AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಫೋಟೋವನ್ನೂ ಸಹಿಸಿಕೊಳ್ಳಲಾಗದಷ್ಟು ಅಸಹಿಷ್ಣುತೆಯನ್ನು ನಾಗರಿಕರು ತೋರಬಾರದು; ಕೇರಳ ಹೈಕೋರ್ಟ್​

ಹೈಕೋರ್ಟ್​ ಏಕಸದಸ್ಯ ಪೀಠ ಅರ್ಜಿ ತಿರಸ್ಕರಿಸಿದ ಬೆನ್ನಲ್ಲೇ ಅದನ್ನು ಪ್ರಶ್ನಿಸಿ ಮತ್ತು ಸರ್ಟಿಫಿಕೇಟ್​ನಿಂದ ಮೋದಿಯವರ ಫೋಟೋ ತೆಗೆಯಬೇಕು ಎಂದು ಮನವಿ ಮಾಡಿ ಮತ್ತೊಮ್ಮೆ ಪೀಟರ್​ ಅರ್ಜಿ ಸಲ್ಲಿಸಿದ್ದರು.

ಪ್ರಧಾನಿ ಮೋದಿ ಫೋಟೋವನ್ನೂ ಸಹಿಸಿಕೊಳ್ಳಲಾಗದಷ್ಟು ಅಸಹಿಷ್ಣುತೆಯನ್ನು ನಾಗರಿಕರು ತೋರಬಾರದು; ಕೇರಳ ಹೈಕೋರ್ಟ್​
ಕೇರಳ ಹೈಕೋರ್ಟ್​
Follow us
TV9 Web
| Updated By: Lakshmi Hegde

Updated on:Feb 06, 2022 | 8:36 AM

ತಿರುವನಂತಪುರಂ: ಕೊವಿಡ್ 19 ಸರ್ಟಿಫಿಕೇಟ್​​ನಿಂದ ಪ್ರಧಾನಿ ನರೇಂದ್ರ ಮೋದಿ ಫೋಟೋ ತೆಗೆಯಬೇಕು ಎಂದು ಸಲ್ಲಿಸಲಾದ ಅರ್ಜಿಯನ್ನು ತಿರಸ್ಕರಿಸಿದ ಕೇರಳ ಹೈಕೋರ್ಟ್( Kerala High Court)​, ಕೊರೊನಾ ಲಸಿಕೆ ಪ್ರಮಾಣಪತ್ರ(COVID-19 Vaccination Certificates)ದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಫೋಟೋವನ್ನೂ ತಡೆದುಕೊಳ್ಳಲು ಸಾಧ್ಯವಿಲ್ಲ ಎನ್ನುವಷ್ಟರ ಮಟ್ಟಿಗೆ ನಾಗರಿಕರು ಅಸಹಿಷ್ಣುತೆ ತೋರಿಸಬಾರದು ಎಂದು ಹೇಳಿದೆ.  2021ರ ಡಿಸೆಂಬರ್​​ನಲ್ಲಿ ಪೀಟರ್​ ಮೈಲಿಪರಂಪಿ ಎಂಬುವರೊಬ್ಬರು, ಪ್ರಧಾನಿ ಮೋದಿ ಫೋಟೋವನ್ನು ಸರ್ಟಿಫಿಕೇಟ್​​ನಿಂದ ತೆಗೆಯಲು ಆದೇಶಿಸಬೇಕು.  ಕೊವಿಡ್​ 19 ಸರ್ಟಿಫಿಕೇಟ್​ ಮೇಲೆ ಪ್ರಧಾನಿಯವರ ಫೋಟೋ ಹಾಕಿದ್ದರ ಹಿಂದೆ ದುರುದ್ದೇಶಪೂರಿತ ಮತ್ತು ಕ್ಷುಲ್ಲಕವೆನ್ನಿಸುವ ಕಾರಣಗಳು ಇವೆ ಎಂದು ಹೇಳಿದ್ದರು. ಆಗ ಹೈಕೋರ್ಟ್​​ನ ಏಕಸದಸ್ಯ ಪೀಠ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಅರ್ಜಿದಾರರು ರಾಜಕೀಯ ಕಾರಣಕ್ಕೆ ಇಂಥ ಮನವಿ ಸಲ್ಲಿಸುತ್ತಿದ್ದಾರೆ ಎನ್ನಿಸುತ್ತಿದೆ ಎಂದು ಹೇಳಿದ್ದ ಜಡ್ಜ್​, ಅರ್ಜಿದಾರ ಪೀಟರ್​ಗೆ 1 ಲಕ್ಷ ರೂಪಾಯಿ ದಂಡ ವಿಧಿಸಿದ್ದರು. 

ಹೈಕೋರ್ಟ್​ ಏಕಸದಸ್ಯ ಪೀಠ ಅರ್ಜಿ ತಿರಸ್ಕರಿಸಿದ ಬೆನ್ನಲ್ಲೇ ಅದನ್ನು ಪ್ರಶ್ನಿಸಿ ಮತ್ತು ಸರ್ಟಿಫಿಕೇಟ್​ನಿಂದ ಮೋದಿಯವರ ಫೋಟೋ ತೆಗೆಯಬೇಕು ಎಂದು ಮನವಿ ಮಾಡಿ ಮತ್ತೊಮ್ಮೆ ಪೀಟರ್​ ಅರ್ಜಿ ಸಲ್ಲಿಸಿದ್ದಾರೆ. ಅದನ್ನೀಗ ಕೇರಳ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎಸ್​.ಮಣಿಕುಮಾರ್​ ಮತ್ತು ನ್ಯಾಯಮೂರ್ತಿ ಶಾಜಿ ಪಿ ಚಲೆ ಅವರನ್ನೊಳಗೊಂಡ ಪೀಠ ತಿರಸ್ಕರಿಸಿದೆ. ಭಾರತದ ಪ್ರಧಾನಮಂತ್ರಿ ಅದಾಗಲೇ ಈ ದೇಶದ ಪ್ರಧಾನಿ ಕಾರ್ಯಾಲಯದಲ್ಲಿ ಕುಳಿತವರು. ಅವರಿಗೆ ಅದಕ್ಕಿಂತಲೂ ದೊಡ್ಡ ಆಕರ್ಷಣೆ ಇನ್ನೇನು ಬೇಕು? ಜಾಹಿರಾತು ಕೊಟ್ಟು ನಾಗರಿಕರ ಗಮನ ಸೆಳೆಯುವ ಅಗತ್ಯವಾದರೂ ಏನಿರುತ್ತದೆ ಎಂದು ಹೈಕೋರ್ಟ್ ಪ್ರಶ್ನಿಸಿದೆ. ಚುನಾವಣೆಯಲ್ಲಿ ಮತದಾರರನ್ನು ಸೆಳೆಯುವ ಯತ್ನ ಎಂಬ ಮಾತುಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದೂ ಹೇಳಿದೆ.

ಈ ಲಸಿಕೆ ಪ್ರಮಾಣ ಪತ್ರದಲ್ಲಿನ ಶಾಸನಗಳು, ಛಾಯಾಚಿತ್ರಗಳನ್ನು ನಾಗರಿಕರನ್ನು ಲಸಿಕೆಯತ್ತ ಆಕರ್ಷಿಸುವ ಉದ್ದೇಶದಿಂದ ಮಾಡಲಾಗಿದೆ ಹೊರತು ಚುನಾವಣಾ ಕಾರಣಕ್ಕಲ್ಲ. ಇವು ಯಾವ ಕಾರಣಕ್ಕೂ ನಾಗರಿಕರ ಮೂಲಭೂತ ಹಕ್ಕುಗಳಿಗೆ ಅಡ್ಡಿಯಾಗುವುದಿಲ್ಲ ಎಂದೂ ಕೋರ್ಟ್ ಸ್ಪಷ್ಟಪಡಿಸಿದೆ. ಕೊವಿಡ್ 19 ಲಸಿಕೆ ಪಡೆದ ಬಳಿಕವೂ, ಕೊರೊನಾ ನಿಯಂತ್ರಣ ಕ್ರಮಗಳನ್ನು ಸರಿಯಾಗಿ ಪಾಲನೆ ಮಾಡುವಂತೆ ಜನರನ್ನು ಪ್ರೋತ್ಸಾಹಿಸುವ ಸಲುವಾಗಿ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿಯವರ ಫೋಟೋ ಹಾಕಲಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿದ್ದರೂ ಕೂಡ, ಪ್ರತಿಪಕ್ಷಗಳು ಇದನ್ನು ತೀವ್ರವಾಗಿ ವಿರೋಧಿಸುತ್ತಿವೆ. ಇದು ಚುನಾವಣೆಗಾಗಿ ಮಾಡುತ್ತಿರುವ ಗಿಮಿಕ್​, ಪ್ರಚಾರದ ಕ್ರಮ ಎಂದು ಹೇಳಿವೆ.

ಇದನ್ನೂ ಓದಿ: ದಂಡ ಕಟ್ಟುವಂತೆ ಹೇಳಿದಕ್ಕೆ ASI ಕಾಲರ್ ಹಿಡಿದು ಹಲ್ಲೆಗೆ ಯತ್ನಿಸಿದ ವ್ಯಕ್ತಿ; ಠಾಣೆಯಲ್ಲಿ ಕೇಸ್ ದಾಖಲು

Published On - 8:35 am, Sun, 6 February 22

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ