AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ಗಯಾದಲ್ಲಿ ದಲೈಲಾಮಾ ಮೇಲೆ ಬೇಹುಗಾರಿಕೆ ನಡೆಸಿದ ಶಂಕಿತ ಚೀನಾ ಮಹಿಳೆ ಬಂಧನ

ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ವರ್ಷಗಳಿಂದ ಸ್ಥಗಿತವಾಗಿದ್ದ ಬೋಧಗಯಾಕ್ಕೆ ದಲೈ ಲಾಮಾ ಅವರು ತಮ್ಮ ವಾರ್ಷಿಕ ಪ್ರವಾಸವನ್ನು ಈ ವರ್ಷ ಪುನರಾರಂಭಿಸಿದ್ದಾರೆ.

ಬಿಹಾರದ ಗಯಾದಲ್ಲಿ ದಲೈಲಾಮಾ ಮೇಲೆ ಬೇಹುಗಾರಿಕೆ ನಡೆಸಿದ ಶಂಕಿತ ಚೀನಾ ಮಹಿಳೆ ಬಂಧನ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Dec 29, 2022 | 8:33 PM

Share

ದೆಹಲಿ: ದಲೈಲಾಮಾ (Dalai Lama) ಮೇಲೆ ಬೇಹುಗಾರಿಕೆ ನಡೆಸುತ್ತಿದ್ದ ಶಂಕಿತ ಚೀನಾ ಮಹಿಳೆಯೊಬ್ಬರನ್ನು ಇಂದು ಬಿಹಾರದ ಗಯಾ (Gaya) ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆಕೆಯನ್ನು ಮತ್ತೆ ಚೀನಾಕ್ಕೆ (China) ಗಡಿಪಾರು ಮಾಡುವ ಸಾಧ್ಯತೆ ಇದೆ. ಇಂದು ಬೆಳಗ್ಗೆ ದಲೈಲಾಮಾ ಅವರು ಬಿಹಾರ ಜಿಲ್ಲೆಯಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವುದರಿಂದ ಸ್ಥಳೀಯ ಪೊಲೀಸರು ಭದ್ರತಾ ಎಚ್ಚರಿಕೆಯನ್ನು ನೀಡಿದ್ದರು. ಸಾಂಗ್ ಕ್ಸಿಯೋಲಾನ್ ಎಂದು ಗುರುತಿಸಲಾದ ಶಂಕಿತ ಚೀನೀ ಗೂಢಚಾರಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ.ಇದನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿದ್ದು, ಅಧಿಕಾರಿಗಳು ಆಕೆಯ ಬಗ್ಗೆ ಮಾಹಿತಿ ನೀಡುವಂತೆ ನಿವಾಸಿಗಳನ್ನು ವಿನಂತಿಸಿದ್ದಾರೆ. ಮಾಹಿತಿ ಪ್ರಕಾರ ಶಂಕಿತ ಚೀನೀ ಗೂಢಚಾರರು ಒಂದು ವರ್ಷಕ್ಕೂ ಹೆಚ್ಚು ಕಾಲ ಬೋಧಗಯಾ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ವಾಸಿಸುತ್ತಿದ್ದರು. ಆದರೆ, ಚೀನಾದ ಮಹಿಳೆಯ ವಾಸ್ತವ್ಯದ ಬಗ್ಗೆ ವಿದೇಶಿ ವಿಭಾಗದಲ್ಲಿ ಯಾವುದೇ ದಾಖಲೆಗಳಿಲ್ಲ.

ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ವರ್ಷಗಳಿಂದ ಸ್ಥಗಿತವಾಗಿದ್ದ ಬೋಧಗಯಾಕ್ಕೆ ದಲೈ ಲಾಮಾ ಅವರು ತಮ್ಮ ವಾರ್ಷಿಕ ಪ್ರವಾಸವನ್ನು ಈ ವರ್ಷ ಪುನರಾರಂಭಿಸಿದ್ದಾರೆ.

ಮಹಾಬೋಧಿ ದೇಗುಲ ಸಂಕೀರ್ಣ ಮತ್ತು ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ. ದಲೈಲಾಮಾ ಅವರು ಇಂದು (ಗುರುವಾರ) ಬೆಳಿಗ್ಗೆ ‘ಕಾಲ್ ಚಕ್ರ’ ಮೈದಾನದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅವರು ಡಿಸೆಂಬರ್ 31 ರವರೆಗೆ ಮೂರು ದಿನಗಳ ಕಾಲ ಪ್ರತಿದಿನ ತಮ್ಮ ಪ್ರವಚನ ನೀಡಲು ನಿರ್ಧರಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:52 pm, Thu, 29 December 22

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ