AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗರೇಟ್, ಗುಟ್ಕಾ ಬಳಸುತ್ತೀರಾ? ಮುಂದಿನ ತಿಂಗಳಿಂದ ನಿಮ್ಮ ಜೇಬಿಗೆ ಕತ್ತರಿ ಗ್ಯಾರಂಟಿ

ಸಿಗರೇಟ್, ಬೀಡಿ, ಪಾನ್ ಮಸಾಲಾ ತಂಬಾಕು ಉತ್ಪನ್ನಗಳ ಬೆಲೆ ಮುಂದಿನ ತಿಂಗಳಿಂದ ದುಬಾರಿಯಾಗಲಿದೆ. ಫೆ. 1ರಿಂದ ಹೊಸ ತೆರಿಗೆ ನಿಯಮ ಜಾರಿಯಾಗಲಿದೆ. ತಂಬಾಕು ಮತ್ತು ಪಾನ್ ಮಸಾಲಾ ಮೇಲಿನ ಹೊಸ ತೆರಿಗೆಗಳು ಜಿಎಸ್‌ಟಿ ದರಕ್ಕಿಂತ ಹೆಚ್ಚಿರುತ್ತವೆ. ಫೆಬ್ರವರಿ 1ರಿಂದ ಪಾನ್ ಮಸಾಲಾ, ಸಿಗರೇಟ್, ತಂಬಾಕು ಉತ್ಪನ್ನಗಳು ಶೇ. 40ರಷ್ಟು ಜಿಎಸ್‌ಟಿ ದರವನ್ನು ಹೊಂದಲಿವೆ ಎಂದು ಸರ್ಕಾರಿ ಅಧಿಸೂಚನೆ ತಿಳಿಸಿದೆ.

ಸಿಗರೇಟ್, ಗುಟ್ಕಾ ಬಳಸುತ್ತೀರಾ? ಮುಂದಿನ ತಿಂಗಳಿಂದ ನಿಮ್ಮ ಜೇಬಿಗೆ ಕತ್ತರಿ ಗ್ಯಾರಂಟಿ
Cigarette
ಸುಷ್ಮಾ ಚಕ್ರೆ
|

Updated on:Jan 01, 2026 | 4:07 PM

Share

ನವದೆಹಲಿ, ಜನವರಿ 1: ಫೆಬ್ರವರಿ 1ರಿಂದ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಹೊಸ ಸೆಸ್ ಲೆವಿಗಳನ್ನು ಜಾರಿ ಮಾಡಲಾಗುತ್ತಿದೆ. ಹೀಗಾಗಿ, ಸಿಗರೇಟ್ (cigarettes), ಬೀಡಿ, ಪಾನ್ ಮಸಾಲಾ ಮತ್ತು ಇತರ ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚು ದುಬಾರಿಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರವು ಸೂಚಿಸಿದ ಹೊಸ ತೆರಿಗೆ ನೀತಿ ಫೆಬ್ರವರಿ 1ರಿಂದ ಜಾರಿಗೆ ಬರಲಿದೆ. ಇದು ಆಯ್ದ ಉತ್ಪನ್ನಗಳಿಗೆ ಬೆಲೆಯ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಇದೀಗ ಅಸ್ತಿತ್ವದಲ್ಲಿರುವ ಜಿಎಸ್‌ಟಿ ಜೊತೆಗೆ ನಿರ್ದಿಷ್ಟ ಅಬಕಾರಿ ಸುಂಕವನ್ನು ಪರಿಚಯಿಸುವುದರಿಂದ ಸಿಗರೇಟ್‌ಗಳು ಹೆಚ್ಚಿನ ತೆರಿಗೆ ಹೊರೆಯನ್ನು ಅನುಭವಿಸುತ್ತವೆ. ಸಿಗರೇಟ್ ಉದ್ದವನ್ನು ಆಧರಿಸಿ ಸುಂಕವು ಬದಲಾಗುತ್ತದೆ. ಸರ್ಕಾರದ ಪರಿಷ್ಕೃತ ತೆರಿಗೆ ರಚನೆಯು ಬೀಡಿಗಳ ಮೇಲೂ ಪರಿಣಾಮ ಬೀರುತ್ತದೆ. ಜಿಎಸ್‌ಟಿ ಅನ್ವಯವಾಗುತ್ತಲೇ ಇದ್ದರೂ ಹೆಚ್ಚುವರಿ ಸುಂಕವನ್ನು ಪರಿಚಯಿಸುವುದರಿಂದ ಈ ಉತ್ಪನ್ನಗಳ ಮೇಲಿನ ಒಟ್ಟಾರೆ ತೆರಿಗೆ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ, ಬೀಡಿ ಕೂಡ ಗ್ರಾಹಕರಿಗೆ ದುಬಾರಿಯಾಗಬಹುದು.

ಇದನ್ನೂ ಓದಿ: ತಂಬಾಕು ತ್ಯಜಿಸುವುದರಿಂದ 20 ನಿಮಿಷದಿಂದ 20 ವರ್ಷದವರಗೆ ಆರೋಗ್ಯವಾಗಿರಬಹುದು

ಇದರ ಜೊತೆಗೆ, ಪಾನ್ ಮಸಾಲಾ ಮೇಲೆ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ವಿಧಿಸಲಾಗುವುದು. ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕವನ್ನು ವಿಧಿಸಲಾಗುತ್ತದೆ. ಈ ಸೆಸ್ ಒಮ್ಮೆ ಜಾರಿಗೆ ಬಂದ ನಂತರ ಅನೇಕ ವಸ್ತುಗಳ ಬೆಲೆಗಳನ್ನು ಹೆಚ್ಚಿಸುವ ನಿರೀಕ್ಷೆಯಿದೆ. ಗುಟ್ಕಾ, ಜರ್ದಾ, ಖೈನಿ ಮತ್ತು ಇತರ ರೀತಿಯ ಜಗಿಯುವ ತಂಬಾಕಿನಂತಹ ಉತ್ಪನ್ನಗಳು ಹೊಸ ಅಬಕಾರಿ ಸುಂಕ ಮತ್ತು ಸೆಸ್ ಚೌಕಟ್ಟಿನ ಅಡಿಯಲ್ಲಿ ಬರುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:05 pm, Thu, 1 January 26

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್