು ಪ್ರದರ್ಶಿಸಿದ್ದಾರೆ.

ಡೆಮ್ಚುಕ್​ ಪ್ರದೇಶದ ಹಲವು ಹಳ್ಳಿಗಳಲ್ಲಿ ಜನರು ದಲೈ ಲಾಮಾರ ಜನ್ಮದಿನ ಆಚರಿಸುತ್ತಿದ್ದರು. ಆ ವೇಳೆ ಒಟ್ಟು 5 ವಾಹನಗಳಲ್ಲಿ ಆಗಮಿಸಿದ ಚೀನಾ ಸೈನಿಕರು ಮತ್ತೊಂದಷ್ಟು ಮಂದಿ ನಾಗರಿಕರು ಹಳ್ಳಿಗಳ ಸಮುದಾಯ ಕೇಂದ್ರದ ಬಳಿ ಈ ಬ್ಯಾನರ್​, ಧ್ವಜಗಳನ್ನು ಪ್ರದರ್ಶಿಸಿದ್ದಾರೆ. ದಲೈ ಲಾಮಾ ಹುಟ್ಟುಹಬ್ಬಕ್ಕೆ ಚೀನಾದ ಸೈನಿಕರು ಅಡಚಣೆ ಮಾಡಿರುವ ಪ್ರಕರಣ ಈಗ ಬೆಳಕಿಗೆ ಬಂದಿದೆ.

ಜುಲೈ 6ರಂದು ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಹುಟ್ಟುಹಬ್ಬ ಇತ್ತು. ಹೀಗಾಗಿ ಲಡಾಖ್​​ನ ಹಲವು ಹಳ್ಳಿಗಳ ಜನರು ಅದನ್ನು ಪ್ರತಿವರ್ಷದಂತೆ ಸಂಭ್ರಮದಿಂದ ಆಚರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೂ ಸಹ ಅಂದು ಟ್ವೀಟ್ ಮಾಡಿ ದಲೈ ಲಾಮಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ನಾನು ಫೋನಿನಲ್ಲಿ ದಲೈ ಲಾಮಾ ಅವರೊಂದಿಗೆ ಮಾತನಾಡಿ ಶುಭ ಹಾರೈಸಿದ್ದೇನೆ. ಅವರ ಆಯುರಾರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದರು. ಈ ಮೂಲಕ ತಾವು ದಲೈ ಲಾಮಾ ಅವರೊಂದಿಗೆ ಮಾತುಕತೆ ನಡೆಸುವದನ್ನು ಇದೇ ಮೊದಲ ಬಾರಿಗೆ ಬಹಿರಂಗ ಪಡಿಸಿದ್ದಾರೆ.

ಭಾರತ ಮತ್ತು ಚೀನಾ ನಡುವೆ ಕಳೆದ ವರ್ಷ ಏಪ್ರಿಲ್​​ ತಿಂಗಳಿಂದಲೂ ಒಂದಲ್ಲ ಒಂದು ವಿಚಾರಕ್ಕೆ ಸಂಘರ್ಷ ಏರ್ಪಡುತ್ತಲೇ ಇದೆ. ಅದರಲ್ಲೂ ಚೀನಾದ ಸೈನಿಕರ ದಾಳಿಯಲ್ಲಿ ಭಾರತ 20 ಯೋಧರು ಹುತಾತ್ಮರಾದ ನಂತರ ಈ ಸಂಘರ್ಷ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಲೇ ಇದೆ. ಎರಡೂ ದೇಶಗಳ ನಡುವೆ ಹಲವು ಸುತ್ತಿನ ಮಿಲಿಟರಿ ಮಟ್ಟದ ಮಾತುಕತೆಗಳು ನಡೆದಿದ್ದರೂ ಒಂದಲ್ಲ ಒಂದು ಹಂತದಲ್ಲಿ ಮತ್ತೆ ಸಂಘರ್ಷ ಏರ್ಪಡುತ್ತಿದೆ.

ಇದನ್ನೂ ಓದಿ: Copa America 2021: ‘ದೇವರು ಈ ಕ್ಷಣವನ್ನು ನನಗಾಗಿ ಕಾಯ್ದಿರಿಸಿದ್ದ ಅಂತ ಕಾಣುತ್ತೆ,’ ಎಂದು ಉದ್ಗರಿಸಿದ ಲಿಯೊನೆಲ್ ಮೆಸ್ಸಿ

Chinese soldiers object to Dalai Lama s birthday celebration in Ladakh Demchuk

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್