ಕೊಚ್ಚಿ ಹಾಕಿ, ಹೂತು ಹಾಕಿ; ಕೊಲ್ಕತ್ತಾ ರ್ಯಾಲಿಯಲ್ಲಿ ಮಿಥುನ್ ಚಕ್ರವರ್ತಿ ಅಬ್ಬರ

ತೃಣಮೂಲ ಕಾಂಗ್ರೆಸ್ ನಾಯಕ ಹುಮಾಯೂನ್ ಕಬೀರ್ ಧಾರ್ಮಿಕ ಆಧಾರದ ಮೇಲೆ ವಿರೋಧ ಪಕ್ಷದ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ "ಅವರನ್ನು ಕತ್ತರಿಸಿ, ನೆಲದಲ್ಲಿ ಹೂತುಹಾಕಿ" ಎಂದು ಕಾರ್ಯಕರ್ತರೆದುರು ಅಬ್ಬರಿಸಿದ್ದಾರೆ.

ಕೊಚ್ಚಿ ಹಾಕಿ, ಹೂತು ಹಾಕಿ; ಕೊಲ್ಕತ್ತಾ ರ್ಯಾಲಿಯಲ್ಲಿ ಮಿಥುನ್ ಚಕ್ರವರ್ತಿ ಅಬ್ಬರ
ಮಿಥುನ್ ಚಕ್ರವರ್ತಿ
Follow us
|

Updated on:Oct 28, 2024 | 6:06 PM

ನವದೆಹಲಿ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಂದಿನ ತಿಂಗಳು 6 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಿದ್ಧವಾಗಿರುವ ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂದು ಕೊಲ್ಕತ್ತಾದಲ್ಲಿ ಭಾಷಣ ಮಾಡಿರುವ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

74 ವರ್ಷದ ಮಿಥುನ್ ಚಕ್ರವರ್ತಿ ಅವರು ತೃಣಮೂಲ ನಾಯಕ ಹುಮಾಯೂನ್ ಕಬೀರ್ ನೀಡಿದ್ದ ವಿವಾದಾತ್ಮಕ ಹೇಳಿಕೆ ವಿರುದ್ಧ ಹರಿಹಾಯ್ದಿದ್ದಾರೆ. ಅವರು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಧಾರ್ಮಿಕ ಆಧಾರದ ಮೇಲೆ ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ್ದರು. ಇದು ಚುನಾವಣಾ ಆಯೋಗದ ಖಂಡನೆಗೆ ಕಾರಣವಾಗಿತ್ತು. ಇದಕ್ಕೆ ಪ್ರತಿಯಾಗಿ ಮಿಥುನ್ ಚಕ್ರವರ್ತಿ ಬಿಜೆಪಿ ಬೆಂಬಲಿಗರಿಗೆ “ಅವರನ್ನು ಕತ್ತರಿಸಿ ನೆಲದಲ್ಲಿ ಹೂತುಹಾಕಿ” ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ರಸ್ತೆ ಬದಿ ಮುಖ ಸುಟ್ಟಿರುವ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವಿನ ಉದ್ವಿಗ್ನತೆಯು ಉಪಚುನಾವಣೆಗಳಿಗೆ ಮುಂಚಿತವಾಗಿ ನಾಟಕೀಯವಾಗಿ ಉಲ್ಬಣಗೊಂಡಿದೆ. ಪಕ್ಷದ ನಾಯಕರ ಪ್ರಚೋದಕ ಹೇಳಿಕೆಗಳು ಚುನಾವಣಾ ಅಖಾಡದ ಕಾವೇರಿಸಿದೆ. ಶೇ. 70ರಷ್ಟು ಮುಸ್ಲಿಮರು ಮತ್ತು ಶೇ. 30ರಷ್ಟು ಹಿಂದೂಗಳಿದ್ದಾರೆ ಎಂದು ಒಬ್ಬ ನಾಯಕ ಒಮ್ಮೆ ಹೇಳಿದ್ದರು. ಅವರನ್ನು ‘ಕತ್ತರಿಸಿ ಭಾಗೀರಥಿ ನದಿಗೆ ಎಸೆಯುತ್ತೇನೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದಕ್ಕೆ ಪ್ರತಿಕ್ರಿಯಿಸುತ್ತಾರೆ ಎಂದು ನಾನು ನಿರೀಕ್ಷಿಸಿದ್ದೆ. ಆದರೆ, ಅವರು ಉತ್ತರಿಸಲಿಲ್ಲ. ಆದ್ದರಿಂದ ಈಗ ನಾವು ಅವರನ್ನು ಕತ್ತರಿಸಿ ನೆಲದಲ್ಲಿ ಹೂತುಹಾಕಬೇಕಾಗಿದೆ ಎಂದು ಮಿಥುನ್ ಚಕ್ರವರ್ತಿ ಹೇಳಿದ್ದಾರೆ.

2026ರಲ್ಲಿ ಬಿಜೆಪಿ ಪಶ್ಚಿಮ ಬಂಗಾಳವನ್ನು ತನ್ನದಾಗಿಸಿಕೊಳ್ಳುತ್ತದೆ ಎಂದು ಚಕ್ರವರ್ತಿ ಭವಿಷ್ಯ ನುಡಿದಿದ್ದಾರೆ. ಕೊಲ್ಕತ್ತಾದಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಮಾತನಾಡಿದ ಮಿಥುನ್ ಚಕ್ರವರ್ತಿ, 2026ರ ವಿಧಾನಸಭಾ ಚುನಾವಣೆಯಲ್ಲಿ ಬಂಗಾಳದ ಸಿಂಹಾಸನವನ್ನು ಗೆಲ್ಲಲು ನಾವು ಏನು ಬೇಕಾದರೂ ಮಾಡುತ್ತೇವೆ. ಈ ರಾಜ್ಯ ಬಿಜೆಪಿಗೆ ಸೇರುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಮಿಥುನ್ ಚಕ್ರವರ್ತಿ ಆರೋಗ್ಯದಲ್ಲಿ ಚೇತರಿಕೆ; ಪರೀಕ್ಷೆ ಮಾಡಿ ಶೀಘ್ರವೇ ಡಿಸ್ಚಾರ್ಜ್​

ನಟ, ರಾಜಕಾರಣಿ ಮಿಥುನ್ ಚಕ್ರವರ್ತಿ ಬಿಜೆಪಿ ಕಾರ್ಯಕ್ರಮವೊಂದರಲ್ಲಿ ನೀಡಿರುವ ಹೇಳಿಕೆಗಳು ವ್ಯಾಪಕ ಖಂಡನೆ ಮತ್ತು ಕಳವಳಕ್ಕೆ ಕಾರಣವಾಗಿವೆ. ಹಿಂಸಾತ್ಮಕ ಚಿತ್ರಣದಿಂದ ತುಂಬಿದ ಮಿಥುನ್ ಚಕ್ರವರ್ತಿಯವರ ಹೇಳಿಕೆಗಳು ಪಶ್ಚಿಮ ಬಂಗಾಳದ ರಾಜಕೀಯ ವಾತಾವರಣದಲ್ಲಿ ಕೋಲಾಹಲವನ್ನು ಉಂಟುಮಾಡಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಅವರ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:05 pm, Mon, 28 October 24

ಸುರೇಶ್ ಮೈಸೂರಿಗೆ ಹೋದಾಗ ಎಲ್ಲ ವ್ಯವಸ್ಥೆ ಮಂಜುನಾಥ್ ಮಾಡ್ತಾರೆ: ಗಂಗರಾಜು
ಸುರೇಶ್ ಮೈಸೂರಿಗೆ ಹೋದಾಗ ಎಲ್ಲ ವ್ಯವಸ್ಥೆ ಮಂಜುನಾಥ್ ಮಾಡ್ತಾರೆ: ಗಂಗರಾಜು
ಎಲ್ಲರಿಗೂ ಕಣ್ಣೀರು ಹಾಕಿಸಿದ ಬಿಗ್ ಬಾಸ್; ಒಬ್ಬೊಬ್ಬರ ನೋವು ಒಂದೊಂದು ರೀತಿ
ಎಲ್ಲರಿಗೂ ಕಣ್ಣೀರು ಹಾಕಿಸಿದ ಬಿಗ್ ಬಾಸ್; ಒಬ್ಬೊಬ್ಬರ ನೋವು ಒಂದೊಂದು ರೀತಿ
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ
ಅಕ್ರಮದ ದಾಖಲೆ ಬಿಡುಗಡೆ ಮಾಡಿ ಎಂದಿದ್ದಕ್ಕೆ ಸುರೇಶ್ ಹಾರಿಕೆ ಉತ್ತರ ನೀಡಿದರು
ಅಕ್ರಮದ ದಾಖಲೆ ಬಿಡುಗಡೆ ಮಾಡಿ ಎಂದಿದ್ದಕ್ಕೆ ಸುರೇಶ್ ಹಾರಿಕೆ ಉತ್ತರ ನೀಡಿದರು
ನನ್ನನ್ನು ಕೆಣಕುವ ಹೇಳಿಕೆಗಳನ್ನು ಕಾಂಗ್ರೆಸ್ ನೀಡುತ್ತಿದೆ: ಕುಮಾರಸ್ವಾಮಿ
ನನ್ನನ್ನು ಕೆಣಕುವ ಹೇಳಿಕೆಗಳನ್ನು ಕಾಂಗ್ರೆಸ್ ನೀಡುತ್ತಿದೆ: ಕುಮಾರಸ್ವಾಮಿ
ಸೂಕ್ತ ಪರಿಹಾರ ನೀಡದಿದ್ದರೆ ವಿಧಾನಸೌಧದ ಮುಂದೆ ಧರಣಿ, ರೈತನ ಎಚ್ಚರಿಕೆ
ಸೂಕ್ತ ಪರಿಹಾರ ನೀಡದಿದ್ದರೆ ವಿಧಾನಸೌಧದ ಮುಂದೆ ಧರಣಿ, ರೈತನ ಎಚ್ಚರಿಕೆ
ಹಾಸನಾಂಬ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತ ಸಾಗರ
ಹಾಸನಾಂಬ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತ ಸಾಗರ