AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಫೋಟೋವನ್ನೂ ಸಹಿಸಿಕೊಳ್ಳಲಾಗದಷ್ಟು ಅಸಹಿಷ್ಣುತೆಯನ್ನು ನಾಗರಿಕರು ತೋರಬಾರದು; ಕೇರಳ ಹೈಕೋರ್ಟ್​

ಹೈಕೋರ್ಟ್​ ಏಕಸದಸ್ಯ ಪೀಠ ಅರ್ಜಿ ತಿರಸ್ಕರಿಸಿದ ಬೆನ್ನಲ್ಲೇ ಅದನ್ನು ಪ್ರಶ್ನಿಸಿ ಮತ್ತು ಸರ್ಟಿಫಿಕೇಟ್​ನಿಂದ ಮೋದಿಯವರ ಫೋಟೋ ತೆಗೆಯಬೇಕು ಎಂದು ಮನವಿ ಮಾಡಿ ಮತ್ತೊಮ್ಮೆ ಪೀಟರ್​ ಅರ್ಜಿ ಸಲ್ಲಿಸಿದ್ದರು.

ಪ್ರಧಾನಿ ಮೋದಿ ಫೋಟೋವನ್ನೂ ಸಹಿಸಿಕೊಳ್ಳಲಾಗದಷ್ಟು ಅಸಹಿಷ್ಣುತೆಯನ್ನು ನಾಗರಿಕರು ತೋರಬಾರದು; ಕೇರಳ ಹೈಕೋರ್ಟ್​
ಕೇರಳ ಹೈಕೋರ್ಟ್​
TV9 Web
| Updated By: Lakshmi Hegde|

Updated on:Feb 06, 2022 | 8:36 AM

Share

ತಿರುವನಂತಪುರಂ: ಕೊವಿಡ್ 19 ಸರ್ಟಿಫಿಕೇಟ್​​ನಿಂದ ಪ್ರಧಾನಿ ನರೇಂದ್ರ ಮೋದಿ ಫೋಟೋ ತೆಗೆಯಬೇಕು ಎಂದು ಸಲ್ಲಿಸಲಾದ ಅರ್ಜಿಯನ್ನು ತಿರಸ್ಕರಿಸಿದ ಕೇರಳ ಹೈಕೋರ್ಟ್( Kerala High Court)​, ಕೊರೊನಾ ಲಸಿಕೆ ಪ್ರಮಾಣಪತ್ರ(COVID-19 Vaccination Certificates)ದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಫೋಟೋವನ್ನೂ ತಡೆದುಕೊಳ್ಳಲು ಸಾಧ್ಯವಿಲ್ಲ ಎನ್ನುವಷ್ಟರ ಮಟ್ಟಿಗೆ ನಾಗರಿಕರು ಅಸಹಿಷ್ಣುತೆ ತೋರಿಸಬಾರದು ಎಂದು ಹೇಳಿದೆ.  2021ರ ಡಿಸೆಂಬರ್​​ನಲ್ಲಿ ಪೀಟರ್​ ಮೈಲಿಪರಂಪಿ ಎಂಬುವರೊಬ್ಬರು, ಪ್ರಧಾನಿ ಮೋದಿ ಫೋಟೋವನ್ನು ಸರ್ಟಿಫಿಕೇಟ್​​ನಿಂದ ತೆಗೆಯಲು ಆದೇಶಿಸಬೇಕು.  ಕೊವಿಡ್​ 19 ಸರ್ಟಿಫಿಕೇಟ್​ ಮೇಲೆ ಪ್ರಧಾನಿಯವರ ಫೋಟೋ ಹಾಕಿದ್ದರ ಹಿಂದೆ ದುರುದ್ದೇಶಪೂರಿತ ಮತ್ತು ಕ್ಷುಲ್ಲಕವೆನ್ನಿಸುವ ಕಾರಣಗಳು ಇವೆ ಎಂದು ಹೇಳಿದ್ದರು. ಆಗ ಹೈಕೋರ್ಟ್​​ನ ಏಕಸದಸ್ಯ ಪೀಠ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಅರ್ಜಿದಾರರು ರಾಜಕೀಯ ಕಾರಣಕ್ಕೆ ಇಂಥ ಮನವಿ ಸಲ್ಲಿಸುತ್ತಿದ್ದಾರೆ ಎನ್ನಿಸುತ್ತಿದೆ ಎಂದು ಹೇಳಿದ್ದ ಜಡ್ಜ್​, ಅರ್ಜಿದಾರ ಪೀಟರ್​ಗೆ 1 ಲಕ್ಷ ರೂಪಾಯಿ ದಂಡ ವಿಧಿಸಿದ್ದರು. 

ಹೈಕೋರ್ಟ್​ ಏಕಸದಸ್ಯ ಪೀಠ ಅರ್ಜಿ ತಿರಸ್ಕರಿಸಿದ ಬೆನ್ನಲ್ಲೇ ಅದನ್ನು ಪ್ರಶ್ನಿಸಿ ಮತ್ತು ಸರ್ಟಿಫಿಕೇಟ್​ನಿಂದ ಮೋದಿಯವರ ಫೋಟೋ ತೆಗೆಯಬೇಕು ಎಂದು ಮನವಿ ಮಾಡಿ ಮತ್ತೊಮ್ಮೆ ಪೀಟರ್​ ಅರ್ಜಿ ಸಲ್ಲಿಸಿದ್ದಾರೆ. ಅದನ್ನೀಗ ಕೇರಳ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎಸ್​.ಮಣಿಕುಮಾರ್​ ಮತ್ತು ನ್ಯಾಯಮೂರ್ತಿ ಶಾಜಿ ಪಿ ಚಲೆ ಅವರನ್ನೊಳಗೊಂಡ ಪೀಠ ತಿರಸ್ಕರಿಸಿದೆ. ಭಾರತದ ಪ್ರಧಾನಮಂತ್ರಿ ಅದಾಗಲೇ ಈ ದೇಶದ ಪ್ರಧಾನಿ ಕಾರ್ಯಾಲಯದಲ್ಲಿ ಕುಳಿತವರು. ಅವರಿಗೆ ಅದಕ್ಕಿಂತಲೂ ದೊಡ್ಡ ಆಕರ್ಷಣೆ ಇನ್ನೇನು ಬೇಕು? ಜಾಹಿರಾತು ಕೊಟ್ಟು ನಾಗರಿಕರ ಗಮನ ಸೆಳೆಯುವ ಅಗತ್ಯವಾದರೂ ಏನಿರುತ್ತದೆ ಎಂದು ಹೈಕೋರ್ಟ್ ಪ್ರಶ್ನಿಸಿದೆ. ಚುನಾವಣೆಯಲ್ಲಿ ಮತದಾರರನ್ನು ಸೆಳೆಯುವ ಯತ್ನ ಎಂಬ ಮಾತುಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದೂ ಹೇಳಿದೆ.

ಈ ಲಸಿಕೆ ಪ್ರಮಾಣ ಪತ್ರದಲ್ಲಿನ ಶಾಸನಗಳು, ಛಾಯಾಚಿತ್ರಗಳನ್ನು ನಾಗರಿಕರನ್ನು ಲಸಿಕೆಯತ್ತ ಆಕರ್ಷಿಸುವ ಉದ್ದೇಶದಿಂದ ಮಾಡಲಾಗಿದೆ ಹೊರತು ಚುನಾವಣಾ ಕಾರಣಕ್ಕಲ್ಲ. ಇವು ಯಾವ ಕಾರಣಕ್ಕೂ ನಾಗರಿಕರ ಮೂಲಭೂತ ಹಕ್ಕುಗಳಿಗೆ ಅಡ್ಡಿಯಾಗುವುದಿಲ್ಲ ಎಂದೂ ಕೋರ್ಟ್ ಸ್ಪಷ್ಟಪಡಿಸಿದೆ. ಕೊವಿಡ್ 19 ಲಸಿಕೆ ಪಡೆದ ಬಳಿಕವೂ, ಕೊರೊನಾ ನಿಯಂತ್ರಣ ಕ್ರಮಗಳನ್ನು ಸರಿಯಾಗಿ ಪಾಲನೆ ಮಾಡುವಂತೆ ಜನರನ್ನು ಪ್ರೋತ್ಸಾಹಿಸುವ ಸಲುವಾಗಿ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿಯವರ ಫೋಟೋ ಹಾಕಲಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿದ್ದರೂ ಕೂಡ, ಪ್ರತಿಪಕ್ಷಗಳು ಇದನ್ನು ತೀವ್ರವಾಗಿ ವಿರೋಧಿಸುತ್ತಿವೆ. ಇದು ಚುನಾವಣೆಗಾಗಿ ಮಾಡುತ್ತಿರುವ ಗಿಮಿಕ್​, ಪ್ರಚಾರದ ಕ್ರಮ ಎಂದು ಹೇಳಿವೆ.

ಇದನ್ನೂ ಓದಿ: ದಂಡ ಕಟ್ಟುವಂತೆ ಹೇಳಿದಕ್ಕೆ ASI ಕಾಲರ್ ಹಿಡಿದು ಹಲ್ಲೆಗೆ ಯತ್ನಿಸಿದ ವ್ಯಕ್ತಿ; ಠಾಣೆಯಲ್ಲಿ ಕೇಸ್ ದಾಖಲು

Published On - 8:35 am, Sun, 6 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ