AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICSE Exam 2021: ಐಸಿಎಸ್​ಇ ಬೋರ್ಡ್​ನ 12ನೇ ತರಗತಿ ಪರೀಕ್ಷೆಗಳು ಕೂಡ ರದ್ದು

ICSE 12th Exam 2021 Cancelled: ಐಸಿಎಸ್​ಇ ಬೋರ್ಡ್​ನಲ್ಲಿ ಕಲಿಯುತ್ತಿರುವ 12ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆ ರದ್ದುಗೊಳಿಸಿ ತೀರ್ಮಾನ ಕೈಗೊಳ್ಳಲಾಗಿದೆ.

ICSE Exam 2021: ಐಸಿಎಸ್​ಇ ಬೋರ್ಡ್​ನ 12ನೇ ತರಗತಿ ಪರೀಕ್ಷೆಗಳು ಕೂಡ ರದ್ದು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 01, 2021 | 9:24 PM

Share

ದೆಹಲಿ: ಐಸಿಎಸ್​ಇ ಪರೀಕ್ಷೆಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಸಿಬಿಎಸ್​ಇ ಪರೀಕ್ಷೆ ರದ್ದುಗೊಳಿಸಿದ ಬೆನ್ನಲ್ಲೇ ಐಸಿಎಸ್​ಇ ಬೋರ್ಡ್ ಈ ತೀರ್ಮಾನ ಕೈಗೊಂಡಿದೆ. ಐಸಿಎಸ್​ಇ ಬೋರ್ಡ್​ನಲ್ಲಿ ಕಲಿಯುತ್ತಿರುವ 12ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆ ರದ್ದುಗೊಳಿಸಿ ತೀರ್ಮಾನ ಕೈಗೊಳ್ಳಲಾಗಿದೆ. ಸಿಬಿಎಸ್‌ಇ ಮತ್ತು ಸಿಐಎಸ್‌ಸಿಇ ವಿದ್ಯಾರ್ಥಿಗಳಿಗೆ ಈ ವರ್ಷ 12 ನೇ ತರಗತಿ ಪರೀಕ್ಷೆಗಳು ನಡೆಯುವುದಿಲ್ಲ. ನರೇಂದ್ರ ಮೋದಿ ಸರ್ಕಾರದ ಉನ್ನತ ಮಟ್ಟದ ಸಚಿವರ ನಡುವಿನ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ವಹಿಸಿದ್ದರು.ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಿದ್ದರು. ಸಭೆಯಲ್ಲಿ, 12 ನೇ ತರಗತಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸರ್ಕಾರವು ಪರಿಗಣಿಸುತ್ತಿರುವ ಎಲ್ಲಾ ಆಯ್ಕೆಗಳ ಬಗ್ಗೆ ಮೋದಿಗೆ ತಿಳಿಸಲಾಗುವುದು. ಪ್ರಸ್ತುತ, ದೈಹಿಕ ಪರೀಕ್ಷೆಗಳನ್ನು ರದ್ದುಗೊಳಿಸುವುದು ಸೇರಿದಂತೆ ಎರಡು ಆಯ್ಕೆಗಳನ್ನು ಸರ್ಕಾರ ಪರಿಗಣಿಸುತ್ತಿದೆ. ಕೋವಿಡ್ -19 ನಂತರದ ತೊಡಕುಗಳಿಂದಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಪ್ರಸ್ತುತ ಆಸ್ಪತ್ರೆಗೆ ದಾಖಲಾಗಿದ್ದು, ಸಭೆಯಲ್ಲಿ ಭಾಗವಹಿಸಿಲ್ಲ.

ಪರೀಕ್ಷೆಗಳಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳಿಗೆ ಆಯ್ಕೆಗಳನ್ನು ನೀಡಲಿದೆ ಸಿಬಿಎಸ್ಇ ಕಳೆದ ವರ್ಷದಂತೆ ಕೆಲವು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ತೆಗೆದುಕೊಳ್ಳಲು ಬಯಸಿದರೆ, ಸಿಬಿಎಸ್‌ಇಯಿಂದ ಅಂತಹ ಆಯ್ಕೆಯನ್ನು ಅವರಿಗೆ ಒದಗಿಸಲಾಗುವುದು. ಪರಿಸ್ಥಿತಿ ಅನುಕೂಲಕರವಾದರೆ ಮಾತ್ರ ಈ ಆಯ್ಕೆ ಸಿಬಿಎಸ್​ಇ ವಿದ್ಯಾರ್ಥಿಗಳಿಗೆ ಇರಲಿದೆ.

ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ನಡೆಸದಿರಲು ನಿರ್ಧಾರ ಮಾಡಿದ್ದೇವೆ. ಪರೀಕ್ಷೆ ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಟ್ವಿಟರ್​ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ. ಪರೀಕ್ಷೆ ಬಗ್ಗೆ ಸಮಾಲೋಚನೆ ನಂತರ ಹೀಗೆ ತೀರ್ಮಾನಿಸಿದ್ದೇವೆ. ನಾವು ವಿದ್ಯಾರ್ಥಿ ಸ್ನೇಹಿ ತೀರ್ಮಾನ ಕೈಗೊಂಡಿದ್ದೇವೆ. ಇದು ನಮ್ಮ ಯುವಕರ ಆರೋಗ್ಯ, ಭವಿಷ್ಯ ಕಾಪಾಡುತ್ತೆ ಎಂದು ಪರೀಕ್ಷೆ ರದ್ದುಗೊಳಿಸಿರುವ ಕುರಿತು ಪ್ರಧಾನಮಂತ್ರಿ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: CBSE 12th Board Exam 2021: 12 ನೇ ತರಗತಿಯ ಸಿಬಿಎಸ್‌ಇ, ಸಿಐಎಸ್‌ಸಿಇ ಪರೀಕ್ಷೆ ರದ್ದು: ಪ್ರಧಾನಿ ಮೋದಿ

Vatal Nagraj : ಪರೀಕ್ಷೆ ನಡೆಸದಂತೆ ಆಗ್ರಹಿಸಿ ವಾಟಾಳ್ ನಾಗರಾಜ್ ಧರಣಿ…

Published On - 9:10 pm, Tue, 1 June 21

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ