AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಚಿನ್ನ ಜೀಯರ್ ಸ್ವಾಮೀಜಿಗೆ ಆಹ್ವಾನ

ಸದಾ ಲೋಕ ಕಲ್ಯಾಣದ ಬಗ್ಗೆ ಯೋಚಿಸುವ ಮತ್ತು ಜೀಯರ್ ಎಂದು ಕರೆಸಿಕೊಳ್ಳುವ ಅತ್ಯಂತ ಗೌರವಾನ್ವಿತ ಶ್ರೀ ರಾಮಾನುಜಾಚಾರ್ಯ ವಂಶಾವಳಿಗೆ ಸೇರಿರುವ ಶ್ರೀ ತ್ರಿಂದಾನಿ ಚಿನ್ನ ಶ್ರೀಮನ್ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಅವರನ್ನು ಆಗಸ್ಟ 5ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. 23ನೇ ವಯಸ್ಸಿನಲ್ಲಿ ಸನ್ಯಾಸದ ದೀಕ್ಷೆ ಪಡೆದ 63 ವರ್ಷ ವಯಸ್ಸಿನ ಜೀಯರ್ ಅವರು ವೈಷ್ಣವ ಸಂಪ್ರದಾಯದಲ್ಲಿ ತರಬೇತಿ ಹೊಂದಿದ್ದು ವೈಷ್ಣಪಂಥದ ತೆಂಕಲೈ ಪ್ರತೀತಿಯನ್ನು ಪ್ರತಿಪಾದಿಸುತ್ತಾರೆ. ಆಧ್ಯಾತ್ಮಿಕ ಪ್ರವಚನಗಳಿಗೆ ವಿಶ್ವದಾದ್ಯಂತ ಪ್ರಖ್ಯಾತರಾಗಿರುವ […]

ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಚಿನ್ನ ಜೀಯರ್ ಸ್ವಾಮೀಜಿಗೆ ಆಹ್ವಾನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 03, 2020 | 8:09 PM

Share

ಸದಾ ಲೋಕ ಕಲ್ಯಾಣದ ಬಗ್ಗೆ ಯೋಚಿಸುವ ಮತ್ತು ಜೀಯರ್ ಎಂದು ಕರೆಸಿಕೊಳ್ಳುವ ಅತ್ಯಂತ ಗೌರವಾನ್ವಿತ ಶ್ರೀ ರಾಮಾನುಜಾಚಾರ್ಯ ವಂಶಾವಳಿಗೆ ಸೇರಿರುವ ಶ್ರೀ ತ್ರಿಂದಾನಿ ಚಿನ್ನ ಶ್ರೀಮನ್ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಅವರನ್ನು ಆಗಸ್ಟ 5ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

23ನೇ ವಯಸ್ಸಿನಲ್ಲಿ ಸನ್ಯಾಸದ ದೀಕ್ಷೆ ಪಡೆದ 63 ವರ್ಷ ವಯಸ್ಸಿನ ಜೀಯರ್ ಅವರು ವೈಷ್ಣವ ಸಂಪ್ರದಾಯದಲ್ಲಿ ತರಬೇತಿ ಹೊಂದಿದ್ದು ವೈಷ್ಣಪಂಥದ ತೆಂಕಲೈ ಪ್ರತೀತಿಯನ್ನು ಪ್ರತಿಪಾದಿಸುತ್ತಾರೆ.

ಆಧ್ಯಾತ್ಮಿಕ ಪ್ರವಚನಗಳಿಗೆ ವಿಶ್ವದಾದ್ಯಂತ ಪ್ರಖ್ಯಾತರಾಗಿರುವ ಅವರು ಅಮೇರಿಕಾದಲ್ಲೂ ಆಧ್ಯಾತ್ಮಿಕ ಕೇಂದ್ರಗಳನ್ನು ನಡೆಸುತ್ತಿದ್ದಾರೆ. ಲೋಕ ಕಲ್ಯಾಣಕ್ಕಾಗಿ ಶ್ರೀಗಳು ಲಂಡನ್, ಹಾಂಗ್ ಕಾಂಗ್, ಸಿಂಗಾಪುರ, ಕೆನಡಾ ಮುಂತಾದ ದೇಶಗಳಲ್ಲಿ ಅನೇಕ ಬಾರಿ ಯಙ್ಞಗಳನ್ನು ನಡೆಸಿದ್ದಾರೆ.

2013 ರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​ಗೆ (ಎಬಿವಿಪಿ) ತಮ್ಮ ಬೆಂಬಲ ಸೂಚಿಸಿದ ಜೀಯರ್, ಅದು ವಿದ್ಯಾರ್ಥಿಗಳಲ್ಲಿ ರಾಷ್ರಪ್ರೇಮ ಹುಟ್ಟಿಸುತ್ತದೆ. ಜೊತೆಗೆ, ಅವರಲ್ಲಿ ಭಾರತೀಯ ಸಂಸ್ಕ್ರತಿಯನ್ನು ಬಿತ್ತುತ್ತಿದೆ ಎಂದು ಹೇಳಿದ್ದರು. ಭಾರತೀಯ ಇತಿಹಾಸದ ತಿರುಳನ್ನು ವಿದ್ಯಾರ್ಥಿಗಳು ಸಮಗ್ರವಾಗಿ ಗ್ರಹಿಸಿಕೊಂಡರೆ ದೇಶದ ಸಂಸ್ಕ್ರತಿ ಮತ್ತು ಪರಂಪರೆ ಯಾವತ್ತೂ ಬದಲಾಗದು ಎಂದು ಅವರು ಹೇಳಿದ್ದರು.

ವಿಶ್ವ ಶಾಂತಿ, ಭಾವೈಕ್ಯತೆ, ಮತ್ತು ಧಾರ್ಮಿಕ ಸಹಿಷ್ಣುತೆಯನ್ನು ಅನುದಿನವೂ ಸಾರುವ ಜೀಯರ್ ಅವರನ್ನು ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನಿಸುವ ಮೂಲಕ ಅವರಿಗೆ ತಕ್ಕ ಗೌರವವನ್ನು ಸಲ್ಲಿಸಲಾಗಿದೆ.

Follow Us
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ