AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಗಿಂತ ದೊಡ್ಡ ರಾಮ ಮಂದಿರವನ್ನು ಸೀತಾಮಾರಿಯಲ್ಲಿ ಕಟ್ಟುತ್ತೇವೆ -ಚಿರಾಗ್​ ಪಾಸ್ವಾನ್​ ಘೋಷಣೆ

ಪಾಟ್ನಾ: ಬಿಹಾರದಲ್ಲಿ ದಿನದಿಂದ ದಿನಕ್ಕೆ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದೆ. ಚುನಾವಣಾ ಱಲಿಗಳಂತೂ ಆರೋಪ, ಪ್ರತ್ಯಾರೋಪಗಳಿಂದ ತುಂಬಿವೆ. ಈ ಮಧ್ಯೆ, ಇತ್ತೀಚೆಗೆ NDAಯಿಂದ ಅನಧಿಕೃತವಾಗಿ ಹೊರ ಬಂದಿರುವ ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಅಯೋಧ್ಯೆಯಲ್ಲಿ ಕಟ್ಟಲು ಹೊರಟಿರುವ ರಾಮ ಮಂದಿರಕ್ಕಿಂತ ದೊಡ್ಡದಾದ ರಾಮನ ದೇಗುಲವನ್ನು ಬಿಹಾರದ ಸೀತಾಮಾರಿಯಲ್ಲಿ ಕಟ್ಟುತ್ತೇವೆ ಎಂದು ಜನರಿಗೆ ಆಶ್ವಾಸನೆ ನೀಡಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಬಿಹಾರದ ಮಿಥಿಲಾ ವಿಭಾಗದಲ್ಲಿರುವ ಸೀತಾಮಾರಿ ಜಿಲ್ಲೆಗೆ ಪೌರಾಣಿಕ ನಂಟಿದೆ. ಇದೇ ಸೀತಾಮಾರಿಯಲ್ಲಿ ಸೀತೆ ಹುಟ್ಟಿದ್ದು ಎಂದು ಜನ ನಂಬಿದ್ದಾರೆ. ಈಗ […]

ಅಯೋಧ್ಯೆಗಿಂತ ದೊಡ್ಡ ರಾಮ ಮಂದಿರವನ್ನು ಸೀತಾಮಾರಿಯಲ್ಲಿ ಕಟ್ಟುತ್ತೇವೆ -ಚಿರಾಗ್​ ಪಾಸ್ವಾನ್​ ಘೋಷಣೆ
KUSHAL V
|

Updated on: Oct 26, 2020 | 12:22 PM

Share

ಪಾಟ್ನಾ: ಬಿಹಾರದಲ್ಲಿ ದಿನದಿಂದ ದಿನಕ್ಕೆ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದೆ. ಚುನಾವಣಾ ಱಲಿಗಳಂತೂ ಆರೋಪ, ಪ್ರತ್ಯಾರೋಪಗಳಿಂದ ತುಂಬಿವೆ. ಈ ಮಧ್ಯೆ, ಇತ್ತೀಚೆಗೆ NDAಯಿಂದ ಅನಧಿಕೃತವಾಗಿ ಹೊರ ಬಂದಿರುವ ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಅಯೋಧ್ಯೆಯಲ್ಲಿ ಕಟ್ಟಲು ಹೊರಟಿರುವ ರಾಮ ಮಂದಿರಕ್ಕಿಂತ ದೊಡ್ಡದಾದ ರಾಮನ ದೇಗುಲವನ್ನು ಬಿಹಾರದ ಸೀತಾಮಾರಿಯಲ್ಲಿ ಕಟ್ಟುತ್ತೇವೆ ಎಂದು ಜನರಿಗೆ ಆಶ್ವಾಸನೆ ನೀಡಿ ಹೊಸ ವಿವಾದ ಹುಟ್ಟುಹಾಕಿದ್ದಾರೆ.

ಬಿಹಾರದ ಮಿಥಿಲಾ ವಿಭಾಗದಲ್ಲಿರುವ ಸೀತಾಮಾರಿ ಜಿಲ್ಲೆಗೆ ಪೌರಾಣಿಕ ನಂಟಿದೆ. ಇದೇ ಸೀತಾಮಾರಿಯಲ್ಲಿ ಸೀತೆ ಹುಟ್ಟಿದ್ದು ಎಂದು ಜನ ನಂಬಿದ್ದಾರೆ. ಈಗ ಈ ಭಾವನಾತ್ಮಕ ವಿಷಯವನ್ನು ಇಟ್ಟುಕೊಂಡು ಚುನಾವಣೆಯಲ್ಲಿ ಲಾಭ ಪಡೆಯಲು ಚಿರಾಗ್ ಪಾಸ್ವಾನ್ ಹೊರಟಂತಿದೆ.

ರವಿವಾರ ಚುನಾವಣಾ ಱಲಿಯೊಂದರಲ್ಲಿ ಮಾತನಾಡಿರುವ ಪಾಸ್ವಾನ್ ಸೀತಾಮಾರಿಯಲ್ಲಿ ರಾಮಮಂದಿರವನ್ನು ಕಟ್ಟುತ್ತೇವೆ ಎಂದು ಘೋಷಿಸಿದ್ದಾರೆ. ಅಷ್ಟಕ್ಕೆ ನಿಲ್ಲದೆ, ಚಿರಾಗ್​ ಒಂದು ಹೆಜ್ಜೆ ಮುಂದೆ ಹೋಗಿ ಅಯೋಧ್ಯೆಗಿಂತ ದೊಡ್ಡದಾದ ಮಂದಿರ ನಿರ್ಮಾಣ ಮಾಡುತ್ತೇವೆ. ಆಮೇಲೆ ಅಯೋಧ್ಯೆ ಮತ್ತು ಸೀತಾಮಾರಿ ನಡುವೆ ನೇರ ರಸ್ತೆ ಸಂಪರ್ಕ ಕಲ್ಪಿಸುತ್ತೇವೆ ಎಂದು ಹೇಳಿದ್ದಾರೆ.

ಮೊದಲು NDA ಜೊತೆಗಿದ್ದ ಪಾಸ್ವಾನ್ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ರಾಜಕೀಯ ಸಮರ ಸಾರಿದ್ದಾರೆ. ಈಗ NDA ವಿರೋಧ ಪಕ್ಷವಾದ RJD ಪಕ್ಷದ ಜೊತೆ ಕೈ ಜೋಡಿಸಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ