AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಗಿಂತ ದೊಡ್ಡ ರಾಮ ಮಂದಿರವನ್ನು ಸೀತಾಮಾರಿಯಲ್ಲಿ ಕಟ್ಟುತ್ತೇವೆ -ಚಿರಾಗ್​ ಪಾಸ್ವಾನ್​ ಘೋಷಣೆ

ಪಾಟ್ನಾ: ಬಿಹಾರದಲ್ಲಿ ದಿನದಿಂದ ದಿನಕ್ಕೆ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದೆ. ಚುನಾವಣಾ ಱಲಿಗಳಂತೂ ಆರೋಪ, ಪ್ರತ್ಯಾರೋಪಗಳಿಂದ ತುಂಬಿವೆ. ಈ ಮಧ್ಯೆ, ಇತ್ತೀಚೆಗೆ NDAಯಿಂದ ಅನಧಿಕೃತವಾಗಿ ಹೊರ ಬಂದಿರುವ ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಅಯೋಧ್ಯೆಯಲ್ಲಿ ಕಟ್ಟಲು ಹೊರಟಿರುವ ರಾಮ ಮಂದಿರಕ್ಕಿಂತ ದೊಡ್ಡದಾದ ರಾಮನ ದೇಗುಲವನ್ನು ಬಿಹಾರದ ಸೀತಾಮಾರಿಯಲ್ಲಿ ಕಟ್ಟುತ್ತೇವೆ ಎಂದು ಜನರಿಗೆ ಆಶ್ವಾಸನೆ ನೀಡಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಬಿಹಾರದ ಮಿಥಿಲಾ ವಿಭಾಗದಲ್ಲಿರುವ ಸೀತಾಮಾರಿ ಜಿಲ್ಲೆಗೆ ಪೌರಾಣಿಕ ನಂಟಿದೆ. ಇದೇ ಸೀತಾಮಾರಿಯಲ್ಲಿ ಸೀತೆ ಹುಟ್ಟಿದ್ದು ಎಂದು ಜನ ನಂಬಿದ್ದಾರೆ. ಈಗ […]

ಅಯೋಧ್ಯೆಗಿಂತ ದೊಡ್ಡ ರಾಮ ಮಂದಿರವನ್ನು ಸೀತಾಮಾರಿಯಲ್ಲಿ ಕಟ್ಟುತ್ತೇವೆ -ಚಿರಾಗ್​ ಪಾಸ್ವಾನ್​ ಘೋಷಣೆ
KUSHAL V
|

Updated on: Oct 26, 2020 | 12:22 PM

Share

ಪಾಟ್ನಾ: ಬಿಹಾರದಲ್ಲಿ ದಿನದಿಂದ ದಿನಕ್ಕೆ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದೆ. ಚುನಾವಣಾ ಱಲಿಗಳಂತೂ ಆರೋಪ, ಪ್ರತ್ಯಾರೋಪಗಳಿಂದ ತುಂಬಿವೆ. ಈ ಮಧ್ಯೆ, ಇತ್ತೀಚೆಗೆ NDAಯಿಂದ ಅನಧಿಕೃತವಾಗಿ ಹೊರ ಬಂದಿರುವ ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಅಯೋಧ್ಯೆಯಲ್ಲಿ ಕಟ್ಟಲು ಹೊರಟಿರುವ ರಾಮ ಮಂದಿರಕ್ಕಿಂತ ದೊಡ್ಡದಾದ ರಾಮನ ದೇಗುಲವನ್ನು ಬಿಹಾರದ ಸೀತಾಮಾರಿಯಲ್ಲಿ ಕಟ್ಟುತ್ತೇವೆ ಎಂದು ಜನರಿಗೆ ಆಶ್ವಾಸನೆ ನೀಡಿ ಹೊಸ ವಿವಾದ ಹುಟ್ಟುಹಾಕಿದ್ದಾರೆ.

ಬಿಹಾರದ ಮಿಥಿಲಾ ವಿಭಾಗದಲ್ಲಿರುವ ಸೀತಾಮಾರಿ ಜಿಲ್ಲೆಗೆ ಪೌರಾಣಿಕ ನಂಟಿದೆ. ಇದೇ ಸೀತಾಮಾರಿಯಲ್ಲಿ ಸೀತೆ ಹುಟ್ಟಿದ್ದು ಎಂದು ಜನ ನಂಬಿದ್ದಾರೆ. ಈಗ ಈ ಭಾವನಾತ್ಮಕ ವಿಷಯವನ್ನು ಇಟ್ಟುಕೊಂಡು ಚುನಾವಣೆಯಲ್ಲಿ ಲಾಭ ಪಡೆಯಲು ಚಿರಾಗ್ ಪಾಸ್ವಾನ್ ಹೊರಟಂತಿದೆ.

ರವಿವಾರ ಚುನಾವಣಾ ಱಲಿಯೊಂದರಲ್ಲಿ ಮಾತನಾಡಿರುವ ಪಾಸ್ವಾನ್ ಸೀತಾಮಾರಿಯಲ್ಲಿ ರಾಮಮಂದಿರವನ್ನು ಕಟ್ಟುತ್ತೇವೆ ಎಂದು ಘೋಷಿಸಿದ್ದಾರೆ. ಅಷ್ಟಕ್ಕೆ ನಿಲ್ಲದೆ, ಚಿರಾಗ್​ ಒಂದು ಹೆಜ್ಜೆ ಮುಂದೆ ಹೋಗಿ ಅಯೋಧ್ಯೆಗಿಂತ ದೊಡ್ಡದಾದ ಮಂದಿರ ನಿರ್ಮಾಣ ಮಾಡುತ್ತೇವೆ. ಆಮೇಲೆ ಅಯೋಧ್ಯೆ ಮತ್ತು ಸೀತಾಮಾರಿ ನಡುವೆ ನೇರ ರಸ್ತೆ ಸಂಪರ್ಕ ಕಲ್ಪಿಸುತ್ತೇವೆ ಎಂದು ಹೇಳಿದ್ದಾರೆ.

ಮೊದಲು NDA ಜೊತೆಗಿದ್ದ ಪಾಸ್ವಾನ್ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ರಾಜಕೀಯ ಸಮರ ಸಾರಿದ್ದಾರೆ. ಈಗ NDA ವಿರೋಧ ಪಕ್ಷವಾದ RJD ಪಕ್ಷದ ಜೊತೆ ಕೈ ಜೋಡಿಸಿದ್ದಾರೆ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!