AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರ ಅನುಮತಿಯಿಲ್ಲದೆ ಮಕ್ಕಳಿಗೆ ಸಾಂಟಾ ಕ್ಲಾಸ್ ವೇಷ ತೊಡಿಸಬಾರದು; ಶಿಕ್ಷಣ ಇಲಾಖೆ ಆದೇಶ

ಕ್ರಿಸ್‌ಮಸ್ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸಾಂಟಾ ಕ್ಲಾಸ್ ವೇಷಭೂಷಣ ಧರಿಸುವ ಮೊದಲು ಖಾಸಗಿ ಶಾಲೆಗಳು ಪೋಷಕರಿಂದ ಲಿಖಿತ ಅನುಮತಿಯನ್ನು ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯು ಎಲ್ಲಾ ಸರ್ಕಾರೇತರ ಶಿಕ್ಷಣ ಸಂಸ್ಥೆಗಳಿಗೆ ಪತ್ರವನ್ನು ನೀಡಿದೆ.

ಪೋಷಕರ ಅನುಮತಿಯಿಲ್ಲದೆ ಮಕ್ಕಳಿಗೆ ಸಾಂಟಾ ಕ್ಲಾಸ್ ವೇಷ ತೊಡಿಸಬಾರದು; ಶಿಕ್ಷಣ ಇಲಾಖೆ ಆದೇಶ
Christmas Day 2023Image Credit source: Pinterest
ಅಕ್ಷತಾ ವರ್ಕಾಡಿ
|

Updated on: Dec 23, 2023 | 5:17 PM

Share

ಭೂಪಾಲ್: ಡಿಸೆಂಬರ್ 25 ರಂದು ಕ್ರಿಸ್‌ಮಸ್ ಹಬ್ಬಕ್ಕೆ ಮುಂಚಿತವಾಗಿ ಶಾಲೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಅನೇಕ ಶಾಲೆಗಳು ಕ್ರಿಶ್ಚಿಯನ್ ಹಬ್ಬಗಳ ಸಂದರ್ಭದಲ್ಲಿ ಸಾಂಟಾ ಕ್ಲಾಸ್ ವೇಷಭೂಷಣವನ್ನು ಮಕ್ಕಳಿಗೆ ತೊಡಿಸಿ,ಕಾರ್ಯಕ್ರಮವನ್ನು ಆಯೋಜಿಸುವುದುಂಟು. ಆದರೆ, ಖಾಸಗಿ ಶಾಲೆಗಳು ಈ ಉಡುಗೆ ತೊಡಿಸುವ ಮುನ್ನ ಪೋಷಕರಿಂದ ಲಿಖಿತ ಅನುಮತಿ ಪಡೆಯಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕುಟುಂಬದವರ ಅನುಮತಿ ಪಡೆಯದೆ ಮಕ್ಕಳು ಇಂತಹ ಉಡುಗೆ ತೊಟ್ಟರೆ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

ಶಾಲೆಯ ಕ್ರಿಸ್ಮಸ್ ಈವೆಂಟ್‌ಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು ಸಾಂಟಾ ಕ್ಲಾಸ್‌ನಂತೆ ವೇಷ ಧರಿಸುತ್ತಾರೆ. ಆದರೆ, ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹೊಸ ಆದೇಶ ಹೊರಡಿಸಿದೆ. ಇದರ ಪ್ರಕಾರ ಕ್ರಿಸ್ ಮಸ್ ಹಬ್ಬದಂದು ಸಾಂತಾಕ್ಲಾಸ್ ವೇಷಭೂಷಣ ಧರಿಸುವ ಮುನ್ನ ಪೋಷಕರ ಲಿಖಿತ ಅನುಮತಿ ಪಡೆಯಬೇಕು ಎಂದು ಖಾಸಗಿ ಶಾಲೆಗಳು ಎಲ್ಲಾ ಸರ್ಕಾರೇತರ ಸಂಸ್ಥೆಗಳಿಗೆ ಪತ್ರ ನೀಡಿವೆ.

ಇದನ್ನೂ ಓದಿ: ಪತ್ನಿಯ ಮೇಲಿನ ಕೋಪಕ್ಕೆ ರಸ್ತೆಬದಿ ನಿಲ್ಲಿಸಿದ್ದ 20 ಕಾರುಗಳ ಗಾಜು ಹೊಡೆದು ಕೋಪ ತೀರಿಸಿಕೊಂಡ ಪತಿರಾಯ

ಜಿಲ್ಲಾ ಶಿಕ್ಷಣಾಧಿಕಾರಿ ವಿವೇಕ್ ದುಬೆ ಅವರ ಹೆಸರಿನಲ್ಲಿ ಈ ಆದೇಶ ಹೊರಡಿಸಲಾಗಿದ್ದು, ಪೋಷಕರ ಅನುಮತಿಯಿಲ್ಲದೆ ಯಾವುದೇ ಶಾಲಾ ಆಡಳಿತ ಮಂಡಳಿಯು ಸಾಂತಾಕ್ಲಾಸ್ ವೇಷಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡುವುದಿಲ್ಲ . ಪೋಷಕರ ಅನುಮತಿ ಇಲ್ಲದೆ ಮಕ್ಕಳಿಗೆ ವೇಷ ತೊಡಿಸುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಶಾಲೆಯ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಶಿಕ್ಷಣ ಇಲಾಖೆಯ ಈ ಪತ್ರವನ್ನು ಜಿಲ್ಲೆಯ ಎಲ್ಲ ಖಾಸಗಿ ಶಾಲೆಗಳಿಗೂ ನೀಡಲಾಗಿದೆ. ಈವೆಂಟ್‌ಗಾಗಿ ವಿಶೇಷ ಹಬ್ಬದ ಉಡುಪನ್ನು ಧರಿಸಲು ಮಕ್ಕಳನ್ನು ಒತ್ತಾಯಿಸಲಾಗುತ್ತದೆ. ಇದು ಅಹಿತಕರ ಪರಿಸ್ಥಿತಿಯನ್ನು ಸೃಷ್ಟಿಸುತ್ತದೆ. ಹಾಗಾಗಿ ಈ ಆದೇಶ ಹೊರಡಿಸಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ವಿಶ್ವದಾದ್ಯಂತ ಕ್ರಿಸ್‌ಮಸ್ ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದ್ದು, ವಿಶ್ವ ಹಿಂದೂ ಪರಿಷತ್ ಕೂಡ ಈ ಕುರಿತು ಶಾಲೆಗಳಿಗೆ ಪತ್ರ ಬರೆದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!