AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗರೇಟ್, ಗುಟ್ಕಾ ಬಳಸುತ್ತೀರಾ? ಮುಂದಿನ ತಿಂಗಳಿಂದ ನಿಮ್ಮ ಜೇಬಿಗೆ ಕತ್ತರಿ ಗ್ಯಾರಂಟಿ

ಸಿಗರೇಟ್, ಬೀಡಿ, ಪಾನ್ ಮಸಾಲಾ ತಂಬಾಕು ಉತ್ಪನ್ನಗಳ ಬೆಲೆ ಮುಂದಿನ ತಿಂಗಳಿಂದ ದುಬಾರಿಯಾಗಲಿದೆ. ಫೆ. 1ರಿಂದ ಹೊಸ ತೆರಿಗೆ ನಿಯಮ ಜಾರಿಯಾಗಲಿದೆ. ತಂಬಾಕು ಮತ್ತು ಪಾನ್ ಮಸಾಲಾ ಮೇಲಿನ ಹೊಸ ತೆರಿಗೆಗಳು ಜಿಎಸ್‌ಟಿ ದರಕ್ಕಿಂತ ಹೆಚ್ಚಿರುತ್ತವೆ. ಫೆಬ್ರವರಿ 1ರಿಂದ ಪಾನ್ ಮಸಾಲಾ, ಸಿಗರೇಟ್, ತಂಬಾಕು ಉತ್ಪನ್ನಗಳು ಶೇ. 40ರಷ್ಟು ಜಿಎಸ್‌ಟಿ ದರವನ್ನು ಹೊಂದಲಿವೆ ಎಂದು ಸರ್ಕಾರಿ ಅಧಿಸೂಚನೆ ತಿಳಿಸಿದೆ.

ಸಿಗರೇಟ್, ಗುಟ್ಕಾ ಬಳಸುತ್ತೀರಾ? ಮುಂದಿನ ತಿಂಗಳಿಂದ ನಿಮ್ಮ ಜೇಬಿಗೆ ಕತ್ತರಿ ಗ್ಯಾರಂಟಿ
Cigarette
ಸುಷ್ಮಾ ಚಕ್ರೆ
|

Updated on:Jan 01, 2026 | 4:07 PM

Share

ನವದೆಹಲಿ, ಜನವರಿ 1: ಫೆಬ್ರವರಿ 1ರಿಂದ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಹೊಸ ಸೆಸ್ ಲೆವಿಗಳನ್ನು ಜಾರಿ ಮಾಡಲಾಗುತ್ತಿದೆ. ಹೀಗಾಗಿ, ಸಿಗರೇಟ್ (cigarettes), ಬೀಡಿ, ಪಾನ್ ಮಸಾಲಾ ಮತ್ತು ಇತರ ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚು ದುಬಾರಿಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರವು ಸೂಚಿಸಿದ ಹೊಸ ತೆರಿಗೆ ನೀತಿ ಫೆಬ್ರವರಿ 1ರಿಂದ ಜಾರಿಗೆ ಬರಲಿದೆ. ಇದು ಆಯ್ದ ಉತ್ಪನ್ನಗಳಿಗೆ ಬೆಲೆಯ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಇದೀಗ ಅಸ್ತಿತ್ವದಲ್ಲಿರುವ ಜಿಎಸ್‌ಟಿ ಜೊತೆಗೆ ನಿರ್ದಿಷ್ಟ ಅಬಕಾರಿ ಸುಂಕವನ್ನು ಪರಿಚಯಿಸುವುದರಿಂದ ಸಿಗರೇಟ್‌ಗಳು ಹೆಚ್ಚಿನ ತೆರಿಗೆ ಹೊರೆಯನ್ನು ಅನುಭವಿಸುತ್ತವೆ. ಸಿಗರೇಟ್ ಉದ್ದವನ್ನು ಆಧರಿಸಿ ಸುಂಕವು ಬದಲಾಗುತ್ತದೆ. ಸರ್ಕಾರದ ಪರಿಷ್ಕೃತ ತೆರಿಗೆ ರಚನೆಯು ಬೀಡಿಗಳ ಮೇಲೂ ಪರಿಣಾಮ ಬೀರುತ್ತದೆ. ಜಿಎಸ್‌ಟಿ ಅನ್ವಯವಾಗುತ್ತಲೇ ಇದ್ದರೂ ಹೆಚ್ಚುವರಿ ಸುಂಕವನ್ನು ಪರಿಚಯಿಸುವುದರಿಂದ ಈ ಉತ್ಪನ್ನಗಳ ಮೇಲಿನ ಒಟ್ಟಾರೆ ತೆರಿಗೆ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ, ಬೀಡಿ ಕೂಡ ಗ್ರಾಹಕರಿಗೆ ದುಬಾರಿಯಾಗಬಹುದು.

ಇದನ್ನೂ ಓದಿ: ತಂಬಾಕು ತ್ಯಜಿಸುವುದರಿಂದ 20 ನಿಮಿಷದಿಂದ 20 ವರ್ಷದವರಗೆ ಆರೋಗ್ಯವಾಗಿರಬಹುದು

ಇದರ ಜೊತೆಗೆ, ಪಾನ್ ಮಸಾಲಾ ಮೇಲೆ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ವಿಧಿಸಲಾಗುವುದು. ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕವನ್ನು ವಿಧಿಸಲಾಗುತ್ತದೆ. ಈ ಸೆಸ್ ಒಮ್ಮೆ ಜಾರಿಗೆ ಬಂದ ನಂತರ ಅನೇಕ ವಸ್ತುಗಳ ಬೆಲೆಗಳನ್ನು ಹೆಚ್ಚಿಸುವ ನಿರೀಕ್ಷೆಯಿದೆ. ಗುಟ್ಕಾ, ಜರ್ದಾ, ಖೈನಿ ಮತ್ತು ಇತರ ರೀತಿಯ ಜಗಿಯುವ ತಂಬಾಕಿನಂತಹ ಉತ್ಪನ್ನಗಳು ಹೊಸ ಅಬಕಾರಿ ಸುಂಕ ಮತ್ತು ಸೆಸ್ ಚೌಕಟ್ಟಿನ ಅಡಿಯಲ್ಲಿ ಬರುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:05 pm, Thu, 1 January 26

Follow Us
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ