AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಚಿನ್ನ ಜೀಯರ್ ಸ್ವಾಮೀಜಿಗೆ ಆಹ್ವಾನ

ಸದಾ ಲೋಕ ಕಲ್ಯಾಣದ ಬಗ್ಗೆ ಯೋಚಿಸುವ ಮತ್ತು ಜೀಯರ್ ಎಂದು ಕರೆಸಿಕೊಳ್ಳುವ ಅತ್ಯಂತ ಗೌರವಾನ್ವಿತ ಶ್ರೀ ರಾಮಾನುಜಾಚಾರ್ಯ ವಂಶಾವಳಿಗೆ ಸೇರಿರುವ ಶ್ರೀ ತ್ರಿಂದಾನಿ ಚಿನ್ನ ಶ್ರೀಮನ್ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಅವರನ್ನು ಆಗಸ್ಟ 5ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. 23ನೇ ವಯಸ್ಸಿನಲ್ಲಿ ಸನ್ಯಾಸದ ದೀಕ್ಷೆ ಪಡೆದ 63 ವರ್ಷ ವಯಸ್ಸಿನ ಜೀಯರ್ ಅವರು ವೈಷ್ಣವ ಸಂಪ್ರದಾಯದಲ್ಲಿ ತರಬೇತಿ ಹೊಂದಿದ್ದು ವೈಷ್ಣಪಂಥದ ತೆಂಕಲೈ ಪ್ರತೀತಿಯನ್ನು ಪ್ರತಿಪಾದಿಸುತ್ತಾರೆ. ಆಧ್ಯಾತ್ಮಿಕ ಪ್ರವಚನಗಳಿಗೆ ವಿಶ್ವದಾದ್ಯಂತ ಪ್ರಖ್ಯಾತರಾಗಿರುವ […]

ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಚಿನ್ನ ಜೀಯರ್ ಸ್ವಾಮೀಜಿಗೆ ಆಹ್ವಾನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 03, 2020 | 8:09 PM

Share

ಸದಾ ಲೋಕ ಕಲ್ಯಾಣದ ಬಗ್ಗೆ ಯೋಚಿಸುವ ಮತ್ತು ಜೀಯರ್ ಎಂದು ಕರೆಸಿಕೊಳ್ಳುವ ಅತ್ಯಂತ ಗೌರವಾನ್ವಿತ ಶ್ರೀ ರಾಮಾನುಜಾಚಾರ್ಯ ವಂಶಾವಳಿಗೆ ಸೇರಿರುವ ಶ್ರೀ ತ್ರಿಂದಾನಿ ಚಿನ್ನ ಶ್ರೀಮನ್ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಅವರನ್ನು ಆಗಸ್ಟ 5ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

23ನೇ ವಯಸ್ಸಿನಲ್ಲಿ ಸನ್ಯಾಸದ ದೀಕ್ಷೆ ಪಡೆದ 63 ವರ್ಷ ವಯಸ್ಸಿನ ಜೀಯರ್ ಅವರು ವೈಷ್ಣವ ಸಂಪ್ರದಾಯದಲ್ಲಿ ತರಬೇತಿ ಹೊಂದಿದ್ದು ವೈಷ್ಣಪಂಥದ ತೆಂಕಲೈ ಪ್ರತೀತಿಯನ್ನು ಪ್ರತಿಪಾದಿಸುತ್ತಾರೆ.

ಆಧ್ಯಾತ್ಮಿಕ ಪ್ರವಚನಗಳಿಗೆ ವಿಶ್ವದಾದ್ಯಂತ ಪ್ರಖ್ಯಾತರಾಗಿರುವ ಅವರು ಅಮೇರಿಕಾದಲ್ಲೂ ಆಧ್ಯಾತ್ಮಿಕ ಕೇಂದ್ರಗಳನ್ನು ನಡೆಸುತ್ತಿದ್ದಾರೆ. ಲೋಕ ಕಲ್ಯಾಣಕ್ಕಾಗಿ ಶ್ರೀಗಳು ಲಂಡನ್, ಹಾಂಗ್ ಕಾಂಗ್, ಸಿಂಗಾಪುರ, ಕೆನಡಾ ಮುಂತಾದ ದೇಶಗಳಲ್ಲಿ ಅನೇಕ ಬಾರಿ ಯಙ್ಞಗಳನ್ನು ನಡೆಸಿದ್ದಾರೆ.

2013 ರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​ಗೆ (ಎಬಿವಿಪಿ) ತಮ್ಮ ಬೆಂಬಲ ಸೂಚಿಸಿದ ಜೀಯರ್, ಅದು ವಿದ್ಯಾರ್ಥಿಗಳಲ್ಲಿ ರಾಷ್ರಪ್ರೇಮ ಹುಟ್ಟಿಸುತ್ತದೆ. ಜೊತೆಗೆ, ಅವರಲ್ಲಿ ಭಾರತೀಯ ಸಂಸ್ಕ್ರತಿಯನ್ನು ಬಿತ್ತುತ್ತಿದೆ ಎಂದು ಹೇಳಿದ್ದರು. ಭಾರತೀಯ ಇತಿಹಾಸದ ತಿರುಳನ್ನು ವಿದ್ಯಾರ್ಥಿಗಳು ಸಮಗ್ರವಾಗಿ ಗ್ರಹಿಸಿಕೊಂಡರೆ ದೇಶದ ಸಂಸ್ಕ್ರತಿ ಮತ್ತು ಪರಂಪರೆ ಯಾವತ್ತೂ ಬದಲಾಗದು ಎಂದು ಅವರು ಹೇಳಿದ್ದರು.

ವಿಶ್ವ ಶಾಂತಿ, ಭಾವೈಕ್ಯತೆ, ಮತ್ತು ಧಾರ್ಮಿಕ ಸಹಿಷ್ಣುತೆಯನ್ನು ಅನುದಿನವೂ ಸಾರುವ ಜೀಯರ್ ಅವರನ್ನು ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನಿಸುವ ಮೂಲಕ ಅವರಿಗೆ ತಕ್ಕ ಗೌರವವನ್ನು ಸಲ್ಲಿಸಲಾಗಿದೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ