AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Surajkund Chintan Shivir: ಪ್ರತಿ ರಾಜ್ಯವು ಪರಸ್ಪರ ಸ್ಫೂರ್ತಿ ಪಡೆಯಬೇಕು, ಒಗ್ಗಟ್ಟಾಗಿ ಕೆಲಸ ಮಾಡಬೇಕು: ನರೇಂದ್ರ ಮೋದಿ

ದೇಶದ ಒಳಿತಿಗಾಗಿ ಎಲ್ಲಾ ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ಮೋದಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯಗಳ ಗೃಹ ಸಚಿವರ ಚಿಂತನ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು.

Surajkund Chintan Shivir: ಪ್ರತಿ ರಾಜ್ಯವು ಪರಸ್ಪರ ಸ್ಫೂರ್ತಿ ಪಡೆಯಬೇಕು, ಒಗ್ಗಟ್ಟಾಗಿ ಕೆಲಸ ಮಾಡಬೇಕು: ನರೇಂದ್ರ ಮೋದಿ
Narendra Modi Amit Shah
TV9 Web
| Updated By: ನಯನಾ ರಾಜೀವ್|

Updated on:Oct 28, 2022 | 11:18 AM

Share

ದೇಶದ ಒಳಿತಿಗಾಗಿ ಎಲ್ಲಾ ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ  ಮೋದಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯಗಳ ಗೃಹ ಸಚಿವರ ಚಿಂತನ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು.

ಇದು ದೇಶವಾಸಿಗಳ ಬಗ್ಗೆ ರಾಜ್ಯಗಳ ಜವಾಬ್ದಾರಿಯಾಗಿದೆ. ಪ್ರತಿಯೊಂದು ರಾಜ್ಯವೂ ಪರಸ್ಪರ ಕಲಿಯಬೇಕು, ಸ್ಫೂರ್ತಿ ಪಡೆಯಬೇಕು ಎಂದು ಹೇಳಿದರು. ವಿವಿಧ ಸವಾಲುಗಳ ನಡುವೆ ಹಬ್ಬಗಳ ಸಂದರ್ಭದಲ್ಲಿ ದೇಶದ ಏಕತೆಯನ್ನು ಬಲಪಡಿಸುವುದು ನಿಮ್ಮ ಸನ್ನದ್ಧತೆಯ ಪ್ರತಿಬಿಂಬವಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ರಾಜ್ಯಗಳ ಜವಾಬ್ದಾರಿಯಾಗಿದೆ ಆದರೆ ಇದು ದೇಶದ ಏಕತೆ ಹಾಗೂ ಸಮಗ್ರತೆಗೆ ಸಂಬಂಧಿಸಿದೆ ಎಂದರು.

ಗೃಹ ಸಚಿವರ ಈ ಚಿಂತನಾ ಶಿಬಿರವು ಸಹಕಾರಿ ಫೆಡರಲಿಸಂಗೆ ಉತ್ತಮ ಉದಾಹರಣೆಯಾಗಿದೆ. ರಾಜ್ಯಗಳು ಪರಸ್ಪರ ಕಲಿಯಬಹುದು, ಪರಸ್ಪರ ಸ್ಫೂರ್ತಿ ಪಡೆಯಬಹುದು ಮತ್ತು ದೇಶದ ಒಳಿತಿಗಾಗಿ ಕೆಲಸ ಮಾಡಬಹುದು, ಇದು ಸಂವಿಧಾನದ ಆಶಯವಾಗಿದೆ ಹಾಗೂ ಇದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

ಮುಂಬರುವ 25 ವರ್ಷಗಳು ದೇಶದಲ್ಲಿ ಅಮೃತ ಪೀಳಿಗೆಯನ್ನು ನಿರ್ಮಿಸಲಿವೆ, ಪಂಚ ಪ್ರಾಣದ ಸಂಕಲ್ಪಗಳನ್ನು ಮೈಗೂಡಿಸಿಕೊಂಡು ಈ ಅಮೃತ ಪೀಳಿಗೆಯನ್ನು ರಚಿಸಲಾಗುವುದು.

ಸಂವಿಧಾನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ರಾಜ್ಯಗಳ ಜವಾಬ್ದಾರಿಯಾಗಿದ್ದರೂ, ದೇಶದ ಏಕತೆ-ಸಮಗ್ರತೆಯೊಂದಿಗೆ ಸಮಾನವಾದ ಸಂಪರ್ಕ ಹೊಂದಿದ್ದರೂ, ಪ್ರತಿಯೊಂದು ರಾಜ್ಯಗಳು ಪರಸ್ಪರ ಕಲಿಯಬೇಕು, ಪರಸ್ಪರ ಸ್ಫೂರ್ತಿ ಪಡೆಯಬೇಕು ಎಂದು ನುಡಿದರು.

ನಿಮಗೆಲ್ಲರಿಗೂ ಚೆನ್ನಾಗಿ ತಿಳಿದಿದೆ, ಈ ಪಂಚಪ್ರಾಣಗಳ ಮಹತ್ವವನ್ನು ಅರ್ಥಮಾಡಿಕೊಳ್ಳಿ, ಇದನ್ನು ಪ್ರತಿಯೊಬ್ಬರ ಪ್ರಯತ್ನದಿಂದ ಮಾತ್ರ ಸಾಬೀತುಪಡಿಸಬಹುದು. -ಅಭಿವೃದ್ಧಿಹೊಂದಿದ ಭಾರತವನ್ನು ನಿರ್ಮಿಸುವುದು -ಗುಲಾಮಗಿರಿಯ ಪ್ರತಿಯೊಂದು ಚಿಂತನೆಯಿಂದ ಮುಕ್ತಿ -ಪರಂಪರೆಯ ಹೆಮ್ಮೆ -ಏಕತೆ ಮತ್ತು ಒಗ್ಗಟ್ಟು -ನಾಗರಿಕ ಕರ್ತವ್ಯ ಹರ್ಯಾಣದ ಸೂರಜ್​ಕುಂಡ್​ನಲ್ಲಿ ಎರಡು ದಿನಗಳ ಗೃಹ ಸಚಿವರ ಚಿಂತನಾ ಶಿಬಿರವನ್ನು ಆಯೋಜಿಸಲಾಗಿದ್ದು, ಇಂದು ಕೊನೆಯ ದಿನದ ಶಿಬಿರ ನಡೆಯುತ್ತಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:09 am, Fri, 28 October 22

ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!